ಅರಣ್ಯಾಧಿಕಾರಿಗಳಿಂದ ಮನೆ ಮೇಲೆ ದಾಳಿ ; ಜಿಂಕೆ, ಕಾಡುಕೋಣದ ಕೊಂಬು ವಶಕ್ಕೆ ; ಗರಂ ಆದ ಆರಗ

ತೀರ್ಥಹಳ್ಳಿ : ಮನೆಯೊಂದರಲ್ಲಿ ಪುರಾತನ ಕಾಲದ ಜಿಂಕೆ ಕೊಂಬು ಹಾಗೂ ಕೋಣದ ಕೊಂಬುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು ಮನೆಯ ಯಜಮಾನನ್ನು ವಶಕ್ಕೆ ಪಡೆಯಲು ಮುಂದಾದ ಘಟನೆ ತಾಲೂಕಿನ ಹಣಗೆರೆ ಸಮೀಪದ ಬಸವನಗದ್ದೆಯಲ್ಲಿ ನಡೆದಿದೆ.

ಇಲ್ಲಿನ ಬ್ರಾಹ್ಮಣ ಕುಟುಂಬದ ಪ್ರಸನ್ನ ಎಂಬುವವರ ಮನೆಯಲ್ಲಿ ಸುಮಾರು ನೂರಾರು ವರ್ಷಗಳ ಹಿಂದಿನ ಅಲ್ಲದೆ ಕಾಡಿನಲ್ಲಿ ಸಿಕ್ಕಿದ ಜಿಂಕೆ ಕೊಂಬು ಹಾಗೂ ಕೋಣದ ಕೊಂಬುಗಳನ್ನು ಮನೆಯಲ್ಲಿ ಇಟ್ಟುಕೊಂಡಿದ್ದರು ಆದರೆ ಈ ವಿಚಾರ ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಬಂದಿದ್ದು ಇಂದು ಬೆಳಿಗ್ಗೆ ಮನೆಗೆ ಬಂದ ಅಧಿಕಾರಿಗಳ ತಂಡ ಮನೆಯಲ್ಲಿದ್ದ ಪುರಾತನ ಕಾಲದ ಜಿಂಕೆ ಕೊಂಬು, ಹಾಗೂ ಕಾಡುಕೋಣದ ಕೊಂಬನ್ನು ವಶಕ್ಕೆ ಪಡೆದುಕೊಂಡಿದ್ದಾರೆ, ಆ ಬಳಿಕ ಕೊಂಬುಗಳನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಕುಟುಂಬದಲ್ಲಿ ವಯಸ್ಸಾಗಿರುವ ಅನಾರೋಗ್ಯಕ್ಕೆ ಒಳಗಾಗಿದ್ದ ಯಜಮಾನನ್ನು ಬಂಧಿಸಲು ಮುಂದಾಗಿದ್ದಾರೆ.

ಆದರೆ ಈ ವಿಚಾರ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಗಮನಕ್ಕೆ ಬಂದಿದ್ದು ಕೂಡಲೇ ಘಟನಾ ಸ್ಥಳಕ್ಕೆ ದೌಡಾಯಿಸಿ ಅರಣ್ಯ ಅಧಿಕಾರಿಗಳ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮನೆಯ ಯಜಮಾನನ್ನು ಬಂಧಿಸುವುದಾದರೆ ಮೊದಲು ನನ್ನನ್ನು ಬಂಧಿಸಿ ಎಂದು ಗ್ರಾಮಸ್ಥರ ಜೊತೆ ಸೇರಿ ಅರಣ್ಯ ಅಧಿಕಾರಿಗಳ ನಡೆ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಶೋಧ ನಡೆಸಿದಾಗ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ‌ 18 ಜಿಂಕೆ ಮತ್ತು ಕಡವೆ ಕೊಂಬು, 9 ಕಾಡುಕೋಣ ಕೊಂಬು, 10 ಕೆ.ಜಿ. ಶ್ರೀಗಂಧ ಹಾಗೂ ಒಂದು ಬಂದೂಕು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ತನಿಖಾಧಿಕಾರಿ ಶಿವಮೊಗ್ಗ ವನ್ಯಜೀವಿ ವಿಭಾಗದ ಎಸಿಎಫ್‌ ಬಿ.ಸುರೇಶ್‌, ಹಣಗೆರೆ ಆರ್‌ಎಫ್‌ಒ ಪವನ್‌ ಕುಮಾರ್‌ ನೇತೃತ್ವದಲ್ಲಿ ಸುಮಾರು 20ಕ್ಕೂ ಹೆಚ್ಚು ಅರಣ್ಯಾಧಿಕಾರಿಗಳು ಶೋಧ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಪ್ರಸನ್ನಕುಮಾರ್‌ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾದ ಕಾರಣ ಬಂಧನವನ್ನು ಮುಂದೂಡಲಾಗಿದೆ ಎಂದು ಎಸಿಎಫ್‌ ತಿಳಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

16 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

20 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

20 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

23 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

23 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago