ಮನೆ ಮುಂದೆ ಸ್ವಚ್ಚವಾಗಿದ್ದರೆ ಊರೇ ಸ್ವಚ್ಛವಾಗಿರುತ್ತದೆ ; ನ್ಯಾಯಾಧೀಶ ರವಿಕುಮಾರ್ ಕೆ


ಹೊಸನಗರ: ಸ್ವಚ್ಚತೆಯ ಬಗ್ಗೆ ಮುಂದಿನ ಹಿಂದಿನ ಮನೆಯವರ ಬಗ್ಗೆ ಮಾತನಾಡುವುದನ್ನು ಬಿಟ್ಟು ತಮ್ಮ ಸ್ವಂತ ಮನೆಯ ಸುತ್ತ ಸ್ವಚ್ಛ ಮಾಡಿಕೊಂಡರೆ ಇಡೀ ಊರನ್ನೇ ಸ್ವಚ್ಛವಾಗಿಡಬಹುದು ಎಂದು ಹೊಸನಗರದ ಪ್ರಧಾನ ವ್ಯವಹಾರ ನ್ಯಾಯಾಧೀಶರಾದ ರವಿಕುಮಾರ್ ಕೆ. ಹೇಳಿದರು.


ಅವರು ಹೊಸನಗರದ ನ್ಯಾಯಾಲಯದ ಸುತ್ತ ಬೆಳೆದಿರುವ ಗಿಡ-ಗಂಟಿಗಳನ್ನು ಸ್ವಚ್ಛಗೊಳಿಸಿ ಮಾತನಾಡಿ, ಹಿಂದಿನ ಕಾಲದಲ್ಲಿ ಸ್ವಚ್ಛತೆಗೆ ಹೆಚ್ಚು ಮಹತ್ವ ನೀಡುತ್ತಿರಲಿಲ್ಲ ತಮ್ಮ ಮನೆಯ ಸುತ್ತ-ಮುತ್ತ ಎಷ್ಟೇ ಕಸ ಕಡ್ಡಿಗಳು ಬಿದ್ದಿದ್ದರೂ ಸ್ವಚ್ಛತೆಗೆ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ ಆದರೆ ಊರು ಬೆಳೆದಂತೆ ಮನೆಗಳು ಹೆಚ್ಚಾಗತೊಡಗಿದೆ ಜನಸಂಖ್ಯೆಯು ಹೆಚ್ಚುತ್ತಿದ್ದು ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ ಸ್ವಚ್ಛತೆ ಮಾಡಿಕೊಳ್ಳದಿದ್ದರೇ ಕಾಯಿಲೆಗೆ ನಾವೇ ಆಹ್ವಾನ ನೀಡಿದ್ದಂತಾಗುತ್ತದೆ ಕಾಯಿಲೆ ಪ್ರಮಾಣವೂ ಜಾಸ್ತಿಯಾಗುವುದರಿಂದ ಮನೆಯ ಸುತ್ತ-ಮುತ್ತ ಸ್ವಚ್ಛತೆಗೆ ಪ್ರಥಮ ಆಧ್ಯತೆ ನೀಡಿ ಎಂದರು.


