ಹೊಸನಗರ: ತಾಲೂಕಿನ ಕಸಬಾ ಹೋಬಳಿ ಮಾರುತಿಪುರ ಗ್ರಾಮದ ಸರ್ವೆ ನಂಬರ್ 6ರ ಮೀಸಲು ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೋರ್ವ ಅನಧಿಕೃತವಾಗಿ ಮೀಸಲು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿ ಕೃಷಿ ಚಟುವಟಿಕೆಗೆ ಮುಂದಾಗಿದ್ದಾನೆ ಎಂದು ಗ್ರಾಮಸ್ಥರು ದೂರಿದ್ದು, ಕೂಡಲೇ ಅರಣ್ಯ ಒತ್ತುವರಿ ತೆರವುಗೊಳಿಸವಂತೆ ಸಂಬಂಧಪಟ್ಟ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಮಾರುತಿಪುರ ಗ್ರಾಮದ ವಾಸಿ ಶಾಂತಾರಾಮ ಹೆಗಡೆ ಎಂಬಾತ, ಕಳೆದ ಕೆಲವು ದಿನಗಳಿಂದ ಈ ಮೀಸಲು ಅರಣ್ಯ ಪ್ರದೇಶದಲ್ಲಿ ಹುಲುಸಾಗಿ ಬೆಳೆದಿದ್ದ ಲಕ್ಷಾಂತರ ರೂ. ಮೌಲ್ಯದ ಕಾಡು ಗಿಡಮರಗಳನ್ನು ಕಡಿದು, ಕೃಷಿ ಚುಟುವಟಿಕೆಗೆ ಒತ್ತುವರಿ ಮಾಡಿದ್ದು, ವಿಷಯ ಸ್ಥಳೀಯ ಅರಣ್ಯ ಇಲಾಖೆ ಸಿಬ್ಬಂದಿಗಳ ಗಮನಕ್ಕೆ ಗ್ರಾಮಸ್ಥರು ತಂದು ಹಲವು ದಿನಗಳೇ ಕಳೆದರು ಇಲಾಖೆ ಆತನ ವಿರುದ್ದ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಗ್ರಾಮಸ್ಥರಲ್ಲಿ ಹಲವು ಅನುಮಾನಕ್ಕೆ ಕಾರಣವಾಗಿದೆ.
ಈ ಭಾಗದ ಅರಣ್ಯಾಧಿಕಾರಿಗಳು ಪ್ರಕರಣದಲ್ಲಿ ಶಾಮೀಲಾಗಿರುವ ಬಗ್ಗೆ ಸ್ಥಳೀಯ ಜನತೆ ಶಂಕೆ ವ್ಯಕ್ತಪಡಿಸಿದ್ದು, ಕೂಡಲೇ ಇಲಾಖೆಯ ಮೇಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ಕುರಿತಂತೆ ಸಂಪೂರ್ಣ ತನಿಖೆ ಕೈಗೊಂಡು ಅಕ್ರಮ ಅರಣ್ಯ ಒತ್ತುವರಿ ತೆರವುಗೊಳಿಸುವುವಂತೆ ಕೋರಿದ್ದಾರೆ. ತಪ್ಪಿದ್ದಲ್ಲಿ ಜನಸಂಗ್ರಾಮ ಪರಿಷತ್ತಿನ ಮೊರೆ ಹೋಗುವುದಾಗಿ ಎಚ್ಚರಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…