Hosanagara | ಸ್ಪೋಟ್ಸ್ ಅಸೋಸಿಯೇಷನ್‌ ನವೀಕೃತ ಕಟ್ಟಡ ಉದ್ಘಾಟನೆ ;ಸಂಘ-ಸಂಸ್ಥೆಗಳು ಸಮಾಜಮುಖಿ ಕೆಲಸ ಮಾಡಿದರೆ ಉತ್ತಮ ಏಳಿಗೆ ಕಾಣಲು ಸಾಧ್ಯ – ಬೇಳೂರು


ಹೊಸನಗರ: ಯಾವುದೇ ಸಂಘ-ಸಂಸ್ಥೆಗಳು ದೈನಂದಿನ ಚಟುವಟಿಕೆಗಳೊಂದಿಗೆ ಸಮಾಜಮುಖಿಯಾಗಿ ಕೆಲಸ ಮಾಡಿದರೆ ಸಮಾಜದಲ್ಲಿ ಉತ್ತಮ ಏಳಿಗೆ ಕಾಣುತ್ತದೆ ಎಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣರವರು ಹೇಳಿದರು.


ಹೊಸನಗರದ ಸ್ಪೋಟ್ಸ್ ಅಸೋಸಿಯೇಷನ್ ಕ್ಲಬ್ ಆವರಣದಲ್ಲಿ ನವೀಕೃತ ಕಟ್ಟಡ ಉದ್ಘಾಟಿಸಿ ಮಾತನಾಡಿ, ಈ ಸಂಸ್ಥೆ ಸಮಾಜದಲ್ಲಿ ಉತ್ತಮ ಕೊಡಿಗೆ ನೀಡುತ್ತಿರುವ ಬಗ್ಗೆ ತಿಳಿದುಕೊಂಡಿದ್ದೇನೆ ಈ ಸಂಸ್ಥೆ ಸದಸ್ಯರ ವಂತಿಕೆಯಿಂದ ಉತ್ತಮ ಕಟ್ಟಡ ನಿರ್ಮಿಸಿರುವುದು ಹೆಮ್ಮೆಯಾಗುತ್ತಿದೆ. ಮುಂದಿನ ದಿನದಲ್ಲಿ ಅನಾಥಶ್ರಮ ಮಾಡಲು ಎರಡು ಎಕರೆ ಜಾಗ ಕೇಳಿದ್ದು ಅದನ್ನು ಸರ್ಕಾರದ ಮಟ್ಟದಲ್ಲಿ ಮಂಜೂರಾತಿ ಮಾಡಿಸಿಕೊಡಲು ಸಿದ್ಧನಿದ್ದು ಜಾಗ ಹುಡುಕಲು ತಿಳಿಸಿದ್ದೇವೆ. ನಾನು ಶಾಸಕನಾಗಿ ನೀವು ಮಾಡುವ ಸಮಾಜಮುಖಿ ಉತ್ತಮ ಕೆಲಸಗಳಿಗೆ ನಾನು ನಿಮ್ಮ ಜೊತೆಗಿರುತ್ತೇನೆ ಎಂದರು.


ಈ ಸಮಾರಂಭದ ಅದ್ಯಕ್ಷತೆ ವಹಿಸಿ ಮಾತನಾಡಿದ ಗುಬ್ಬಿಗ ಅನಂತರಾವ್, 1959ನೇ ಸಾಲಿನಲ್ಲಿ ಸಂಸ್ಥಾಪಕ ಅಧ್ಯಕ್ಷರಾದ ಮಳಲಿ ಬಿ. ಪರಮೇಶ್ವರರಾವ್‌ರವರ ಪರಿಶ್ರಮದಿಂದ ಸ್ಥಾಪನೆಗೊಂಡ ಈ ಸಂಸ್ಥೆಯನ್ನು ಇಷ್ಟು ವರ್ಷಗಳ ಕಾಲ ಬೆಳೆಸಲು ನಮ್ಮ ಸಂಸ್ಥೆಯ ಮಾಜಿ ಅಧ್ಯಕ್ಷರ, ಸದಸ್ಯರ ಪಾತ್ರ ಹಿರಿದಾಗಿದೆ. ನಮ್ಮ ಸಂಸ್ಥೆ ಸುಮಾರು 64ನೇ ವರ್ಷಕ್ಕೆ ಕಾಲಿಟ್ಟಿದೆ ಈಗ 265 ಸದಸ್ಯರನ್ನು ಹೊಂದಿದೆ. ಈ ಸದಸ್ಯರ ಪರಿಶ್ರಮ ಈ ಸಂಸ್ಥೆಯ ಮೇಲಿದೆ ಸ್ಥಾಪಿಸುವಾಗ ಯಾರು ಈ ಮಟ್ಟಕ್ಕೆ ಬೆಳೆಯುತ್ತದೆ ಹೊಸನಗರ ತಾಲ್ಲೂಕಿಗೆ ಒಂದು ಮಾದರಿ ಸಂಸ್ಥೆಯಾಗುತ್ತದೆ ಎಂದು ತಿಳಿದಿರಲಿಲ್ಲ‌. ನಮ್ಮ ಈ ಸಂಸ್ಥೆ ಇಲ್ಲಿಯವರೆಗೆ ಸಾರ್ವಜನಿಕರ ಉಪಯೋಗದ ಉದ್ಧೇಶಕ್ಕಾಗಿಯೇ ಹುಟ್ಟು ಹಾಕಿರುವ ಸಂಸ್ಥೆಯಾಗಿದ್ದು ನಮ್ಮ ಸಂಸ್ಥೆ ಇಲ್ಲಿಯವರೆಗೆ ಅನೇಕ ಬಂದೂಕು ತರಬೇತಿ ಶಿಬಿರ, ಆರೋಗ್ಯ ತಪಾಸಣೆ ಶಿಬಿರ, ಐ ಕ್ಯಾಂಪ್, ರಕ್ತದಾನ ಶಿಬಿರ, ಪ್ರತಿಬಾ ಪುರಸ್ಕಾರ, ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತೀಕ ಕಾರ್ಯಕ್ರಮಗಳು ನಾಟಕ ರಂಗ ಕಲಾವಿದರಿಗೆ ಸಹಾಯ ಹಸ್ತ, ಅನಾರೋಗ್ಯ ಪೀಡಿತರಿಗೆ ಧನ ಸಹಾಯ, ಕ್ರೀಡಾಕೂಟಗಳಿಗೆ ಧನ ಸಹಾಯ ಅನೇಕ ಕ್ರೀಡಾಪಟುಗಳ ಹುಟ್ಟು ಹಾಕುವಿಕೆ ಇವುಗಳ ಜೊತೆಗೆ ನಮ್ಮ ಸಂಸ್ಥೆಯ ಸುತ್ತ ಮಕ್ಕಳ ಆಟವಾಡುವುದಕ್ಕಾಗಿ ತೊಟ್ಟಿಲು ನಿರ್ಮಾಣ, ಜಾರು ಬಂಡಿ, ದೋಣಿ ಆಟ, ಸಿಂಹಧಾಮ ನಿರ್ಮಾಣ ವ್ಯಾಯಾಮ ಶಾಲೆ, ಸಂಗೀತ ಶಾಲೆ ಇತರೆ ಸಾಮಾಗ್ರಿಗಳಿಂದ ಸಾವಿರಾರು ಮಕ್ಕಳು ಆಟವಾಡುವುದನ್ನು ನೋಡುವುದೇ ಹೆಮ್ಮೆಯ ವಿಷಯದ ಜೊತೆಗೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ನಮ್ಮ ಸಂಸ್ಥೆ ಮರುಣೋತ್ತರ ನಿಧಿ ಸ್ಥಾಪಿಸಲಾಗಿದ್ದು ನಮ್ಮ ಸಂಸ್ಥೆಯ ಸದಸ್ಯರು ಮರಣ ಹೊಂದಿದರೆ ಸಂಸ್ಥೆಯಿಂದ ಮರುಣೋತ್ತರ ನಿಧಿಯಿಂದ ಹಣ ಸಹಾಯ ಮಾಡಲಾಗುವುದು ಎಂದರು.


