Shivamogga News

ಅಧಿವೇಶನವನ್ನು ಸರ್ಕಾರವೇ ಬಲಿ ಕೊಟ್ಟಿದೆ: ಶಾಸಕ ಚನ್ನಬಸಪ್ಪ ವಾಗ್ದಾಳಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ವರ್ಗಾವಣೆ ಪ್ರಕರಣ ಸೇರಿದಂತೆ ಜನರ ಪ್ರಮುಖ ಸಮಸ್ಯೆಗಳ ಚರ್ಚೆಗೆ ಅವಕಾಶ ನೀಡದೆ ಸರ್ಕಾರ ಅಧಿವೇಶನವನ್ನು ಮುಕ್ತಾಯಗೊಳಿಸಿದೆ ಎಂದು ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ಆರೋಪಿಸಿದ್ದಾರೆ.

ಮನೆ ಕಳೆದುಕೊಂಡ ಬಡವರಿಗೆ ಪರಿಹಾರ, ಪರ್ಯಾಯ ಮನೆ ಕಲ್ಪಿಸಿ: ಶಾಸಕ ಚನ್ನಬಸಪ್ಪ ಆಗ್ರಹ – mt channabasappa

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 15 ದಿನಗಳ ಕಾಲ ನಡೆಯಬೇಕಿದ್ದ ವಿಧಾನಸಭೆ ಅಧಿವೇಶನವನ್ನು ಕೇವಲ 7 ದಿನಗಳಿಗೆ ಸೀಮಿತಗೊಳಿಸಲಾಗಿದೆ. ನಿಗದಿತ ಅವಧಿಗಿಂತ ಎರಡು ದಿನ ಮುಂಚಿತವಾಗಿಯೇ ಅಧಿವೇಶನವನ್ನು ಮುಕ್ತಾಯಗೊಳಿಸುವ ಮೂಲಕ ಜನರ ಸಮಸ್ಯೆಗಳ ಚರ್ಚೆಗೆ ಸರ್ಕಾರ ಅವಕಾಶವೇ ನೀಡಲಿಲ್ಲ ಎಂದು ಆರೋಪಿಸಿದರು.

ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಸರ್ಕಾರದ ಭರವಸೆ ಹುಸಿಯಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಯಬೇಕು ಎಂದು ಅವರು ಒತ್ತಾಯಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಅಕ್ರಮ ವರ್ಗಾವಣೆ ಪ್ರಕರಣವನ್ನು ಪ್ರಸ್ತಾಪಿಸಿದ ಚನ್ನಬಸಪ್ಪ, ಈ ಪ್ರಕರಣದಿಂದ ಶಿವಮೊಗ್ಗದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಕುಟುಂಬ ಇಂದು ಸಂಕಷ್ಟದಲ್ಲಿದೆ ಎಂದು ಹೇಳಿದರು.

ಮಾರ್ಚ್ ತಿಂಗಳಲ್ಲಿ ಕೆಲವೇ ದಿನಗಳಲ್ಲಿ ₹25 ಕೋಟಿ, ₹50 ಕೋಟಿಯಂತೆ ದೊಡ್ಡ ಮೊತ್ತದ ಹಣ ಡ್ರಾ ಮಾಡಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲ್ಪಟ್ಟ ಮಾಜಿ ಸಚಿವ ನಾಗೇಂದ್ರ ಅವರನ್ನು ರಕ್ಷಿಸಲು ಸರ್ಕಾರವೇ ಮುಂದಾಗಿದೆ ಎಂದು ಚನ್ನಬಸಪ್ಪ ಆರೋಪಿಸಿದರು.

“ಒಬ್ಬ ವ್ಯಕ್ತಿಯನ್ನು ರಕ್ಷಿಸಲು ಇಡೀ ಅಧಿವೇಶನವನ್ನೇ ಬಲಿ ಕೊಡಲಾಗಿದೆ. ಭ್ರಷ್ಟಾಚಾರದ ವಿರುದ್ಧ ಉತ್ತರ ನೀಡುವ ಬದಲು ಸರ್ಕಾರ ಅಧಿವೇಶನವನ್ನು ಮುಕ್ತಾಯಗೊಳಿಸಿದೆ” ಎಂದು ಅವರು ಕಿಡಿಕಾರಿದರು.

ಸರ್ಕಾರದ ಆಡಳಿತವು “ಕಳ್ಳನ ಕೈಗೆ ಬೀಗದ ಕೈ ಕೊಟ್ಟಂತೆ” ಆಗಿದೆ ಎಂದು ಟೀಕಿಸಿದ ಅವರು, ಬರ ಪರಿಸ್ಥಿತಿ, ಕೆಪಿಎಸ್‌ಸಿ ಅಕ್ರಮ, ಯುವಜನರ ಸಮಸ್ಯೆಗಳು ಸೇರಿದಂತೆ ಹಲವು ತುರ್ತು ವಿಚಾರಗಳ ಬಗ್ಗೆ ಚರ್ಚೆಯಾಗಬೇಕಿತ್ತು. ಆದರೆ ಸರ್ಕಾರ ಅದಕ್ಕೆ ಅವಕಾಶ ನೀಡದೆ ಅಧಿವೇಶನ ಮುಗಿಸಿದೆ ಎಂದು ಹೇಳಿದರು.

ಜನರ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸುವುದಕ್ಕಿಂತ ಸರ್ಕಾರ ತನ್ನ ಮೇಲಿರುವ ಆರೋಪಗಳಿಂದ ತಪ್ಪಿಸಿಕೊಳ್ಳುವುದನ್ನೇ ಆದ್ಯತೆ ಮಾಡಿಕೊಂಡಿದೆ ಎಂದು ಶಾಸಕ ಚನ್ನಬಸಪ್ಪ ವಾಗ್ದಾಳಿ ನಡೆಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650