ಬಾಲ್ಯವಿವಾಹ ಮುಕ್ತ ಸಮಾಜವನ್ನು ನಿರ್ಮಿಸುವುದಕ್ಕೆ ದೇಶದ ಪ್ರತಿಯೊಬ್ಬರು ಬದ್ದರಾಗಿರಬೇಕು ; ವಾಲೆಮನೆ ಶಿವಕುಮಾರ್

ಹೊಸನಗರ: ಭಾರತದ ಪ್ರಜೆಯಾದ ನಾವು ಬಾಲ್ಯವಿವಾಹದಿಂದ ಹೆಣ್ಣು ಮಕ್ಕಳ ಶಿಕ್ಷಣ ಕುರಿತಾಗಿ ಅವರ ಹಕ್ಕುಗಳಾದ ಬದುಕುವ ಹಕ್ಕು , ರಕ್ಷಣೆಯ ಹಕ್ಕು , ತಿಳಿದಿರುವುದರಿಂದ ಬಾಲ್ಯವಿವಾಹ ಮುಕ್ತ ಸಮಾಜವನ್ನು ನಿರ್ಮಿಸುವುದಕ್ಕೆ ಬದ್ದರಾಗಿರಬೇಕೆಂದು ಬಾರ್ ಅಸೋಸಿಯೇಶನ್ ಅಧ್ಯಕ್ಷ ವಾಲೆಮನೆ ಶಿವಕುಮಾರ್‌ರವರು ಹೇಳಿದರು.

ಪಟ್ಟಣದ ಶಿಶು ಅಭಿವೃದ್ಧಿ ಯೋಜನೆಯ ಆವರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯ ವಿವಾಹ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ಈ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ಹೆಣ್ಣು ಗಂಡು ಮಕ್ಕಳು ನನ್ನ ವೈಯಕ್ತಿಕ ನೆಲೆಯಿಂದ ಮತ್ತು ಸಮಾಜದಲ್ಲಿನ ನನ್ನ ಸ್ಥಾನಮಾನದ ನೆಲೆಯಿಂದ ನನ್ನ ಕುಟುಂಬದಲ್ಲಿ, ಬಂಧು-ಬಳಗದಲ್ಲಿ ಸಮುದಾಯದಲ್ಲಿ ಹಾಗೂ ಸಮಾಜದಲ್ಲಿ ನಾನು ಬಾಲ್ಯ ವಿವಾಹಗಳನ್ನು ವಿರೋಧಿಸುತ್ತೇನೆ. 18 ವರ್ಷದೊಳಗಿನ ಹೆಣು ಮಕ್ಕಳ ಮತ್ತು 21 ವರ್ಷದೊಳಗಿನ ಗಂಡು ಮಕ್ಕಳಿಗೆ ವಿವಾಹ ನೆಡೆಸುವ ಸಾಧ್ಯತೆ ಕಂಡುಬಂದಲ್ಲಿ ಅದನ್ನು ತಡೆಯುತ್ತೇನೆೆ ನಾನು ಹುಟ್ಟಿರುವುದು ಭಾರತದಲ್ಲಿ ಬಾರತ ದೇಶದ ಕಾನೂನಿನ ಚೌಕಟ್ಟಿನಲ್ಲಿ ಬದುಕುತ್ತೇವೆ ಎಂದು ತಿಳಿದಿದ್ದರೇ ಎಲ್ಲಯು ಬಾಲ್ಯ ವಿವಾಹದಂತೆ ಕೆಟ್ಟ ಸಂಸ್ಕೃತಿಯನ್ನು ಭಾರತ ದೇಶದಿಂದ ತೊಳೆದು ಹಾಕಬಹುದು ಎಂದರು.


ಶಿಶು ಅಭಿವೃದ್ಧಿ ಇಲಾಖೆಯ ರಾಜುರವರು ಈ ಸಂದರ್ಭದಲ್ಲಿ ಮಾತನಾಡಿ, ಮಹಿಳೆಯರಿಗೆ 18 ವರ್ಷ ಹಾಗೂ ಪುರುಷರಿಗೆ 21 ವರ್ಷದ ಒಳಗೆ ವಿವಾಹ ಮಾಡಿದರೆ ಅದು ಕಾನೂನಿನ ಅಡಿಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆಯಾಗಿದ್ದು ತಮ್ಮ ಗ್ರಾಮ, ಊರು ತಾಲ್ಲೂಕು ರಾಜ್ಯದಲ್ಲಿ ಎಲ್ಲೇ ಮದುವೆ ನಡೆದರೂ ತಕ್ಷಣ ಬಾಲ್ಯ ವಿವಾಹ ನಿಷೇಧಾಧಿಕಾರಿಗಳಾಗಿ, ಪೊಲೀಸರಿಗೆ, ಜಿಲ್ಲಾ ನ್ಯಾಯಾಧೀಶರಿಗೆ ಅಥವಾ 112ಗೆ ಮಾಹಿತಿ ನೀಡಿದರೆ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಪ್ರಕಾರ ಬಾಲ್ಯ ವಿವಾಹವಾಗಿರುವುದರಿಂದ ತಕ್ಷಣ ಕಾನೂನಿನ ಅಡಿಯಲ್ಲಿ ಮಕ್ಕಳ ಪೋಷಕರನ್ನು ವಶಕ್ಕೆ ಪಡೆಯಲಿದ್ದು ಕಾನೂನಿನ ಅಡಿಯಲ್ಲಿ ಶಿಕ್ಷೆ ನೀಡಲಾಗುತ್ತದೆ ಪ್ರತಿಯೊಬ್ಬರು ಕಾನೂನು ಪಾಲಿಸಬೇಕೆಂದರು.


ಈ ಕಾರ್ಯಕ್ರಮ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರಾರ್ಥನೆ ನಡೆದಿದ್ದು ಮಹಿಳಾ ಮೇಲ್ವಿಚಾರಕಿ ವಿಜಯ ಎಂ ರವರು ಸ್ವಾಗತಿಸಿದರು.
ಈ ಸಮಾರಂಭದ ಅಧ್ಯಕ್ಷತೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಶಿರೇಖಾರವರು ವಹಿಸಿ ಮಾತನಾಡಿದರು.


ಪ್ರಾಸ್ತವಿಕವಾಗಿ ಹಿರಿಯ ಮಹಿಳಾ ಮೇಲ್ವಿಚಾರಕಿ ವೀರಮ್ಮರವರು ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ವಕೀಲರಾದ ಚಂದ್ರಪ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ, ಪ್ರೇಮಾ, ಕ್ಷೇತ್ರ ಸಮಾನ್ವಯಾಧಿಕಾರಿ ರಂಗನಾಥ್, ಚಂದ್ರಕಲಾ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago