ಹೊಸನಗರ: ಮಹಿಳೆಯರು (Women’s) ಸ್ವಾವಲಂಬಿಯಾಗಿ ಬದುಕಬೇಕು. ಕೇವಲ ಮನೆಯಲ್ಲಿ ಅಡುಗೆ (Cooking) ಕೆಲಸಕ್ಕೆ ಸೀಮಿತ ಆಗಬಾರದು. ಸಮಾನತೆಯ ಆಶಯಗಳು ಈ ಮೂಲಕ ಈಡೇರಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ (Beluru Gopalakrishna) ಹೇಳಿದರು.
ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸೋಮವಾರ ಏರ್ಪಡಿಸಿದ್ದ ಉದ್ಯಮ ಶೀ ಲತಾ ಜಾಗೃತಿ ಶಿಬಿರದಲ್ಲಿ ಫಲಾನುಭವಿಗಳಿಗೆ ಸುಧಾರಿತ ಉಪಕರಣಗಳ ವಿತರಣೆ ನೀಡಿ ಮಾತನಾಡಿದರು.
ಅಸಂಘಟಿತ ಕಾರ್ಮಿಕರ ಜೀವನ ನಿರ್ವಹಣೆ ಕಷ್ಟಕರ. ಇದನ್ನು ಮನಗಂಡು ರಾಜ್ಯ ಸರ್ಕಾರ ಬದುಕು ಕಟ್ಟಿಕೊಳ್ಳಲು ಸಹಾಯವಾಗಲಿ ಎನ್ನುವ ಉದ್ದೇಶದಿಂದ ಇಂತಹವರಿಗಾಗಿ ವಿಶೇಷ ಯೋಜನೆಗಳನ್ನು ಜಾರಿಗೊಳಿಸಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಮೇಲು-ಕೀಳು ಎಂಬ ಭಾವನೆ ಬೇಡ. ನ್ಯಾಯಯುತ ದಾರಿಯಲ್ಲಿ ಯಾವುದೇ ಉದ್ಯೋಗ ಕೈಗೊಂಡರೂ ಅದಕ್ಕೆ ಸಮಾನಗೌರವ ವಿದೆ. ವಿಮಾ ಸೌಲಭ್ಯಗಳನ್ನು ಪಡೆಯದಿದ್ದಲ್ಲಿ ಸಂಕಷ್ಟದ ದಿನಗಳನ್ನು ಎದುರಿಸಬೇಕಾಗಬಹುದು. ಈ ಬಗ್ಗೆ ಮುಂಜಾಗ್ರತೆ ಅಗತ್ಯ ಎಂದರು.
ಈ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ರಶ್ಮಿ, ತಾಪಂ ಇಓ ನರೇಂದ್ರಕುಮಾರ್, ವಿಸ್ತರಣಾಧಿಕಾರಿ ನಾಗರಾಜ್, ಪ್ರಮುಖರಾದ ಲೀಲಾಶಂಕರ್, ಪಟ್ಟಣ ಪಂಚಾಯತಿ ಸದಸ್ಯ ಅಶ್ವಿನಿಕುಮಾರ್, ಪಟ್ಟಣ ಪಂಚಾಯತಿ ನಾಮ ನಿರ್ದೇಶಕ ಗುರುರಾಜ್, ನೇತ್ರಾ ಸುಬ್ರಾಯಭಟ್, ಸುಬ್ರಮಣ್ಯ, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಮತ್ತಿತರರು ಇದ್ದರು.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…