ಮಕ್ಕಳನ್ನು ಮೊಬೈಲ್‌ನಿಂದ ದೂರವಿಡಿ ಸಂಸ್ಕಾರ, ಸಂಸ್ಕೃತಿ ಕಲಿಸಿ ; ಜೋಗತಿ ಮಂಜಮ್ಮ

ಹೊಸನಗರ: ಇಂದಿನ ಮಕ್ಕಳು ಸಂಸ್ಕಾರ ಸಂಸ್ಕೃತಿಯನ್ನು ಮರೆತು ಮೊಬೈಲ್ ನೋಡುವುದರಲ್ಲಿ ಮಗ್ನರಾಗಿರುತ್ತಾರೆ ತಂದೆ-ತಾಯಿಯರು ಮಕ್ಕಳಿಂದ ಮೊಬೈಲ್ ಕಸಿದು ಇಂದಿನ ಸಂಸ್ಕಾರ-ಸಂಸ್ಕೃತಿ ಕಲಿಸಿ ಎಂದು ಪದ್ಮಶ್ರೀ ಹಾಗೂ ಗೌರವ ಡಾಕ್ಟರೇಟ್ ಪ್ರಶಸ್ತಿ ಪಡೆದಿರುವ ಜೋಗತಿ ಮಂಜಮ್ಮ ಹೇಳಿದರು.


ಪಟ್ಟಣದ ಕುವೆಂಪು ವಿದ್ಯಾಶಾಲೆಯ ಆವರಣದಲ್ಲಿ ಜಿಲ್ಲಾ ಮಟ್ಟದ 6ನೇ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯೆಯ ಜೊತೆಗೆ ಸಂಸ್ಕಾರ ಮತ್ತು ಸಂಸ್ಕೃತಿ ಬಹಳ ಮುಖ್ಯವಾಗಿರುತ್ತದೆ. ಅದನ್ನು ಇಂದಿನ ತಂದೆ-ತಾಯಿಯವರು ಕಲಿಸುತ್ತಿಲ್ಲ. ಮಗು ಹುಟ್ಟಿದ ತಕ್ಷಣದಿಂದ ಮೊಬೈಲ್ ನೀಡುತ್ತಿದ್ದಾರೆ ಇದರಿಂದ ಮುಂದಿನ ದಿನದಲ್ಲಿ ಪೋಷಕರಿಗೆ ತೊಂದರೆಯಾಗಲಿದೆ ಮಕ್ಕಳಿಗೆ ಪಠ್ಯ ಪುಸ್ತಕದ ಜೊತೆಗೆ ರಾಮಾಯಣ, ಮಹಾಭಾರತ, ಬೈಬಲ್, ಕುರಾನ್‌ನಂಥಹ ಪುಸ್ತಕಗಳು ಶರಣರು ಬರೆದಿರುವ ಪುಸ್ತಕಗಳನ್ನು ಓದುವುದು ಮಕ್ಕಳ ಮನಸ್ಸನ್ನು ಸಾಹಿತ್ಯದ ಕಡೆ ಒಲವು ತೋರಿಸಿದರೆ ಮಾತ್ರ ನಮ್ಮ ಸಂಸ್ಕಾರ ಸಂಸ್ಕೃತಿಯನ್ನು ಉಳಿಸಲು ಸಾಧ್ಯ ಎಂದರು.


ಕನ್ನಡ ಭಾಷೆ ಕಲಿಸಿ ಕನ್ನಡ ಬಾಷೆ ಉಳಿಸಿ :
ಕರ್ನಾಟಕದ ಮಕ್ಕಳಿಗೆ ಕನ್ನಡ ಕಡ್ಡಾಯವಾಗಿ ಕಲಿಸಬೇಕು. ಪ್ರತಿಯೊಬ್ಬ ತಂದೆ-ತಾಯಿಯವರು ಮಕ್ಕಳಿಗೆ ಕನ್ನಡ ಕಲಿಸುವುದರಿಂದ ಕನ್ನಡ ಭಾಷೆಯ ಬಗ್ಗೆ ಹಿಡಿತವಿರುತ್ತದೆ‌. 10ನೇ ತರಗತಿಯ ನಂತರ ಇತರೆ ಭಾಷೆಗಳ ಬಗ್ಗೆ ಒಲವು ತೋರಿಸಿ ಏಕೆಂದರೆ ಮುಂದಿನ ಜೀವನಕ್ಕೆ ಅನುಕೂಲವಾಗುತ್ತದೆ. ಒಂದು ಬಾಳೆ ಎಲೆಯಲ್ಲಿ ಊಟ ಮಾಡುವಾಗ ಅನ್ನ-ಸಾರು ಪಾಯಸ, ಮಜ್ಜಿಗೆಯನ್ನು ಕನ್ನಡಕ್ಕೆ ಹೋಲಿಸಿ ಉಪ್ಪಿನಕಾಯಿ ಉಪ್ಪು, ಪಲ್ಯೆಗಳು ಇತರೆ ಭಾಷೆಗಳಿಗೆ ಹೋಲಿಸಿ ಊಟ ಬದುಕಲುಬೇಕು, ಸೈಡ್ ಪಲ್ಯೆಗಳು ರುಚಿಗಾಗಿ ಇತರೆ ಭಾಷೆ ಬಳಸಿ ಎಂದರು.


ವಿದ್ಯೆ ವಿನಯತೆ ಹಾಗೂ ಗುರುಭಕ್ತಿ ಇದ್ದಲ್ಲಿ ಪ್ರತಿಯೊಬ್ಬರು ಯಶಸ್ಸು ಸಾಧಿಸಲು ಸಾಧ್ಯ:
ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ವಿದ್ಯೆ ಕಲಿಯುವ ಗುಣ ಕಲಿಸುವ ಗುರುಗಳ ಬಗ್ಗೆ ಭಕ್ತಿ ಮತ್ತು ವಿನಯತೆ ಇದ್ದಲ್ಲಿ ಪ್ರತಿಯೊಬ್ಬರು ಯಶಸ್ಸು ಕಾಣಲು ಸಾಧ್ಯ. ಶರಣರು ಹಾಕಿಕೊಟ್ಟ ದಾರಿಯಲ್ಲಿ ಮುನ್ನಡೆಯಬೇಕು ಆಗ ಮಾತ್ರ ಇಂಥಹ ಕಾರ್ಯಕ್ರಮ ನಡೆಸಲು ಸಾಧ್ಯ ಎಂದು ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮೀಜಿಯವರು ಹೇಳಿದರು.


ಈ 6ನೇ ಶರಣ ಸಾಹಿತ್ಯ ಸಮ್ಮೆಳನ ನಡೆಸಲು ಶ್ರಮಿಸಿರುವ ಜಿಲ್ಲಾ ಸಂಚಾಲಕ ಗಂಗಾಧರಯ್ಯನವರು ಶ್ರಮವಹಿಸಿ ಈ ಕಾರ್ಯಕ್ರಮ ಆಯೋಜಿಸಿದ್ದಾರೆ. ಇಂಥಹ ಕಾರ್ಯಕ್ರಮಗಳಿಗೆ ಶರಣರು ಸದಸ್ಯರು ಹಾಗೂ ಸಾರ್ವಜನಿಕರು ಆಗಮಿಸದಿರುವುದಕ್ಕೆ ಬೇಸರ ತಂದಿದೆ ಎಂದು ಈ ಸಮಾರಂಭದ ಕಾರ್ಯಾಧ್ಯಕ್ಷ ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಚಂದ್ರಮೌಳಿಯವರು ಹೇಳಿದರು.


ಈ ಕಾರ್ಯಕ್ರಮದಲ್ಲಿ ಆನಂದಪುರ ಬೆಕ್ಕಿನಮಕ್ಕಿ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಈ ಸಮಾರಂಭದ ಅಧ್ಯಕ್ಷತೆಯನ್ನು ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ|| ಸೊನಲೆ ಶ್ರೀನಿವಾಸ್‌ರವರು ವಹಿಸಿ ಸಾಹಿತ್ಯದ ಬಗ್ಗೆ ಮಾತನಾಡಿದರು.


ಹೊಸನಗರ ಗಣಪತಿ ದೇವಸ್ಥಾನದಿಂದ ಸಮ್ಮೇಳನಾಧ್ಯಕ್ಷರಾದ ಅಂಬ್ರಯ್ಯಮಠ ರವರನ್ನು ಮೆರವಣಿಗೆಯ ಮೂಲಕ ಸಮಾರಂಭಕ್ಕೆ ಕರೆ ತರಲಾಯಿತು.
ಈ ಸಮಾರಂಭದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಹಾರುದ್ರ, ಎನ್.ಆರ್. ದೇವಾನಂದ್, ಶ್ರಿಪತಿರಾವ್, ಗಂಗಾಧರಯ್ಯ, ಚನ್ನಬಸಪ್ಪಗೌಡ, ದುಮ್ಮ ರೇವಣ್ಣಪ್ಪ ಗೌಡ, ವಿನಯ್ ಕುಮಾರ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago