ಶರನ್ನವರಾತ್ರಿ ಆಯುಧ ಪೂಜೆಯೊಂದಿಗೆ ಸಂಪನ್ನ | ಆಯುಧ-ವಾಹನಗಳನ್ನು ನ್ಯಾಯೋಚಿತವಾಗಿ ಬಳಸಿ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ : ಆಯುಧ ಪೂಜೆಯ ಸಂಸ್ಕೃತಿ ಅನಾದಿ ಕಾಲದಿಂದಲೂ ಧಾರ್ಮಿಕ ಆಚರಣೆಯ ಅವಿಭಾಜ್ಯ ಅಂಗವಾಗಿದೆ. ಆಯುಧಗಳನ್ನು ರಾಜಮಹಾರಾಜರು ಪೂಜಿಸುವ ಮೂಲಕ ಯುದ್ಧಗಳಿಂದ ರಕ್ಷಿಸಲು ಪ್ರಾರ್ಥಿಸಿಕೊಳ್ಳುತ್ತಿದ್ದರು. ಆಯುಧಗಳ ಸದ್ಬಳಕೆ ಆಗಬೇಕಲ್ಲದೇ ಹಿಂಸಾಕೃತ್ಯಗಳಿಗೆ, ಯುದ್ಧಗಳಿಗೆ ಬಳಸುವುದು ನ್ಯಾಯೋಚಿತವಾಗಿರಬೇಕು ಎಂದು ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ನವರಾತ್ರಿಯ ನವಮಿಯಂದು ಆಯುಧ ಪೂಜೆಯ ಪರಂಪರೆಯನ್ನು ವಿವರಿಸಿದರು.

ವೈಯುಕ್ತಿಕವಾಗಿ, ಸಮುದಾಯವನ್ನು ರಕ್ಷಿಸಬಲ್ಲ ಆಯುಧಗಳನ್ನು ಪೂಜಿಸುವ ಮೂಲಕ ಸ್ವರಕ್ಷಣೆ, ದೇಶರಕ್ಷಣೆಯ ಮಹತ್ವ ತಿಳಿಸಬೇಕು. ವಾಹನಗಳು, ಯಂತ್ರಗಳು ತಂತ್ರಜ್ಞಾನದ ಆವಿಷ್ಕಾರ ಆಗಿದ್ದು ಸುರಕ್ಷಿತವಾಗಿ ಅಪಾಯ ತಂದೊಡ್ಡದಿರಲಿ ಎಂಬ ಜಾಗೃತ ಪ್ರಜ್ಞೆಯಿರಲಿ ಎಂದು ನವರಾತ್ರಿಯ ಆಧ್ಯಾತ್ಮಿಕ ಚಿಂತನೆಯನ್ನು ಜೀವನದಲ್ಲಿ ಅನುಷ್ಠಾನ ಮಾಡೋಣ ಎಂದು ಶುಭಾಶೀರ್ವಾದ ನೀಡಿದರು.


ಪ್ರಾತಃಕಾಲ ಐಶ್ವರ್ಯ ಆನೆಯೊಂದಿಗೆ ಅಗ್ರೋಧಕವನ್ನು ಕುಮದ್ವತಿ ತೀರ್ಥದಿಂದ ವಾದ್ಯಗೋಷ್ಠಿಯೊಂದಿಗೆ ತರಲಾಯಿತು. ಶ್ರೀಕ್ಷೇತ್ರದ ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ನೇಮಿನಾಥ ಸ್ವಾಮಿ, ವರಪ್ರಸಾದಪ್ರದಾಯಿನಿ ಶ್ರೀ ಪದ್ಮಾವತಿ ದೇವಿಯವರಿಗೆ ಇಷ್ಟಾರ್ಥ ಉಡಿ ತುಂಬಿಸಿ, ಪ್ರಾರ್ಥನೆ ಸಲ್ಲಿಸಿದ ಭಕ್ತ ಸಮೂಹವು ನವರಾತ್ರಿಯ ನವಮಿಯಂದು ಧನ್ಯರಾದರು. ಶ್ರೀಮಠದ ವಾಹನ, ಕೃಷಿ ಉಪಕರಣಗಳನ್ನು ಪೂಜಿಸಲಾಯಿತು.

ಸೇವಾಕರ್ತೃರಾದ ದೆಹಲಿಯ ರೇಣು ಜೈನ್ ಶ್ರೀ ಕೆ.ಕೆ. ಜೈನ್ ಕುಟುಂಬದವರನ್ನು ಪೂಜ್ಯ ಶ್ರೀಗಳವರು ಗೌರವಿಸಿ ಹರಸಿದರು. ರಾತ್ರಿ ಸಂಗೀತ, ಭಜನೆ, ಸಾಮೂಹಿಕ ಜಿನನಾಮ ಸ್ತುತಿಯೊಂದಿಗೆ ಸ್ವಸ್ತಿಶ್ರೀಗಳ ಪಾವನ ಸಾನಿಧ್ಯದಲ್ಲಿ ಭಕ್ತವೃಂದದವರು ಭಾಗಿಯಾದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago