ಜಲಪಾತ ವೀಕ್ಷಣೆ ವೇಳೆ ಆಯತಪ್ಪಿ ಬಂಡೆ ಮೇಲಿಂದ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ !

0 51

ಭದ್ರಾವತಿ : ಜುಲೈ 23ರಂದು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಸುಣ್ಣದಹಳ್ಳಿ ಕೆ.ಹೆಚ್. ನಗರ ನಿವಾಸಿ ಶರತ್ (23) ಎಂಬ ಯುವಕ ಅರಶಿನ ಗುಂಡಿ ಜಲಪಾತ ವೀಕ್ಷಣೆಯ ಸಂದರ್ಭ ಆಯತಪ್ಪಿ ಬಂಡೆಯ ಮೇಲಿಂದ ಬಿದ್ದು ನಾಪತ್ತೆಯಾಗಿದ್ದ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಕೊಲ್ಲೂರು ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರ‌ ಸತತ ಕಾರ್ಯಾಚರಣೆಯಿಂದಾಗಿ ಒಂದು ವಾರದ ಬಳಿಕ ಶರತ್ ಮೃತದೇಹ ಇಂದು ಸಿಕ್ಕಿದೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ. https://fb.watch/m62mDpCO58/?mibextid=MGVWDh

ಜುಲೈ 23ರಂದು ಕೊಲ್ಲೂರಿಗೆ ಬಂದಿದ್ದ ಶರತ್‌, ಜಲಪಾತ ವೀಕ್ಷಣೆಗೆ ತೆರಳಿದ್ದಾಗ ಬಂಡೆ ಮೇಲಿಂದ ಕಾಲು ಜಾರಿ ನೀರಿನಲ್ಲಿ ಕೊಚ್ಚಿ ಹೋದ ದುರಂತ ಸಂಭವಿಸಿತ್ತು. ಈ ವಿಡಿಯೋ ಎಲ್ಲೆಡೆ ವೈರಲ್‌ ಕೂಡ ಆಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮಳೆ ಇದ್ದಿದ್ದರಿಂದ ಎಷ್ಟೇ ಕಾರ್ಯಚರಣೆ ನಡೆಸಿದ್ದರೂ ಶರತ್ ಸುಳಿವು ಸಿಕ್ಕಿರಲಿಲ್ಲ. ಕೊನೆಗೆ ಸತತ ಕಾರ್ಯಚರಣೆಯಿಂದ 200 ಮೀಟರ್ ಕೆಳಗಡೆ ಬಂಡೆಗಲ್ಲಿನ ಒಳಗಡೆ ಸಿಲುಕಿ ಹಾಕಿಕೊಂಡಿದ್ದ ಶರತ್ ಮೃತದೇಹ ಪತ್ತೆಯಾಗಿದ್ದು, ಇಂದು ಮೃತದೇಹವನ್ನು ಹೊರತರಲಾಗಿದೆ.

Leave A Reply

Your email address will not be published.

error: Content is protected !!