ಅಕ್ರಮ ಮರಳು ಸಾಗಾಣಿಕೆ, ಮೂರು ಟಿಪ್ಪರ್ ಲಾರಿಗಳು ವಶಕ್ಕೆ
ರಿಪ್ಪನ್ಪೇಟೆ: ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯನ್ನಾದರಿಸಿ ರಿಪ್ಪನ್ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ಕುಮಾರ ಎಸ್.ಪಿ.ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಮೂರು ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮವಾಗಿ ಮರಳು ತುಂಬಿಕೊಂಡು ಕೋಡೂರು ಮಾರ್ಗವಾಗಿ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯನ್ನಾಧರಿಸಿ ರಿಪ್ಪನ್ಪೇಟೆ ಪೊಲೀಸ್ ಸಬ್ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿವರ್ಗ ದಾಳಿ ನಡೆಸಿ ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಪತ್ತೆ ಕಾರ್ಯಾಚರಣೆಯಲ್ಲಿ ಹೆಚ್.ಸಿ.ಉಮೇಶ್, ಶಿವಕುಮಾರ ನಾಯ್ಕ್ ಹಾಗೂ ಜೀಪ್ ಚಾಲಕ ಮಧುಸೂದನ್ ಇದ್ದರು.