ಆರ್.ಎಂ.ಎಂ. ರಾಜಕೀಯ ಪಕ್ಷಗಳ ಹಿತಾಸಕ್ತಿಗೆ ಬಲಿಪಶು ; ವಾಟಗೋಡು ಸುರೇಶ ಗಂಭೀರ ಆರೋಪ


ಹೊಸನಗರ: ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ರಾಜಕೀಯ ಹಿತಾಸಕ್ತಿಗೋಸ್ಕರ ಸಹಕಾರಿ ಕ್ಷೇತ್ರದ ಧುರೀಣ ಆರ್.ಎಂ.ಮಂಜುನಾಥಗೌಡರರನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಸಹಕಾರಿ ಯೂನಿಯನ್ ನಿರ್ದೇಶಕ ವಾಟಗೋಡು ಸುರೇಶ್ ಆಪಾದಿಸಿದ್ದಾರೆ.


ಅವರು ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಬ್ಯಾಂಕ್‌ನ ಶಾಖೆಯೊಂದರಲ್ಲಿ ನಡೆದ ಹಣಕಾಸು ಅವ್ಯವಹಾರ ಪ್ರಕರಣ ನಡೆದು ಎಷ್ಟೋ ವರ್ಷಗಳೇ ಕಳೆದಿವೆ. ಆದರೆ ತನಿಖೆ ಮಾತ್ರ ಪದೇ ಪದೇ ನಡೆಯುತ್ತಲೇ ಇದೆ. ಪ್ರತಿ ಬಾರಿಯೂ ಮಂಜುನಾಥಗೌಡರು ನಿರಾಪರಾಧಿ ಎಂದು ಸಾಬೀತಾಗುತ್ತಿದೆ. ಆದರೆ ರಾಜಕೀಯ ದಾಳದಲ್ಲಿ ಅವರನ್ನು ಪದೇ ಪದೇ ಬಳಸಿಕೊಳ್ಳಲಾಗುತ್ತಿದ್ದು, ಅನಗತ್ಯ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು.


ಈಗ ಮತ್ತೆ ಇ.ಡಿ. ಸಂಸ್ಥೆ ದಾಳಿ ನಡೆಸಿದೆ. ಇದರ ಹಿಂದೆ ಬಿಜೆಪಿಯವರ ಕೈವಾಡವಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಜುನಾಥಗೌಡರು ಸ್ಪರ್ಧಿಸಬಹುದೆನ್ನುವ ಭಯದಿಂದ ಈ ದಾಳಿ ನಡೆದಿದೆ. ಅವರ ಹೆಸರನ್ನು ಕೆಡಿಸುವ ಹುನ್ನಾರ ನಡೆಯುತ್ತಿದೆ. ಕಳೆದ ಒಂದು ದಶಕದಿಂದಲೂ ಮಂಜುನಾಥಗೌಡರ ವಿರುದ್ದ ಅವರ ರಾಜಕೀಯ ವಿರೋಧಿಗಳು ಷಡ್ಯಂತ್ರ ನಡೆಸುತ್ತಲೇ ಬಂದಿದ್ದಾರೆ. ಹಾಗಾದರೆ ಈ ಪ್ರಕರಣದ ಅಂತ್ಯ ಯಾವಾಗ, ಒಂದು ಪ್ರಕರಣಕ್ಕೆ ಎಷ್ಟು ಬಾರಿ ತನಿಖೆ ನಡೆಯುತ್ತದೆ ಎನ್ನುವುದು ಸ್ಪಷ್ಟವಾಗಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಮಂಜುನಾಥಗೌಡರು ಪಕ್ಷಾತೀತವಾಗಿ ತಮ್ಮ ಅಭಿಮಾನಿಗಳನ್ನು ಹೊಂದಿದ್ದಾರೆ. ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರಕ್ಕೆ ಹೊಸ ರೂಪ ನೀಡಿದವರು. ಅವರ ಜನಪ್ರಿಯತೆ ಸಹಿಸದ ಅವರ ವಿರೋಧಿಗಳು ಅನಗತ್ಯ ಕಿರುಕುಳ ನೀಡುತ್ತಿದ್ದಾರೆ. ತನಿಖಾ ಸಂಸ್ಥೆಗಳ ದುರ್ಬಳಕೆ ಆಗುತ್ತಿದೆ ಎಂದು ಆರೋಪಿಸಿದರು.


ಪ್ರಸ್ತುತ ಪ್ರಕರಣದಲ್ಲಿ ಮಂಜುನಾಥಗೌಡರನ್ನು ಸಿಲುಕಿಸುವ ಯತ್ನಕ್ಕೆ ಹಿನ್ನೆಡೆಯಾಗಿದೆ. ನ್ಯಾಯಾಲಯದಲ್ಲಿ ತಡೆಯಾಜ್ಞೆ ಸಿಕ್ಕಿರುವುದು ಸ್ವಾಗತಾರ್ಹ. ಆದರೆ ಪ್ರತಿ ಬಾರಿಯೂ ನ್ಯಾಯಾಲಯಕ್ಕೇ ಹೋಗಬೇಕಾದ ಅನಿವರ‍್ಯತೆ ಎದುರಾಗಿರುವುದು ವಿಪರ‍್ಯಾಸ. ರಾಜ್ಯ ಸರಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದರು.


ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳು ಬರಪೀಡಿತ ಎಂದು ಘೋಷಣೆಯಾಗಿದೆ. ರೈತರಿಗೆ ಬೆಳೆ ವಿಫಲವಾಗಿದೆ. ಕುಡಿಯುವ ನೀರಿನ ಕೊರತೆ ಕಂಡುಬರತೊಡಗಿದೆ. ಜಾನುವಾರುಗಳಿಗೆ ಮೇವಿಲ್ಲ. ಬಡಪೀಡಿತ ಪ್ರದೇಶಗಳ ಸಮೀಕ್ಷೆ ಆಗಬೇಕಿದೆ. ವಿಶೇಷ ಅನುದಾನ ಬಿಡುಗಡೆಯಾಗಬೇಕಿದೆ. ರೈತರಿಗೆ ಮನಸ್ಥೈರ್ಯ ತುಂಬುವ ಕೆಲಸ ಆಗಬೇಕಿದೆ. ಆದರೆ ಸಂಸದರು ಅದೆಲ್ಲವನ್ನೂ ಮರೆತಿದ್ದಾರೆ. ಮುಂದಿನ ಚುನಾವಣೇಗೆ ಸಿದ್ದತೆ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.


ಗೋಷ್ಠಿಯಲ್ಲಿ ಸಹಕಾರಿ ಧುರೀಣರಾದ ಹಾಲಗದ್ದೆ ಉಮೇಶ್, ಲೀಲಕೃಷ್ಣ, ಪ್ರವೀಣ್, ಶ್ರೀನಿವಾಸ ರೆಡ್ಡಿ ಮತ್ತಿತರರು ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago