ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ದುಮ್ಮ ಡಾ|| ರೇವಣ್ಣಪ್ಪ ಗೌಡರಿಗೆ ವಿಶ್ವ ಸಮಾನತೆಯ ಭಾವೈಕ್ಯ ರತ್ನ ಪ್ರಶಸ್ತಿ

ಹೊಸನಗರ: ಹೊಸನಗರ (Hosanagara) ತಾಲ್ಲೂಕಿನ ಸಮಾಜ ಸೇವಕ (Social Worker) ದುಮ್ಮ ರೇವಣ್ಣಪ್ಪಗೌಡರವರಿಗೆ ಹುಬ್ಬಳ್ಳಿಯ (Hubballi) ವಿಶ್ವ ದರ್ಶನ ದಿನಪತ್ರಿಕೆಯ ರಾಷ್ಟೀಯ ಹಾಗೂ ನ್ಯಾಷನಲ್ ಐಕಾನ್ ಅವಾರ್ಡ್ 2023-24ನೇ ಸಾಲಿನ ಪ್ರತಿಷ್ಟಿತ ಪ್ರಶಸ್ತಿಯಾದ ಸಮಾನತೆಯ ಭಾವೈಕ್ಯ ರತ್ನ ಪ್ರಶಸ್ತಿಯನ್ನು (Awards) ನೀಡ ಗೌರವಿಸಿದೆ.

ಹುಬ್ಬಳಿಯ ಜ್ಯೋಶಿ ಗಲ್ಲಿಯ ದೇವಪ್ಪ ಹೊಸಮನಿ ಕಲ್ಯಾಣ ಮಂಟಪದಲ್ಲಿ ಭಾವೈಕ್ಯ ಸಮ್ಮೇಳನದ ಹಿರಿಯ ಮಹಾಪೂಜ್ಯ ಮಹಾಂತಲಿಂಗ ತಪೋನಿಧಿ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದೆ.

ದುಮ್ಮ ರೇವಣ್ಣಪ್ಪ ಗೌಡರವರು ಹೊಸನಗರ ತಾಲ್ಲೂಕಿನ ದುಮ್ಮಾ ಭೀಮನಕೆರೆ ಗ್ರಾಮದ ಗೌಡರ ಮನೆತನದ ದಂಪತಿಗಳ ಪುಣ್ಯಗರ್ಭದಲ್ಲಿ ಜನಿಸಿದ ಇವರು ಮಂಡಲ ಪ್ರಧಾನರಾಗಿ, ಹೊಸನಗರ ಟೌನ್ ಕಳೂರು ಮಂಡಲ ಪಂಚಾಯತಿ, ಜೆಎಂಎಫ್‌ಸಿ ನ್ಯಾಯಾಲಯದ ಹೊಸನಗರ ಅದಾಲತ್‌ನ ಸದಸ್ಯರಾಗಿ 10 ವರ್ಷಗಳ ಕಾಲ ಸೇವೆ, ಹೊಸನಗರ ರೆಡ್ ಕ್ರಾಸ್ ಸಮಿತಿಯ ಡೈರೆಕ್ಟರ್‌ರಾಗಿ, ಶರಣ ಸಾಹಿತ್ಯ ಪರಿಷತ್‌ನ ಹೊಸನಗರ ತಾಲ್ಲೂಕಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಗೌರವಾಧ್ಯಕ್ಷರಾಗಿ ಮಾನವ ಹಕ್ಕುಗಳ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ಅಧ್ಯಕ್ಷರಾಗಿ, ಪೊಲೀಸ್ ವೆಲ್ಪೇರ್ ಕರ್ನಾಟಕ ಆರ್ಗನೈಜೇಷನ್ ಹಾಗೂ ಜಿಲ್ಲಾ ಕಾಂಗ್ರೇಸ್ ಸಮಿತಿಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದಾರೆ.

ಮೇಲಾಗಿ ಇವರು ಸಾಮಾಜಿಕ ಕ್ಷೇತ್ರದಲ್ಲಿ ಶ್ರೇಷ್ಠ ಹೆಸರು ಮಾಡಿದ್ದಾರೆ ಎಂದು ಹೆಳಲಾಗಿದೆ. ಇವರು ಶರಣ ಕಾಯಕ ಜೀವಿಗಳು ನಾಡಿನ ಶರಣರ ಜೊತೆ ಉತ್ತಮ ಬಾಂಧವ್ಯ ಹೊಂದಿರುವ ಇವರ ಸಾಧನೆಯನ್ನು ಗುರುತಿಸಿ ಈ ಪ್ರಸಸ್ತಿ ನೀಡಲಾಗಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

22 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago