ಭದ್ರಾವತಿ : ಪೊಲೀಸರ ಕಿರುಕುಳದಿಂದ ಮರ್ಯಾದೆಗೆ ಅಂಜಿ ಮಾನಸಿಕವಾಗಿ ಕುಗ್ಗಿ ಹೋಗಿದ್ದ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಆರೋಪವೊಂದು ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ಕೇಳಿಬಂದಿದೆ.
ಕೋಣೆಕೊಪ್ಪ ನಿವಾಸಿ ಮಂಜುನಾಥ್ (28) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ಇದೇ ತಿಂಗಳ 11 ರಂದು ಸಂಜೆ ವೇಳೆ ಹೊಳೆಹೊನ್ನೂರಿನಲ್ಲಿ ಕಾರಣವಿಲ್ಲದೇ ಮಂಜುನಾಥ್ ನನ್ನು ಪೊಲೀಸರು ಕರೆದೊಯ್ಯುದಿದ್ದು, ಮಂಜುನಾಥ್ ಗೆ ನಾಲ್ಕು ಪೊಲೀಸರಿಂದ ಕಿರುಕುಳ ನೀಡಿರುವ ಆರೋಪ ಮೃತ ಮಂಜುನಾಥ್ ಪತ್ನಿ ಕಮಲಾಕ್ಷಿ ಮಾಡುತ್ತಿದ್ದು, ಪೊಲೀಸರ ವಿರುದ್ಧವೇ ಕೇಸ್ ದಾಖಲಾಗಿದೆ.
ನಾಲ್ಕು ತಿಂಗಳ ಗರ್ಭಿಣಿಯಾದ ಮಂಜುನಾಥ್ ಪತ್ನಿ ಕಮಲಾಕ್ಷಿ, ಮಂಜುನಾಥ್ ನನ್ನು ಕರೆದೊಯ್ಯುದ ಪೊಲೀಸರು ಕಿರುಕುಳ ನೀಡಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ನಂತರ ಮನೆಗೆ ಬಂದ ಮಂಜುನಾಥ್ ಮಾನಸಿಕವಾಗಿ ಕುಗ್ಗಿ ಹೋಗಿದ್ದು ಹಾಗೂ ಮರ್ಯಾದೆಗೆ ಅಂಜಿ ಮನೆಯಲ್ಲೇ ಇದ್ದರು ಎಂದು ತಿಳಿಸಿದ್ದಾರೆ. ಮಂಜುನಾಥ್ ಮೊನ್ನೆ ರಾತ್ರಿ ಹೆಂಡತಿಯನ್ನು ಬೇರೆ ರೂಂ ನಲ್ಲಿ ಮಲಗುವಂತೆ ಹೇಳಿ ನೇಣಿಗೆ ಶರಣಾಗಿರುವುದಾಗಿ ತಿಳಿಸಿದ್ದಾರೆ.
ಈ ಹಿಂದೆ ಕೂಡ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಲಾಕ್ ಅಪ್ ಡೆಥ್ ಪ್ರಕರಣವೊಂದು ದಾಖಲಾಗಿತ್ತು. ಆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪೊಲೀಸರ ಕಿರುಕುಳ ಪ್ರಕರಣ ಬೆಳಕಿಗೆ ಬಂದಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…