ಹೊಸನಗರ: ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮದ ಮುರುಳಿಧರಭಟ್ರವರ ತೋಟದ ಮನೆಯಲ್ಲಿ ಕಳ್ಳರು ರಾತ್ರಿ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ವರದಿಯಾಗಿದೆ.
ಮಂಗಳವಾರ ಮುರುಳಿಧರ್ ಭಟ್ರವರು ತೋಟದ ಮನೆಯಿಂದ ಹೊಸನಗರದ ಮನೆಗೆ ಸಂಜೆ 7ಗಂಟೆಯ ನಂತರ ಬಂದಿದ್ದಾರೆ. ಬರುವ ಸಂದರ್ಭದಲ್ಲಿ ಮನೆಯ ಮುಂಬಾಗಿನ ಬಾಗಿಲಿಗೆ ಬೀಗ ಹಾಕಿಕೊಂಡು ಬಂದಿದ್ದು ಅವರು ಹಾಗೂ ಕೆಲಸದವರು ಬುಧವಾರ ಬೆಳಿಗ್ಗೆ ಕೆಲಸಕ್ಕೆ ಬಂದ ಸಂದರ್ಭದಲ್ಲಿ ಬೀಗ ಮುರಿದಿರುವ ಬಗ್ಗೆ ಗೊತ್ತಾಗಿದ್ದು ಮನೆಯ ಮಾಲೀಕ ಮುರುಳಿಧರ್ ಭಟ್ರವರು ಹೊಸನಗರ ಠಾಣೆಗೆ ಬೀಗ ಮುರಿದಿರುವ ಬಗ್ಗೆ ದೂರು ನೀಡಿದ್ದಾರೆ.
ಮನೆಯ ಬೀಗ ಮುರಿದಿರುವ ಬಗ್ಗೆ ದೂರು ಬರುತ್ತಿದ್ದಂತೆ ಹೊಸನಗರದ ಸರ್ಕಲ್ ಇನ್ಸ್ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ಹಾಗೂ ಎ.ಎಸ್.ಐ ಶಿವಪುತ್ರರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ತಕ್ಷಣ ಬೆರಳಚ್ಚು ತಜ್ಞರನ್ನು ಹಾಗೂ ಶ್ವಾನದಳದವರನ್ನು ಕರೆಸಲಾಗಿದ್ದು ಮುಂದಿನ ತನಿಖೆ ನಡೆಯುತ್ತಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…