Categories: Hosanagara News

ಅಗ್ನಿ ಅವಘಡ ; 600 ಅಡಿಕೆ ಗಿಡಗಳು ಸುಟ್ಟು ಭಸ್ಮ ! ಅಪಾರ ನಷ್ಟ

ಹೊಸನಗರ: ತಾಲ್ಲೂಕಿನ ಕಾಳಿಕಾಪುರ ಗ್ರಾಮದ ಸರ್ವೆನಂಬರ್ 32/1ರಲ್ಲಿ ಬಿ. ಸೀನಪೂಜಾರಿ ಬಿನ್ ಮಾಚಪೂಜಾರಿಯವರ ಅಡಿಕೆ ಮರಕ್ಕೆ ಬೆಂಕಿ ತಗುಲಿ ಸುಮಾರು 600 ಅಡಿಕೆ ಮರಗಳು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ.


ಸೀನಪೂಜಾರಿಯವರು ತಮ್ಮ ಸ್ವಂತ ಜಾಗದಲ್ಲಿ ಸುಮಾರು 600 ಅಡಿಕೆ ಸಸಿಗಳನ್ನು ನೆಟ್ಟಿದ್ದು ಅದಕ್ಕೆ ಡ್ರಿಪ್ ಪೈಪ್ ಹಾಕಲಾಗಿತ್ತು. ಏಕಾಏಕಿ ಗಾಳಿಯ ಮೂಲಕ ಬೆಂಕಿ ತಗಲಿದ್ದರಿಂದ 600 ಅಡಿಕೆ ಮರಗಳು ಸುಟ್ಟು ಕರಕಲಾಗುವ ಜೊತೆಗೆ ನೀರಿನ ಸೌಲಭ್ಯಕ್ಕಾಗಿ ಮಾಡಿದ ಡ್ರಿಪ್ ಪೈಪ್ ಸಹ ಸುಟ್ಟು ಹೋಗಿದೆ. ಸುಮಾರು ಅಂದಾಜು 2 ಲಕ್ಷ ರೂ.ನಷ್ಟು ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.


ಹೊಸನಗರ ಆಗ್ನಿ ಶಾಮಕ ದಳದ ಸಿಬ್ಬಂದಿಯವರು ಸಮಯಕ್ಕೆ ಸರಿಯಾಗಿ ಆಗಮಿಸಿ ಮುಂದೆ ಆಗುವ ಅನಾಹುತವನ್ನು ತಪ್ಪಿಸಿದ್ದಾರೆ.


ಗ್ರಾಮಾಡಳಿತಾಧಿಕಾರಿ ಕೌಶಿಕ್ ಭೇಟಿ:

ವಿಷಯ ತಿಳಿಯುತ್ತಿದ್ದಂತೆ ಕಸಬಾ ಗ್ರಾಮ ಆಡಳಿತಾಧಿಕಾರಿ ಕೌಶಿಕ್ ಹಾಗೂ ಗ್ರಾಮ ಸಹಾಯಕ ಅಶೋಕ್‌ರವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅನಾಹುತವಾಗಿರುವ ಬಗ್ಗೆ ಸರ್ಕಾರದ ಗಮನಕ್ಕೆ ತರುವುದಾಗಿ ಹಾಗೂ ಅನಾವೃಷ್ಠಿ ಪರಿಹಾರಕ್ಕೆ ಅರ್ಜಿ ಸಲ್ಲಿಸುವುದಕ್ಕೆ ತಿಳಿಸಿದರು.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

10 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

12 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

13 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

14 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

15 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

17 hours ago