ಅರಸಾಳು ಬಳಿ ರೈಲಿಗೆ ಸಿಲುಕಿ ವ್ಯಕ್ತಿ ಸಾವು !

0 2,169

ರಿಪ್ಪನ್‌ಪೇಟೆ : ಅರಸಾಳು ಗ್ರಾಮದ ಅರಣ್ಯ ಇಲಾಖೆ ಕಛೇರಿ ಮುಂಭಾಗದ ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಬೆಳಿಗ್ಗೆ 7:45ರ ಬೆಂಗಳೂರು – ತಾಳಗುಪ್ಪ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಮೃತನನ್ನು ಕೋಣಂದೂರು ಸಮೀಪದ ಕಲ್ಲುಗದ್ದೆ ನಿವಾಸಿ ಟ್ರ್ಯಾಕ್ಟರ್ ಡ್ರೈವರ್ ರಮೇಶ್ ವ್ಯಕ್ತಿ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ವ್ಯಕ್ತಿಯ ರುಂಡ-ಮುಂಡ ಬೇರ್ಪಟ್ಟಿದ್ದು ಆತ್ಮಹತ್ಯೆಯೋ, ಆಕಸ್ಮಿಕವಾಗಿ ನಡೆದಿರುವ ಘಟನೆಯೋ ಎಂಬುದು ತನಿಖೆಯಿಂದ ತಿಳಿದುಬರಬೇಕಾಗಿದೆ.
ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave A Reply

Your email address will not be published.

error: Content is protected !!