SHIVAMOGGA | ಶಿವಮೊಗ್ಗ ನಗರ ಹಾಗೂ ಆನವಟ್ಟಿಯಲ್ಲಿ ಬೃಹತ್ ಪ್ರಮಾಣದ ಶೀತಲೀಕರಣ ಘಟಕ ಹಾಗೂ ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ಸುಮಾರು ನೂರು ಎಕರೆ ವಿಸ್ತೀರ್ಣದಲ್ಲಿ ಆಹಾರ ಸಂಸ್ಕರಣ ಘಟಕವನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.
Anna Bhagya: ಇನ್ನು ಮುಂದೆ ಸಿಗುವುದಿಲ್ಲ ಅನ್ನಭಾಗ್ಯ ಹಣ, ಬದಲಾಗಲಿದೆ ನಿಯಮ !
ಅವರು ಇಂದು ಜಿಲ್ಲಾಡಳಿತ ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜಿಸಲಾಗಿದ್ದ 78ನೇ ಸ್ವಾತಂತ್ರ್ಯೋತ್ಸವ ದಿನದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.
ಗ್ಯಾರಂಟಿ ಯೋಜನೆಗಳು ಜನರ ನೆಮ್ಮದಿಯ ಬದುಕಿಗೆ ಆಸರೆ :
ಆಡಳಿತರೂಢ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ ಘೋಷಣೆಯಂತೆ ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ಪರಿಷ್ಕರಣೆ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ವಿಶೇಷ ಗಮನಹರಿಸಿತ್ತು. ಪ್ರಶಸ್ತ ಸಾಲಿನಿಂದ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಜೊತೆಗೆ ಜಿಲ್ಲೆಯ ತುರ್ತು ಅಗತ್ಯ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಗಮನಹರಿಸಲಿದೆ ಎಂದ ಅವರು, ಗ್ಯಾರಂಟಿ ಯೋಜನೆಗಳು ಜನರ ನೆಮ್ಮದಿಯ ಬದುಕಿಗೆ ಆಸರೆಯಾಗಿವೆ ಅವುಗಳು ದುರ್ಬಳಕೆಯಾಗದಂತೆ ಜನರು ಗಮನಹರಿಸಬೇಕು ಎಂದವರು ನುಡಿದರು.
ರೈತರಲ್ಲಿ ಮಂದಹಾಸ :

ಪ್ರಸಕ್ತ ಸಾಲಿನ ಮುಂಗಾರಿನಿಂದಾಗಿ ಎಲ್ಲಾ ಜಲಾಶಯಗಳು, ಕೆರೆ-ಕಟ್ಟೆ- ಕಾಲುವೆಗಳು ತುಂಬಿ ತುಳುಕುತ್ತಿವೆ. ಕೃಷಿ ಚಟುವಟಿಕೆಗಳು ಎಂದಿನಂತೆ ಸಾಗಿವೆ ರೈತರಲ್ಲಿ ಸಹಜವಾಗಿ ಮಂದಹಾಸ ಮೂಡಿದೆ ಎಂದು ಅವರು ರಾಜ್ಯದ ಎಲ್ಲಾ ಜಲಾಶಯಗಳ ನಿರ್ವಹಣೆ ಮತ್ತು ದುರಸ್ತಿಗಾಗಿ ಸರ್ಕಾರ ವಿಶೇಷ ಗಮನಹರಿಸಲಿದೆ ಎಂದವರು ನುಡಿದರು.
MGNREGA ಪಶು ಶೆಡ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ, ಮಾನದಂಡಗಳೇನು ಇಲ್ಲಿದೆ ಮಾಹಿತಿ
ರೈತರನ್ನು ಒಕ್ಕಲೆಬ್ಬಿಸದಂತೆ ಸೂಚನೆ :
ಜಿಲ್ಲೆಯ ಬಹು ದಿನಗಳ ಸಮಸ್ಯೆಯಾಗಿರುವ ಶರಾವತಿ ಸಂತ್ರಸ್ಥರು, ಬಗರ್ ಹುಕುಂ ಸಾಗುವಳಿದಾರರುಹಾಗೂ ಚಕ್ರ ವರಾಹಿ ಸಾವೇಹಕ್ಲು ಸೇರಿದಂತೆ ಸರ್ಕಾರದ ವಿವಿಧ ನೀರಾವರಿ ಯೋಜನೆಗಳಿಗಾಗಿ ಮನೆ ಆಸ್ತಿ ಎಲ್ಲವನ್ನು ಕಳೆದುಕೊಂಡವರ ಸಮಸ್ಯೆಗೆ ಶಾಶ್ವತ ಪರಿಹಾರ ಕೊಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿ ಸರ್ಕಾರ ವಿಶೇಷ ನಡವಳಿಯನ್ನು ಅನುಮೋದಿಸಿದೆ ಅಲ್ಲದೆ ಅರಣ್ಯ ವಾಸಿಗಳಾಗಿ ಬದುಕು ಕಟ್ಟಿಕೊಂಡಿರುವವರ ಹಿತ ರಕ್ಷಣೆಗೆ ಹಾಗೂ ಅವರನ್ನು ಒಕ್ಕಲಿಬ್ಬಿಸದಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ. 2015ರ ನಂತರ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವ ರಕ್ಷಣೆ ಮಾಡದು ಸಾಧ್ಯವಾಗದು ಎಂದ ಅವರು ಈ ಸಂಬಂಧ ಸುಪ್ರೀಂಕೋರ್ಟಿನಲ್ಲಿ ಮೊಕದ್ದಮೆ ದಾಖಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ನಿರ್ದೇಶನ ಹಾಗೂ ಸಲಹೆಯಂತೆ ಕಾರ್ಯನಿರ್ವಹಣೆ ನಡೆಯಲಿದೆ ಎಂದರು.
