Ripponpete

ಶಿವಮೊಗ್ಗ-ಹೊಸನಗರ ರಾಜ್ಯ ಹೆದ್ದಾರಿ ದುಸ್ಥಿತಿ | ವಾಹನ ಸವಾರರೇ ಇಲ್ಲಿ ಸ್ವಲ್ಪ ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ !

RIPPONPETE ; ರಾಜ್ಯ ಹೆದ್ದಾರಿ 26ರಲ್ಲಿನ ಶಿವಮೊಗ್ಗ – ಕೊಲ್ಲೂರು – ಭಟ್ಕಳ ಮಾರ್ಗದ ರಿಪ್ಪನ್‌ಪೇಟೆ ಪೆಟ್ರೋಲ್ ಬಂಕ್ ಬಳಿ ಲೋಕೋಪಯೋಗಿ ಇಲಾಖೆಯ ರಸ್ತೆಯಂಚಿನಲ್ಲಿ ಆಳ ಉದ್ದದ ಬೃಹತ್ ಗಾತ್ರದ ಹೊಂಡ ಬಿದ್ದು ಅಪಾಯವನ್ನು ಆಹ್ವಾನಿಸುವತ್ತಾಗಿದ್ದರೂ ಕೂಡಾ ಇಲಾಖೆಯವರು ಗಮನಹರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆಂದು ಸಾಮಾಜಿಕ ಹೋರಾಟಗಾರ ರೈತ ಮುಖಂಡ ಮುಡುಬ ಧರ್ಮಪ್ಪ ಆರೋಪಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ರಾಜ್ಯ ಹೆದ್ದಾರಿ ಈ ರಸ್ತೆ ಕಿರಿದಾಗಿದ್ದು ದೊಡ್ಡ ವಾಹನಗಳು ಎದುರು ಭಾಗದಿಂದ ಬಂದರೆ ಸೈಡ್ ಕೊಡಲು ಹೋದರೆ ವಾಹನ ಸವಾರರ ಜೀವಹಾನಿ ಗ್ಯಾರಂಟಿ ಅದರೂ ಕೂಡಾ ಜನಪ್ರತಿನಿಧಗಳಾಗಲಿ, ಅಧಿಕಾರಿಗಳಾಗಲಿ ಕಣ್ಣಿದ್ದು ಕುರುಡರಂತಾಗಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

ನಿತ್ಯ ಈ ಮಾರ್ಗದಲ್ಲಿ ನೂರಾರು ವಾಹನಗಳು ಓಡಾಡುತ್ತಿದ್ದು ದ್ವಿಚಕ್ರ ವಾಹನ ಸವಾರರು ಸಾಕಷ್ಟು ಜನ ಆಕಸ್ಮಿಕವಾಗಿ ಗೊತ್ತಾಗದೇ ಹೊಂಡಕ್ಕೆ ಬಿದ್ದು ಕೈ ಕಾಲು ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಲ್ಲದೆ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ರಸ್ತೆಯಂಚಿನಲ್ಲಿ ಬಿದ್ದಿರುವ ಬೃಹತ್ ಗಾತ್ರದ ಹೊಂಡದಲ್ಲಿ ರಾಜಕಾಲುವೆಯ ನೀರು ತುಂಬಿಕೊಂಡಿದ್ದು ಗೊತ್ತಾಗದೇ ಯಾರಾದರೂ ವಾಹನಗಳಿಗೆ ಸೈಡ್ ಬಿಡಲು ಹೋದರೆ ಸಾಕು ಹೊಂಡಕ್ಕೆ ಬಿದ್ದು ಸಾವನ್ನಪ್ಪುವುದರಲ್ಲಿ ಸಂದೇಹವೇ ಇಲ್ಲ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇನ್ನಾದರೂ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯವರು ಇತ್ತ ಗಮನಹರಿಸಿ ಮುಂದಾಗಬಹುದಾದ ಅನಾಹುತವನ್ನು ತಪ್ಪಿಸುವತ್ತಾ ಮುಂದಾಗುವರೇ ಕಾದುನೋಡಬೇಕಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]