ಅಕ್ಕ ಪಕ್ಕದ ಮನೆಯವರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಿ:
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ವ್ಯವಹಾರ ನ್ಯಾಯಾಧೀಶರಾದ ಸಂತೋಷ್ ಎಂ.ಎಸ್ ಕೋರ್ಟ್ ಸುತ್ತ-ಮುತ್ತ ಸ್ವಚ್ಛಗೊಳಿಸಿ ಮಾತನಾಡಿ, ತಮ್ಮ ಮನೆಯ ಸುತ್ತ-ಮುತ್ತ ಸ್ವಚ್ಛ ಮಾಡಿಕೊಂಡು ಜೀವನ ಸಾಗಿಸಬೇಕು ಹಾಗೂ ನಿಮ್ಮ ಮನೆಯ ಅಕ್ಕ ಪಕ್ಕದವರಿಗೂ ಸ್ವಚ್ಛ ಮಾಡಿಕೊಳ್ಳುವ ಸಂದೇಶವನ್ನು ನೀಡಬೇಕು ಇಲ್ಲವಾದರೇ ತಮ್ಮ ಆರೋಗ್ಯ ಹಾಳಾಗುವುದರ ಜೊತೆಗೆ ಅಕ್ಕ ಪಕ್ಕದಲ್ಲಿ ವಾಸಿಸುವ ಜನರ ಕುಟುಂಬಗಳ ಆರೋಗ್ಯವೂ ಹಾಳಾಗುತ್ತದೆ ನೀವು ಕಾಯಿಲೆಗೆ ತುತ್ತಾಗುತ್ತೀರಿ ಅಕ್ಕ ಪಕ್ಕದ ಮನೆಯವರು ಸ್ವಚ್ಛ ಮಾಡಿಕೊಳ್ಳದಿದ್ದರೆ ಸಂಬಂಧಪಟ್ಟ ಆರೋಗ್ಯ ಇಲಾಖೆಯ ಆರೋಗ್ಯಾಧಿಕಾರಿಗಳ ನಿಮ್ಮ ಸುತ್ತ ಇರುವ ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿಯವರ ಗಮನಕ್ಕೆ ತನ್ನಿ ಒಟ್ಟಾರೇ ಪರಿಸರ ಸ್ವಚ್ಛ ಮಾಡಿಟ್ಟು ಪ್ರಯತ್ನಿಸಿ ಎಂದರು.


ಈ ಸ್ವಚ್ಚತ ಅಭಿಯಾನದಲ್ಲಿ ಹೊಸನಗರದ ತಹಶೀಲ್ದಾರ್ ರಾಕೇಶ್ ಫ್ರಾಸ್ಸಿಸ್ ಬಿಟ್ರೋ, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಉಮಾಶಂಕರ್, ಆರೋಗ್ಯಾಧಿಕಾರಿ ಪ್ರಶಾಂತ್, ಸಹಾಯಕ ಸರ್ಕಾರಿ ಅಭಿಯೋಜನಕರಾದ ರವಿ, ವಕೀಲರ ಸಂಘದ ಅಧ್ಯಕ್ಷರಾದ ವಾಲೆಮನೆ ಶಿವಕುಮಾರ್, ತಾಲ್ಲೂಕು ಕಛೇರಿಯ ಪ್ರಥಮ ದರ್ಜೆ ಗುಮಾಸ್ಥರಾದ ಚಿರಾಗ್, ವಕೀಲರ ಸಂಘದ ಎಲ್ಲ ಸದಸ್ಯರು ನ್ಯಾಯಾಲಯದ ಎಲ್ಲ ಸಿಬ್ಬಂದಿಗಳು ಈ ಅಭಿಯಾನದಲ್ಲಿ ಭಾಗವಹಿಸಿದ್ದರು.

Malnad Times

Share
Published by
Malnad Times

Recent Posts

ತನ್ನೊಂದಿಗೆ ಚರ್ಚೆಗೆ ಬರುವಂತೆ ಅಣ್ಣಾಮಲೈಗೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್ !

ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…

3 hours ago

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೇರಲಿ ; ಸ್ನೇಹಲ್ ಸುಧಾಕರ್ ಲೋಖಂಡೆ

ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…

3 hours ago

ಹೃದಯಾಘಾತ ; ಮಮತಾ ನಿಧನ

ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…

4 hours ago

ಶ್ರೀಮನ್ಮಹಾರಥೋತ್ಸವ ಜಾತ್ರೋತ್ಸವ ಧಾರ್ಮಿಕ ಕಾರ್ಯಕ್ರಮ ಸಂಪನ್ನ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…

4 hours ago

ಬಟಾಣಿಜಡ್ಡು ಗ್ರಾಮದಲ್ಲಿ ಭತ್ತದ ಬೆಳೆ ನಾಶಗೊಳಿಸಿದ ಕಾಡಾನೆಗಳು, ಆತಂಕದಲ್ಲಿ ರೈತರು

ರಿಪ್ಪನ್‌ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…

6 hours ago

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

9 hours ago