Latest News

ಶಿವಮೊಗ್ಗ: ಸೌಜನ್ಯ ಸೇರಿದಂತೆ ಮತ್ತಿತರೇ ಪ್ರಕರಣಗಳನ್ನು ಮುಂದಿಟ್ಟುಕೊಂಡು ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಲು ಹೋಗಬೇಡಿ. ಜನರಲ್ಲಿ ಗೊಂದಲ ಮೂಡಿಸುವಂತ ಕೆಲಸವನ್ನು ಮಾಡಬೇಡಿ ಎಂಬುದಾಗಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕರ್ನಾಟಕದಲ್ಲಿ ಧರ್ಮಸ್ಥಳ ಒಂದು ರೀತಿಯಾಗಿ ಕಾಶಿ ಇದ್ದಂತೆ ಆಗಿದೆ. ಆದರೇ ಇಂದು ಆ ಬಗ್ಗೆ ಪರ ವಿರೋಧದ ಚರ್ಚೆಗಳಾಗುತ್ತಿವೆ. ನನ್ನ ಪ್ರಕಾರ ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ನಾವು ಯಾರೂ ಹಸ್ತಕ್ಷೇಪ ಮಾಡಬಾರದು. ಅದು ತಪ್ಪಾಗುತ್ತದೆ ಎಂದರು. ಧರ್ಮಸ್ಥಳದ ಬಗ್ಗೆ ಬಹಳಷ್ಟು ಭಕ್ತರು ನಂಬಿಕೆ ಇಟ್ಟುಕೊಂಡಿದ್ದಾರೆ. ಇದನ್ನು ನಾವು ಕೂಡ ನೋಡಿದ್ದೇವೆ. ನಾವು ಆ ಕ್ಷೇತ್ರದ ಮೇಲೆ ಮೊದಲಿನಿಂದಲೂ ನಂಬಿಕೆ ಇಟ್ಟುಕೊಂಡು ಬಂದಿದ್ದೇವೆ. ವೀರೇಂದ್ರ ಹೆಗ್ಗಡೆಯವರ ಬಗ್ಗೆಯೂ ಅಪಾರವಾದಂತ ಗೌರವವಿದೆ ಎಂದರು. ಸರ್ಕಾರ ಸಹ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕೆಲಸವನ್ನು ಮಾಡಬಾರದು. ಅದನ್ನು ನಮ್ಮ ಸರ್ಕಾರ ಎಂದಿಗೂ ಮಾಡುವುದಿಲ್ಲ. ಏಕೆಂದರೇ ಈ ಹಿಂದೆ ಸಿಗಂದೂರು ಕ್ಷೇತ್ರವನ್ನು ಮುಜರಾಯಿ ಇಲಾಖೆಗೆ ಸೇರಿಸೋದಕ್ಕೆ ಹಿಂದಿನ ಸರ್ಕಾರ ಮಾಡಿತ್ತು. ಬಿಜೆಪಿಯ ಸಂಸದರು, ಶಾಸಕರು ಸೇರಿಕೊಂಡು ಮಾಡಿದ್ದರು. ಆದರೇ ನಾವು ಯಾವುದೇ ಧಾರ್ಮಿಕ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲ್ಲ. ಮಾಡಬಾರದು ಕೂಡ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಸಾಗರ : ಅರಣ್ಯ ಭೂಮಿ ವಿವಾದ- ಸಭೆಯಲ್ಲಿ ಅರಣ್ಯ ಅಧಿಕಾರಿಗಳಿಗೆ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ

Koushik G K

ಸಾಗರ :ತಾಲ್ಲೂಕಿನ ಬಳಸಗೋಡ ಪ್ರದೇಶದಲ್ಲಿ ಜನರು ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆಂಬ ಕಾರಣಕ್ಕಾಗಿ ಅರಣ್ಯ ಇಲಾಖೆಯವರು ನೋಟಿಸ್ ನೀಡಿದ್ದರು. ಈ …

Read more

ಪೌರ ಕಾರ್ಮಿಕರು, ರೈತರು, ಸೈನಿಕರು ದೇವರ ಸುಪುತ್ರರು ; ಬೇಳೂರು ಗೋಪಾಲಕೃಷ್ಣ

Mahesha Hindlemane

ಹೊಸನಗರ ; ಪೌರ ಕಾರ್ಮಿಕರು, ದೇಶವನ್ನು ಕಾಯುವ ಸೈನಿಕರು ಹಾಗೂ ಅನ್ನ ಕೊಡುವ ರೈತರು ದೇವರ ಸುಪುತ್ರರು ದೇವರಿಲ್ಲದಿದ್ದರೇ ಹೇಗೆ …

Read more

ಶರನ್ನವರಾತ್ರಿ 5ನೇ ದಿನ ; ಹೊಂಬುಜ ಪದ್ಮಾವತಿ ದೇವಿಗೆ ಸಹಸ್ರನಾಮ ದೇವರ ಸ್ತುತಿ ಲಕ್ಷ ಹೂವಿನ ಪೂಜೆ ಸಮರ್ಪಣೆ

Mahesha Hindlemane

ಹೊಂಬುಜ ; ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ …

Read more

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ವೇತಾ ಆರ್ ಬಂಡಿ ; ನಾಳೆ ಪದಗ್ರಹಣ

Mahesha Hindlemane

ರಿಪ್ಪನ್‌ಪೇಟೆ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಹೊಸ ಅಧ್ಯಾಯವನ್ನು ಬರೆಯಲಿರುವ ಶ್ವೇತಾ ಆರ್ ಬಂಡಿ. ನಾಳೆ (ಸೆಪ್ಟೆಂಬರ್ 27) ಅವರು …

Read more

ಹೊಸನಗರ ; ಜಾತಿ ಸಮೀಕ್ಷೆಗೆ ಹಾಜರಾಗದ BRC ಸಸ್ಪೆಂಡ್ !

Mahesha Hindlemane

ಹೊಸನಗರ ; ರಾಜ್ಯದಲ್ಲಿ ಸೆ. 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಈ ಒಂದು ಸಮೀಕ್ಷೆ …

Read more

ಬೆಳಕೋಡು ಹಾಲಸ್ವಾಮಿಗೌಡ ನಿಧನ !

Mahesha Hindlemane

ರಿಪ್ಪನ್‌ಪೇಟೆ ; ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಗುರುವಾರ ಸಂಜೆ 5:00 ಗಂಟೆಗೆ …

Read more

ಬದುಕು ಕಟ್ಟಿಕೊಳ್ಳಲು ಶಿಕ್ಷಣ ಅಗತ್ಯ ; ಆನಂದಪುರ ಶ್ರೀ

Mahesha Hindlemane

ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಕೀಳರಿಮೆ ಇರಬಾರದು. ಈ ಹಿಂದೆ ಅಮೇರಿಕಾ ದೇಶದಿಂದ ಗೋಧಿಯನ್ನು ಆಮದು ಮಾಡಿಕೊಂಡು ಶಾಲಾ …

Read more

ಶರನ್ನವರಾತ್ರಿ ಪರ್ವಾಚರಣೆ – ಚತುರ್ಥ ದಿನ | ನಿರ್ಮಲ ಭಕ್ತಿಯ ಫಲ ಸಮರ್ಪಣೆಯಿಂದ ಪ್ರಕೃತಿಯ ಆರಾಧನೆ ; ಹೊಂಬುಜ ಶ್ರೀ

Mahesha Hindlemane

ಹೊಂಬುಜ ; “ಶರನ್ನವರಾತ್ರಿಯ ಪರ್ವವು ಭಾರತೀಯ ಧರ್ಮ ಪರಂಪರೆಯಲ್ಲಿ ವಿಶಿಷ್ಟವಾದುದು. ಪ್ರಕೃತಿಯ ಆರಾಧನೆಯ ಸಂಸ್ಕೃತಿ ಪ್ರಾಚೀನ ಕಾಲದಿಂದಲೂ ಪ್ರಚಲಿತದಲ್ಲಿತ್ತು” ಎಂದು …

Read more

ಎಸ್.ಎಲ್. ಭೈರಪ್ಪರಿಗೆ ರಿಪ್ಪನ್‌ಪೇಟೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

Mahesha Hindlemane

ರಿಪ್ಪನ್‌ಪೇಟೆ : ಕನ್ನಡ ಸಾಹಿತ್ಯದ ಮಹಾಮುನಿ, ಕಾದಂಬರಿಗಳ ಚಕ್ರವರ್ತಿ, ಅನನ್ಯ ಚಿಂತಕ ಎಸ್. ಎಲ್. ಭೈರಪ್ಪರ ಅಗಲಿಕೆಯಿಂದ ಸಾಹಿತ್ಯ ಜಗತ್ತು …

Read more