Categories: Shivamogga News

Shivamogga | ಆರ್‌ಎಂಎಂ ನಿವಾಸದ ಮೇಲೆ E.D. ದಾಳಿ ಖಂಡಿಸಿ ಪ್ರತಿಭಟನೆ

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಮಾಡಿರುವುದನ್ನು ಖಂಡಿಸಿ ಜನಪರ ಹೋರಾಟ ಸಮಿತಿಯ ಪ್ರಮುಖರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.


ಆರ್.ಎಂ. ಮಂಜುನಾಥ ಗೌಡರ ತೀರ್ಥಹಳ್ಳಿಯ ಬೆಟ್ಟಮಕ್ಕಿ ಹಾಗೂ ಕರಕುಚ್ಚಿ ನಿವಾಸ ಹಾಗೂ ಶಿವಮೊಗ್ಗದ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿರುವ ಕ್ರಮ ರಾಜಕೀಯಪ್ರೇರಿತವಾಗಿದೆ. ಗೌಡರು ಕಾಂಗ್ರೆಸ್ ಮುಖಂಡರಾಗಿದ್ದು, ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಈ ದಾಳಿ ಖಂಡನೀಯ ಎಂದುಪ್ರತಿಭಟನಕಾರರು ತಿಳಿಸಿದರು.


ಮಂಜುನಾಥ ಗೌಡರು ಆರು ಬಾರಿ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ. ಡಿಸಿಸಿ ಬ್ಯಾಂಕಿನಲ್ಲಿ ಈ ಹಿಂದೆ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಆರೋಪಿಯನ್ನಾಗಿಸಲಾಗಿತ್ತು. ಸಿಒಡಿ ತನಿಖೆಯನ್ನು ಕೂಡ ಮಾಡಲಾಗಿತ್ತು. ಆದರೆ ತನಿಖೆಯಲ್ಲಿ ಮಂಜುನಾಥ ಗೌಡರ ಪಾತ್ರ ಇಲ್ಲ ಎಂದು ಸಿಒಡಿ ಅಧಿಕಾರಿಗಳೇ ಕ್ಲೀನ್‌ಚಿಟ್ ನೀಡಿದ್ದಾರೆ. ಅವರು ಮತ್ತೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ. ಇವರ ಏಳಿಗೆ ಸಹಿಸದ ಕೆಲವರು ರಾಜಕೀಯ ಪ್ರೇರಿತವಾಗಿ ಈ ದಾಳಿ ನಡೆಸಲು ಕುಮ್ಮಕ್ಕು ನೀಡಿದ್ದಾರೆ ಎಂದು ಪ್ರತಿಭಟನಕಾರರು ತಿಳಿಸಿದ್ದಾರೆ.


ಗೌಡರ ವರ್ಚಸ್ಸನ್ನು ಸಹಿಸದ ಬಿಜೆಪಿ ನಾಯಕರ ದುರುದ್ದೇಶವೇ ಇದಕ್ಕೆ ಕಾರಣವಾಗಿದೆ. ಈ ನಾಯಕರು ಕೇಂದ್ರ ಸರ್ಕಾರದ ಸಂಸ್ಥೆಯನ್ನು ಬಳಸಿಕೊಂಡಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಜಿಲ್ಲಾಧಿಕಾರಿಗಳು ನಮ್ಮ ಮನವಿಯನ್ನು ರಾಷ್ಟ್ರಪತಿ ಹಾಗೂ ಕೇಂದ್ರ ಸರ್ಕಾರಕ್ಕೆ ತಲುಪಿಸುವಂತೆ ಮನವಿಯಲ್ಲಿ ಕೋರಲಾಗಿದೆ.


ಈ ಸಂದರ್ಭದಲ್ಲಿ ಪ್ರಮುಖರಾದ ನಾಗರಾಜ್ ಕಂಕಾರಿ, ಹೆಚ್.ಪಾಲಾಕ್ಷಿ, ಎನ್.ಎಸ್. ಮಹೇಶ್, ಗಾಡಿಕೊಪ್ಪ ರಾಜಣ್ಣ, ಅನಿಲ್‌ಕುಮಾರ್, ಆನಂದ್, ಉಮೇಶ್, ಭಾಸ್ಕರ್, ಶಾಮು ಸೇರಿದಂತೆ ಹಲವರಿದ್ದರು.

Malnad Times

Share
Published by
Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago