ಅಪಘಾತದಲ್ಲಿ ಗಾಯಗೊಂಡಿದ್ದ ಎಮ್ಮೆಗೆ ನೀರು ಕುಡಿಸಿ ಹಿಂದಿರುಗುತ್ತಿದ್ದಾಗ ನಡೆಯಿತು ಘೋರ ದುರಂತ ! ಮಹಿಳೆ ಸಾವು

0 1,819

ರಿಪ್ಪನ್‌ಪೇಟೆ : ಕಾರು ಡಿಕ್ಕಿಯಾಗಿ ಮಹಿಳೆಯೋರ್ವಳು ಮೃತಪಟ್ಟಿರುವ ಘಟನೆ ಇಲ್ಲಿನ ಬಾಳೂರು ಗ್ರಾಮದ ಸೇತುವೆ ಬಳಿ ನಡೆದಿದೆ.

ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ ನಿವಾಸಿ ನಾಗಮ್ಮ (46) ಮೃತಪಟ್ಟ ಮಹಿಳೆ. ಇವರು ಬಾಳೂರು ಸೇತುವೆ ಬಳಿಯ ಕ್ಯಾಂಪ್ ನಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಎಮ್ಮೆಗೆ ನೀರು ಕುಡಿಸಿ ಹಿಂತಿರುಗುತ್ತಿದ್ದರು !
ಬಾಳೂರು ಗ್ರಾಮದ ಸೇತುವೆ ಬಳಿ ಅಪರಿಚಿತ ವಾಹನವೊಂದು ರಸ್ತೆಯಲ್ಲಿದ್ದ ಎಮ್ಮೆಗೆ ಡಿಕ್ಕಿ ಹೊಡೆದಿತ್ತು. ಈ ಹಿನ್ನಲೆಯಲ್ಲಿ ಗಾಯಗೊಂಡಿದ್ದ ಎಮ್ಮೆಗೆ ನೀರು ಕುಡಿಸಲು ಬಂದ ಈಕೆ ಹಿಂದಿರುಗುವಾಗ ಮತ್ತೊಂದು ಕಾರು ಬಂದು ಮಹಿಳೆಗೆ ಡಿಕ್ಕಿಯಾಗಿದೆ.

ತಲೆಗೆ ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಸ್ಥಳೀಯರು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ 108 ನಲ್ಲಿ ಕಳಿಸಿಕೊಡಲಾಗಿತ್ತು. ಆದರೆ ಮಾರ್ಗಮಧ್ಯೆ ಮಹಿಳೆ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು ತೆರಳಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave A Reply

Your email address will not be published.

error: Content is protected !!