ಅದ್ದೂರಿಯಾಗಿ ಜರುಗಿದ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ: ಪುರಾಣ ಪ್ರಸಿದ್ದ ಶ್ರೀ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಕಾಲದ ಜಾತ್ರಾ ಮಹೋತ್ಸವವು ವಿಜೃಂಭಣೆಯೊಂದಿಗೆ ಅದ್ದೂರಿಯಾಗಿ ಜರುಗಿತು.

ಇಂದು ಮುಂಜಾನೆ ಮಸರೂರು ತವರು ಮನೆಯಿಂದ ದೇವಿಯ ಮೆರವಣಿಗೆ ಕೆಂಚನಾಲದ ಗಂಡನ ಮನೆಗೆ ಭಕ್ತ ಸಮೂಹದ ಜಯಘೋಷಣೆ ಭಕ್ತಿಯ ಪರಕಾಷ್ಟತೆಯೊಂದಿಗೆ ಭರಮಾಡಿಕೊಳ್ಳಲಾಯಿತು.

ಬೆಳಗ್ಗೆಯಿಂದಲೇ ಭಕ್ತಾಧಿಗಳು ಕಾಲು ನಡಿಗೆ ಹಾಗೂ ಸಾವಿರಾರು ವಾಹನಗಳ ಮೂಲಕ ಶ್ರೀ ಮಾರಿಕಾಂಬಾ ಗುಡಿಗೆ ಆಗಮಿಸಿ ಹರಕೆ ಕಾಣಿಕೆ, ಹಣ್ಣು-ಕಾಯಿ ಕೊಡುವ ಮೂಲಕ ಪೂಜೆ ಸಲ್ಲಿಸಿದರು.


ಸುಮಾರು 600 ವರ್ಷಗಳ ಇತಿಹಾಸವಿರುವ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆಯು ವರ್ಷದಲ್ಲಿ ಎರಡು ಬಾರಿ ಆಚರಿಸಲಾಗುತ್ತಿದ್ದು ಮಳೆಗಾಲದಲ್ಲಿ ಮಂಗಳವಾರ ಹಾಗೂ ಬೇಸಿಗೆಯಲ್ಲಿ ಬುಧವಾರದಂದು ನಡೆಯುತ್ತದೆ‌. ಕರ್ನಾಟಕದ ಯಾವುದೇ ಮೂಲೆಯಲ್ಲಿಯೂ ಮಾರಿಕಾಂಬ ದೇವಿ ಜಾತ್ರೆ ವರ್ಷದಲ್ಲಿ ಎರಡು ಬಾರಿ ಆಚರಣೆ ಮಾಡುವುದಿಲ್ಲ. ಆದರೆ ಕೆಂಚನಾಲದಲ್ಲಿ ಮಾತ್ರ ನಡೆಯುತ್ತದೆಂದು ಹಲವರು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

ಮದುವೆಯಾಗದವರು, ಸಂತಾನ ಭಾಗ್ಯಕ್ಕಾಗಿ, ಜನ-ಜಾನುವಾರುಗಳಿಗೆ ಮತ್ತು ಫಸಲಿಗೆ ರೋಗ ರುಜಿನೆ ಬಾರದಂತೆ ರಕ್ಷಣೆ ಮಾಡುವಂತೆ ಪ್ರಾರ್ಥಿಸಿ ಹರಕೆ ಮಾಡಿಕೊಳ್ಳುವುದು ಇಲ್ಲಿನ ವಿಶೇಷವೆಂದರು.

ಹಲವು ಮನೆತನ, ಸಹಸ್ರಾರು ಮನೆಗಳ ಆರಾಧ್ಯ ದೇವತೆ ಶ್ರೀ ಮಾರಿಕಾಂಬಾ ದೇವಿಗೆ ಜಾತ್ರೆ ಸಮಯದಲ್ಲಿ ಹಿಂದುಗಳಲ್ಲದೇ ಮುಸಲ್ಮಾನರು, ಕ್ರಿಶ್ಚಿಯನ್ನರು ಹಾಗೂ ಜೈನ ಧರ್ಮದವರೂ ಹರಕೆ ಕಾಣಿಕೆ, ಹಣ್ಣು-ಕಾಯಿ ಪೂಜೆ ಸಲ್ಲಿಸುವುದು ವಿಶೇಷ.

ಜಾತ್ರಾ ಮಹೋತ್ಸವದಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹೆಚ್.ಜಿ. ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಪ್ರಾನ್ಸಿಸ್ ಬ್ರಿಟ್ಟೋ, ಮಂಜುನಾಥ ಹುಂಚದಕಟ್ಟೆ ಇವರು ಭಾಗವಹಿಸಿ ದೇವಿಗೆ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಧರ್ಮದರ್ಶಿ ಸಮಿತಿಯವರು ರಿಪ್ಪನ್‌ಪೇಟೆ ನಾಡಕಛೇರಿಯ ಉಪತಹಶೀಲ್ದಾರ್ ಮತ್ತು ಸಿಬ್ಬಂದಿ ವರ್ಗ, ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿ ರಕ್ಷಣಾ ಇಲಾಖೆ ಹಾಜರಿದ್ದರು.

ಇಂದು ನಡೆದ ಜಾತ್ರಾ ಮಹೋತ್ಸವಕ್ಕೆ ಸುಮಾರು 25 ಸಹಸ್ರಕ್ಕೂ ಅಧಿಕ ಭಕ್ತರು ಆಗಮಿಸಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago