ಭದ್ರಾವತಿ : ಪಟ್ಟಣದಲ್ಲಿರುವ ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಭೀತಿಯಿಂದ ಕೆಲಸ ಕಳೆದುಕೊಳ್ಳುವ ಆತಂಕಕ್ಕೆ ಮತ್ತೊಂದು ಜೀವವನ್ನು ಬಲಿ ತೆಗೆದುಕೊಂಡಿದೆ.
ಈ ಕಾರ್ಖಾನೆಯ ಗುತ್ತಿಗೆ ಕಾರ್ಮಿಕ ಚೇತನ್ ಕುಮಾರ್ (32) ಎಂಬುವವರು ತಮ್ಮ ತಂಗಿಯ ಮದುವೆ ಶಾಸ್ತ್ರದ ನಡುವೆಯೇ ನೇಣಿಗೆ ಶರಣಾಗಿದ್ದಾರೆ. ನಗರದ ದೈವಜ್ಞ ಕಲ್ಯಾಣ ಮಂಟಪದ ಹಿಂದೆ ಮರಕ್ಕೆ ಸೀರೆ ಬಿಗಿದು ನೇಣಿಗೆ ಕೊರಳೊಡ್ಡಿದ್ದಾರೆ. ಇದೇ ಕಲ್ಯಾಣ ಮಂಟಪದಲ್ಲಿ ತಮ್ಮ ತಂಗಿಯ ಮದುವೆ ನಡೆಯುತ್ತಿತ್ತು. ಸಾವಿನ ನಡುವೆಯೇ ಹಿರಿಯರು ಮದುವೆ ಶಾಸ್ತ್ರ ಮುಗಿಸಿದ್ದಾರೆ.
ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ- ಉಕ್ಕು ಕಾರ್ಖಾನೆ ವಿಐಎಸ್ಎಲ್ ನಷ್ಟದಿಂದಾಗಿ ಮುಚ್ಚುತ್ತಿದೆ. ಕಾರ್ಮಿಕ ವಲಯದಲ್ಲಿ ಇದು ಆತಂಕ ಸೃಷ್ಟಿಸಿದೆ. ಕಳೆದ 19 ದಿನಗಳಲ್ಲಿ ಮೂರನೇ ಕಾರ್ಮಿಕ ಸಾವಿಗೀಡಾಗುತ್ತಿದ್ದು, ಇನ್ನಿಬ್ಬರು ಹೃದಯಾಘಾತದಿಂದ ನಿಧನರಾಗಿದ್ದರು. ಹೇಮಗಿರಿ, ನಾಗರಾಜ್ ಈ ಹಿಂದೆ ಮೃತಪಟ್ಟವರು.
ಶಿವಮೊಗ್ಗ : ಈ ಬಾರಿ ಬಹಳ ಕುತೂಹಲದ ಕ್ಷೇತ್ರವೆಂದರೆ ಶಿವಮೊಗ್ಗ ಲೋಕಸಭಾ ಕ್ಷೇತ್ರ. ಬಿಜೆಪಿಯಿಂದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ…
ಸೊರಬ: ಪಟ್ಟಣದ ಚಿಕ್ಕಪೇಟೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ (ಪೂರ್ವ ಭಾಗ) ಮತಗಟ್ಟೆ ಸಂಖ್ಯೆ 159 ರಲ್ಲಿ ಸುಮಾರು…
ಶಿವಮೊಗ್ಗ : ಉತ್ತರ ಮತ್ತು ಮಧ್ಯ ಕರ್ನಾಟಕ ಕ್ಷೇತ್ರಗಳಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿದ್ದು, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ…
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…