ಶಾಲೆ ದತ್ತು:

ನಮ್ಮ ಸಂಸ್ಥೆ ಹೊಸನಗರದ ಸರ್ಕಾರಿ ಹಿರಿಯ ಬಾಲಕರ ಪಾಠ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಈ ಶಾಲೆಯ ಅಭಿವೃದ್ಧಿ ಮತ್ತು ಶಾಲೆಯ ಯಶಸ್ಸಿಗೆ ಶ್ರಮಿಸಲಾಗುತ್ತಿದೆ ಮುಂದಿನ ದಿನದಲ್ಲಿ ನಮ್ಮ ಈ ಸಂಸ್ಥೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅಬಿವೃದ್ಧಿ ಕಾರ್ಯಕ್ರಮದ ಜೊತೆಗೆ ತಾಲ್ಲೂಕಿನ ಜನರಿಗೆ ಸಂಕಷ್ಟದಲ್ಲಿರುವ ಜನರ ಕಷ್ಟ ಸುಖಗಳಲ್ಲಿ ಬಾಗಿಯಾಗಲು ಸಿದ್ದವಿದ್ದು ಇದಕ್ಕೆ ಸಂಘದ ಸದಸ್ಯರ ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ ಎಂದರು.


ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಆರ್.ಎಂ. ಮಂಜುನಾಥ ಗೌಡರವರು ಸಂಸ್ಥೆಯ ಏಳಿಗೆಗೆ ಸಂಘದ ಸದಸ್ಯರು ಶ್ರಮಿಸಬೇಕೆಂದರು.
ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಬಿ. ಆರ್ ಪ್ರಭಾಕರ್, ಕಾರ್ಯದರ್ಶಿ ಬಿ.ಎಂ. ಶ್ರೀಧರ್, ಲೆಕ್ಕ ಪರಿಶೋಧಕರಾದ ಎಂ.ಪಿ. ಸುರೇಶ್, ಹೆಚ್.ಬಿ ಕಲ್ಯಾಣಪ್ಪ ಗೌಡ, ಬಿ.ಎಸ್ ಸುರೇಶ, ಎಂ.ವಿ. ಸುರೇಶ, ಹೆಚ್. ಬಿ ಸತ್ಯನಾರಾಯಣ, ಎನ್ ಶ್ರೀಧರ ಉಡುಪ, ಶ್ರೀನಿವಾಸ್ ಕಾಮತ್, ಎನ್. ದತ್ತಾತ್ರೇಯ ಉಡುಪ, ನಾಗೇಶ್, ಉಮೇಶ್ ಕಂಚುಗಾರ್, ಮಹೇಂದ್ರ, ಎಂ.ಎಸ್. ಶ್ರೀಕಾಂತ, ಕೆ.ಬಿ.ಸತೀಶ, ವ್ಯವಸ್ಥಾಪಕರಾದ ಕಟ್ಟೆ ಸುರೇಶ, ಕೃಷ್ಣಮೂರ್ತಿ, ಚಂದ್ರಮೌಳಿ, ಎರಗಿ ಉಮೇಶ್, ಬಿ.ಜಿ. ನಾಗರಾಜ್, ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ಮಂಜುನಾಥ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Share
Published by
Malnad Times

Recent Posts

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

2 hours ago

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

5 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

8 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

21 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

24 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

1 day ago