ಭದ್ರಾವತಿ: ಇಲ್ಲಿನ ಜನ್ನಾಪುರದಲ್ಲಿ ಸಾಲಬಾಧೆ ತಾಳಲಾರದೆ ದಂಪತಿ ನೇಣಿಗೆ ಶರಣಾದ ಘಟನೆ ವರದಿಯಾಗಿದೆ.
ಮಧು(27), ಮೋನಿಕಾ (21) ಮೃತ ದಂಪತಿ ಆಗಿದ್ದಾರೆ. ಹಣದ ತುರ್ತು ಅವಶ್ಯಕತೆ ಇದ್ದ ಕಾರಣ ಮೈಕ್ರೇ ಫೈನಾನ್ಸ್ ಮೂಲಕ 2 ಲಕ್ಷ ಸಾಲ ಪಡೆದಿದ್ದರು. ಹೀಗೆ ಪಡೆದ ನಂತ್ರ ಫೈನಾನ್ಸ್ ಅಧಿಕಾರಿಗಳು, ಸಿಬ್ಬಂದಿ ಹಣ ವಾಪಾಸ್ ಕಟ್ಟುವಂತೆ ಪೀಡಿಸಿದ್ದಾರೆ. ಈ ಕಾರಣಕ್ಕಾಗಿಯೇ ದಂಪತಿಗಳಿಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಪದವಿ ಶಿಕ್ಷಣ ಪಡೆದು ಕೂಲಿ ಕೆಲಸವನ್ನು ಮಧು ಮಾಡುತ್ತಿದ್ದರು. ಫೈನಾನ್ಸ್ ನಿಂದ ಪಡೆದ ಸಾಲಕ್ಕೆ ಸರಿಯಾದ ಸಮಯಕ್ಕೆ ಬಡ್ಡಿ ಕೂಡ ಪಾವತಿಸಿದ್ದರು ಎನ್ನಲಾಗಿದೆ. ಹೀಗಿದ್ದೂ ಪದೇ ಪದೇ ಪಡೆದ ಹಣ ಕಟ್ಟು ಎಂಬುದಾಗಿ ಪೀಡಿಸಿದ ಕಾರಣ ಭದ್ರಾವತಿಯ ಜನ್ನಾಪುರದಲ್ಲಿ ಬುಧವಾರ ರಾತ್ರಿ ಎನ್ ಟಿಬಿ ಕಚೇರಿಯ ಬಳಿಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಬೆಳಿಗ್ಗೆ 8 ಗಂಟೆಯಾದರೂ ಮನೆಯಿಂದ ಯಾರೂ ಹೊರಬಾರದ ಹಿನ್ನಲೆಯಲ್ಲಿ ಅನುಮಾನಗೊಂಡು ಸ್ಥಳೀಯರು ಮನೆ ಬಾಗಿಲು ತಟ್ಟಿದರೂ ಸ್ಪಂದಿಸಿಲ್ಲ. ಹೀಗಾಗಿ ನ್ಯೂ ಟೌನ್ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ಹೊಡೆದು ನೋಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ಫೈನಾನ್ಸ್ ಕಿರುಕುಳದಿಂದ ದಂಪತಿ ಆತ್ಮಹತ್ಯೆಗೆ ಶರಣಾದ್ರೇ, ಅವರ 3 ವರ್ಷ ಹಾಗೂ 9 ತಿಂಗಳ ಗಂಡು ಮಕ್ಕಳು ಈಗ ತಂದೆ-ತಾಯಿಗಳಿಲ್ಲದೇ ಅನಾಥರಾಗಿದ್ದಾರೆ.
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…
ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…