ಜಿಲ್ಲಾ ಮಟ್ಟದಲ್ಲಿ ಉಸ್ತುವಾರಿ ಸಮಿತಿ ರಚನೆ :
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ನ್ಯೂನ್ಯತೆಗಳ ಸಮರ್ಪಕ ನಿರ್ವಹಣೆಗಾಗಿ ಜಿಲ್ಲಾಮಟ್ಟದಲ್ಲಿ ಉಸ್ತುವಾರಿ ಸಮಿತಿಯನ್ನು ರಚಿಸಲಾಗಿದೆ ಒಂದು ಅಂದಾಜಿನ ಪ್ರಕಾರ ಪ್ರತಿ ಗ್ರಾಮ ಪಂಚಾಯಿತಿಗೆ ಸುಮಾರು 9 ಕೋಟಿ ರೂ.ಗಳ ವಾರ್ಷಿಕ ಅನುದಾನ ವ್ಯಯ ಮಾಡಲಾಗುತ್ತಿದೆ ಎಂದರು.
ವಾರದ 06 ದಿನ ಮೊಟ್ಟೆ :
ಅಜೀಂ ಪ್ರೇಮ್ ಜಿ ಫೌಂಡೇಶನ್ ನ ಸಹಯೋಗದೊಂದಿಗೆ ಸೆಪ್ಟೆಂಬರ್ 5 ರಿಂದ ರಾಜ್ಯಾದ್ಯಂತ ರಾಜ್ಯದ 56 ಲಕ್ಷ ಮಕ್ಕಳಿಗೆ ವಾರದ ಆರು ದಿನಗಳ ಕಾಲ ಮೊಟ್ಟೆ, ಚಿಕ್ಕಿ ಮತ್ತು ಬಾಳೆಹಣ್ಣು ವಿತರಿಸಲು ಕ್ರಮವಹಿಸಲಾಗಿದೆ ಅದಕ್ಕಾಗಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ ನಿಂದ ಸುಮಾರು 1500 ಕೋಟಿ ರೂಪಾಯಿಗಳ ಆರ್ಥಿಕ ನೆರವು ದೊರೆಯಲಿದೆ ಎಂದರು.
ಸೆ. 1 ರಿಂದ ಬ್ಲಾಕ್ ಲಿಸ್ಟ್ ಆಗಲಿದೆ ನಿಮ್ಮ ಈ ಸಿಮ್ ಕಾರ್ಡ್ :TRAI ನ ಹೊಸ ನಿಯಮ
ಸರ್ಕಾರಿ ಶಾಲೆಗಳ ಸರ್ವಾಂಗೀಣ ವಿಕಾಸಕ್ಕೆ ಸಹಕರಿಸಿ :
ಈ ಹಿಂದೆ ಸರ್ಕಾರಿ ಶಾಲೆಗಳಲ್ಲಿ ಓದಿದ್ದು, ಪ್ರಸ್ತುತ ಸಂದರ್ಭದಲ್ಲಿ ಉನ್ನತ ಸ್ಥಾನದಲ್ಲಿದ್ದು ಉತ್ತಮ ಜೀವನ ನಿರ್ವಹಣೆ ಮಾಡುತ್ತಿರುವ ಅಧಿಕಾರಿಗಳು ಹಾಗೂ ಗಣ್ಯರು ತಾವು ಓದಿದ ಶಾಲೆಗೆ ಏನನ್ನಾದರೂ ಕೊಡುಗೆ ನೀಡುವ ಮೂಲಕ ಶಾಲೆಯ ಸರ್ವ ಸರ್ವಾಂಗಿನ ವಿಕಾಸಕ್ಕೆ ಸಹಕರಿಸುವಂತೆ ಸಚಿವರು ಮನವಿ ಮಾಡಿದರು.
ಶಿಕ್ಷಕರ ಭರ್ತಿಗೆ ಕ್ರಮ :
ರಾಜ್ಯದಲಿನ ಸರ್ಕಾರಿ ಶಾಲೆಗಳಲ್ಲಿನ ಕೊರತೆ ಇರುವ ಶಿಕ್ಷಕರ ಭರ್ತಿಗೆ ಕ್ರಮ ವಹಿಸಲಾಗಿದ್ದು ಈಗಾಗಲೇ 12 ಸಾವಿರ ಶಿಕ್ಷಕರನ್ನು ನೇಮಿಸಲಾಗಿದೆ. ಹತ್ತು ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಕ್ಕೂ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದರು.
ಮಕ್ಕಳನ್ನು ಸತ್ಪ್ರಜೆಗಳಾಗಿ ರೂಪಿಸಿ :
ಮಕ್ಕಳ ಪಠ್ಯಪುಸ್ತಕ ಹೊರೆಯನ್ನು ಕಡಿಮೆ ಮಾಡಲು, ಎಸ್ ಎಸ್ ಎಲ್ ಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆ ತರಲು ಪೂರಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಪರೀಕ್ಷೆಗಳನ್ನು ಪಾರದರ್ಶಕ ರೀತಿಯಲ್ಲಿ ನಡೆಸಲಾಗುತ್ತಿದೆ. ಸರ್ಕಾರಿ ಶಾಲೆಗಳ ಸರ್ವಾಂಗೀಣ ವಿಕಾಸದ ಜೊತೆಗೆ ಸರ್ಕಾರಿ ಶಾಲೆಗೆ ಹೆಚ್ಚಿನ ಮಕ್ಕಳು ದಾಖಲಾಗುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸಲು ಮುಂದಾಗುವಂತೆ ಹಾಗೂ ತಮ್ಮ ಮಕ್ಕಳನ್ನು ಸತ್ಪ್ರಜೆಗಳಾಗಿ ರೂಪಿಸುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಕನ್ನಡ ಮತ್ತು ಆಂಗ್ಲ ಮಾಧ್ಯಮದ ಶಾಲೆ ಆರಂಭ :
ಮುಂದಿನ ಶೈಕ್ಷಣಿಕ ಸಾಲಿನಿಂದ ಅನ್ವಯಗೊಳ್ಳುವಂತೆ ರಾಜ್ಯದ ಸುಮಾರು 25 ಸಾವಿರ ಮಕ್ಕಳಿಗೆ ನೀಟ್ ಮತ್ತಿತರ ಪರೀಕ್ಷೆಗಳಿಗೆ ಸಹಕಾರಿಯಾಗುವಂತೆ ಶಿಕ್ಷಣ ತರಬೇತಿಗಳನ್ನು ಸರ್ಕಾರದ ವತಿಯಿಂದಲೇ ನಡೆಸಲು ಉದ್ದೇಶಿಸಲಾಗಿದೆ ರಾಜ್ಯದಾದ್ಯಂತ ಸಾವಿರದ 800 ಎಲ್ ಕೆ ಜಿ ಯು ಕೆ ಜಿ ತರಗತಿಗಳನ್ನು ಆರಂಭಿಸಿ 36,000 ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಾಗಿದೆ. 1700 ಕನ್ನಡ ಮತ್ತು ಆಂಗ್ಲ ಮಾಧ್ಯಮದ ಶಾಲೆಗಳನ್ನು ತೆರೆಯಲಾಗಿದೆ
ಎಂದರು.
ಜಿಯೋ VS ಏರ್ಟೆಲ್ : 249 ರೂ ರೀಚಾರ್ಜ್ ಮಾಡಿದರೆ ಯಾವುದು ಉತ್ತಮ
ಪ್ರಸ್ತುತ ಜೋಗದಲ್ಲಿ 1700 ಮೆಗಾ ವ್ಯಾಟ್ ವಿದ್ಯುತ್ ಉತ್ಪನ್ನ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎರಡು ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪನ್ನ ಮಾಡಲು ಅಗತ್ಯ ಯೋಜನೆ ರೂಪಿಸಲಾಗುತ್ತಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್ ಹೇಮಂತ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿಕೆ ಮಿತಲ್ ಕುಮಾರ್, ವಿಧಾನಪರಿಷತ್ ಸದಸ್ಯೆ ಶ್ರೀಮತಿ ಬಲ್ಕಿಶ್ ಬಾನು, ಜಿಲ್ಲಾ ಗ್ಯಾರೆಂಟಿ ಯೋಜನೆಗಳು ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
Author Profile

- ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.
Latest entries
HosanagaraJune 1, 2025ಹೊಸನಗರ ; ಜೂ. 2 ಮತ್ತು 3ಕ್ಕೆ ತಾಲೂಕಿನಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ 2025 ಕಾರ್ಯಕ್ರಮ
Adike RateJune 1, 2025Arecanut, Black Pepper Price 31 May 2025 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?
SagaraMay 31, 2025ಪತ್ರಕರ್ತನ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ; ಕ್ರಮಕ್ಕೆ ಒತ್ತಾಯ
RipponpeteMay 31, 2025ಜೂ. 4ಕ್ಕೆ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