ಭದ್ರಾವತಿ : ಭದ್ರಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ ಸಂಗಮೇಶ್ ಅವರ ಪರವಾಗಿ ಅನುಮತಿ ಪಡೆಯದೇ ಪ್ರಚಾರ ಮಾಡುತ್ತಿದ್ದಂತ ವಾಹನವನ್ನು ಮಂಗಳವಾರ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ್ದು, ಶ್ರೀ ರಾಘವೇಂದ್ರ ಫ್ಲೈಯಿಂಗ್ ಸ್ಕ್ವಾಡ್ 02 ನೇ ತಂಡದ ಅಧಿಕಾರಿ, ಭದ್ರಾವತಿ ವಿಧಾನ ಸಭಾ ಕ್ಷೇತ್ರ ರವರು ಏ.03ರಂದು ಸಂಜೆ ಫ್ಲೈಯಿಂಗ್ ಸ್ಕ್ವಾಡ್ ನ ಸದಸ್ಯರಾದ ಶ್ರೀ ಗವಿರಂಗಪ್ಪ ರವರೊಂದಿಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಚ್.ಕೆ ಜಂಕ್ಷನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ ಕಾಂಗ್ರೆಸ್ ಪಕ್ಷದ ಪರವಾಗಿ ಯಾವುದೇ ಅನುಮತಿ ಇಲ್ಲದೇ ವಾಹನದಲ್ಲಿ ಪ್ರಚಾರ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಬಂದಿತ್ತು ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತೆರಳಿ ಪರಿಶೀಲಿಸಲಾಗಿ ಟಾಟಾ ಎಸಿಇ ವಾಹನದ ಹಿಂಬದಿಗೆ ಭದ್ರಾವತಿಯ ಮಾನ್ಯ ಶಾಸಕರಾದ ಬಿ.ಕೆ ಸಂಗಮೇಶ್ವ ರವರ ಚಿತ್ರ ಹಾಗೂ ಕಾಂಗ್ರೆಸ್ ಮುಖಂಡರುಗಳ ಚಿತ್ರ ಇರುವ ಪೋಸ್ಟರ್ ಅಂಟಿಸಿಕೊಂಡು ವಾಹನದ ಒಳಗಡೆ ಸ್ಪೀಕರ್ ಬಾಕ್ಸ್ ಇಟ್ಟುಕೊಂಡು ಎಲ್ಇಡಿ ಪರದೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರದ ಮುದ್ರಿತ ಧ್ವನಿ ಪ್ರಸಾರವಾಗುತ್ತಿದ್ದು, ವಾಹನದ ಚಾಲಕನಾದ ಚಂದ್ರು ಈತನನ್ನು, ಪ್ರಚಾರ ಮಾಡಲು ಚುನುವಣಾ ಆಯೋಗದಿಂದ ಪಡೆಯಲಾದ ಅನುಮತಿ ಪತ್ರದ ಬಗ್ಗೆ ವಿಚಾರಿಸಿಲಾಗಿ ಆತನು ಯಾವುದೇ ಅನುಮತಿ ಪತ್ರ ಇಲ್ಲವೆಂದು ತಿಳಿಸಿರುತ್ತಾನೆ ಎಂದಿದೆ.
ಸದರಿ ವಾಹನದ ಚಾಲಕನು ಸಾರ್ವಜನಿಕ ಸ್ಥಳದಲ್ಲಿ ಚುನುವಣಾ ಆಯೋಗದ ಅನುಮತಿ ಪಡೆಯದ ಕಾಂಗ್ರೆಸ್ ಪಕ್ಷದ ಚಿನ್ಹೆ ಇರುವ ಪೋಸ್ಟರ್ ಗಳನ್ನು ವಾಹನಕ್ಕೆ ಹಾಕಿಕೊಂಡು, ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿರುವುದು ಕಂಡುಬಂದಿದ್ದು ಇದು ಚುನಾವಣಾ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಆಗಿರುತ್ತದೆ ಎಂದು ಶ್ರೀ ರಾಘವೇಂದ್ರ ಫ್ಲೈಯಿಂಗ್ ಸ್ಕ್ವಾಡ್ 02 ನೇ ತಂಡದ ಅಧಿಕಾರಿ ಯವರು ನೀಡಿದ ದೂರಿನ ಮೇರೆಗೆ ವಾಹನದ ಚಾಲಕ ಶಿವಮೊಗ್ಗದ ವಿನೋಬನಗರ ನಿವಾಸಿ ಚಂದ್ರಪ್ಪ (26) ಈತನ ವಿರುದ್ಧ RP Act & Karnataka Open Disfigurement Act ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದೆ.
ರಿಪ್ಪನ್ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…
ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…
ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…
ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…
ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…