ಹೊಸನಗರ : ಪಟ್ಟಣದ ಪೂರ್ವ ಪ್ರಾಥಮಿಕ ವಿದ್ಯಾಸಂಸ್ಥೆ, ಶ್ರೀ ವಿದ್ಯಾ ಸಂವಿಧಾನಂನಲ್ಲಿ ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಾರಂಭದ ಪ್ರಯುಕ್ತ ಏರ್ಪಡಿಸಿದ ರಾಧಾಕೃಷ್ಣ ವೈಭವ ವರ್ಣರಂಜಿತವಾಗಿ ನಡೆಯಿತು.
ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷೆ ಗುಲಾಬಿ ಮರಿಯಪ್ಪ, ಮಾಜಿ ಉಪಾಧ್ಯಕ್ಷೆ ಕೃಷ್ಣವೇಣಿ, ಉಪನ್ಯಾಸಕಿ ಸಾಮಾಜಿಕ ಕಾರ್ಯಕರ್ತೆ ಶೀಲಾ ರಾಮನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಚಿಣ್ಣರ ವೈಭವ ನೋಡಲು ಎರಡು ಕಣ್ಣು ಸಾಲದು. ಅವರಿಗೆ ನೀಡುವ ಪುರಸ್ಕಾರವನ್ನು ಪ್ರಥಮ, ದ್ವಿತೀಯ, ತೃತೀಯ ಎಂದು ವಿಭಾಗಿಸದೆ ಸ್ಪರ್ಧಿಸುವ ಎಲ್ಲಾ ಚಿಣ್ಣರಿಗೂ ಬಹುಮಾನ ನೀಡುವ ಮೂಲಕ ಅವರ ಪ್ರತಿಭೆಗೆ ಪುರಸ್ಕರಿಸಿ ಅವರಲ್ಲಿರುವ ಸಭಾಕಂಪನವನ್ನು ತೊಡಗಿಸಬೇಕೆಂದರು.
ನಾವೆಲ್ಲರೂ ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲ ಮಕ್ಕಳಲ್ಲೂ ಭಗವಾನ್ ಶ್ರೀ ಕೃಷ್ಣನನ್ನು ಕಾಣಬೇಕೆಂದರು ಈಗಿನಿಂದಲೇ ಮಕ್ಕಳಲ್ಲಿ ಜಾತಿ ಮತ ಭೇದಭಾವ ಕಾಣದಂತೆ ಒಗ್ಗೂಡಿ ಬಾಳುವ ಪರಿಸರ ರಚಿಸುವಂತೆ ಕರೆ ನೀಡಿದರು.
ರಂಜಿತಾ ಸ್ವಾಗತಿಸಿದರು. ಆಶಾ ಶ್ರೀನಿವಾಸ್ ಕಾರ್ಯಕ್ರಮ ನಿರೂಪಿಸಿದರು. ಕೆ.ಪಿ ಶ್ರೀನಿವಾಸ್ ಅಭಾರ ಮನ್ನಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…