ಹೊಸನಗರ : ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯಿಂದ ಸೇತುವೆಗೆ ಸಂಚಕಾರ ಬಂದೊದಗಿದೆ. ಹೊಳೆ ನೀರಿನ ರಭಸಕ್ಕೆ ಸೇತುವೆಗೆ ಹಾಕಿರುವ ಮಣ್ಣು ಕೊಚ್ಚಿಹೋಗುತ್ತಿದೆ. ಅವೈಜ್ಞಾನಿಕ ಕಾಮಗಾರಿಯಿಂದ ಮಣ್ಣು ಕೊಚ್ಚಿ ಹೋಗುತ್ತಿದ್ದು, 2023 ರಲ್ಲಿ ನಿರ್ಮಾಣವಾಗಿದ್ದ ಈ ಸೇತುವೆ ಒಂದೇ ವರ್ಷಕ್ಕೆ ಕಾಮಗಾರಿಯ ಅಸಲಿ ಬಣ್ಣ ಬಯಲಾಗಿದೆ.
ರಾಣೆಬೆನ್ನೂರು – ಬೈಂದೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈ ಸೇತುವೆ ಶಿವಮೊಗ್ಗದಿಂದ ಕೊಲ್ಲೂರು, ಕುಂದಾಪುರ, ಸಿಗಂದೂರು ಭಾಗಗಳಿಗೆ ಸಂಪರ್ಕ ಹೊಂದಿದೆ.
ಸೇತುವೆಯ ಮಣ್ಣು ಸಂಪೂರ್ಣವಾಗಿ ಕೊಚ್ಚಿಹೋದ್ರೆ ಸಂಪರ್ಕ ಕಡಿತದ ಭೀತಿ ಎದುರಾಗಿದ್ದು ಸೈಡ್ ಪಿಚ್ಚಿಂಗ್ ಕಟ್ಟದೆ ಕೇವಲ ಮಣ್ಣು ಹಾಕಿ ರಸ್ತೆ ನಿರ್ಮಿಸಲಾಗಿತ್ತು.
ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ. https://fb.watch/m2WXSZNQon/?mibextid=MGVWDh&startTimeMs=4290
ಕಳೆದ ಮೂರು ವರ್ಷದಿಂದಲೂ ಹೊಸ ಕಾಮಗಾರಿ ನಡೆಯುತ್ತಲೇ ಇದೆ. ಇದೀಗ ಹೊಸ ಸೇತುವೆ ಕೂಡ ನಿರ್ಮಾಣವಾಗಿದೆ. ಆದರೆ ಸೈಡ್ ವಾಲ್, ಪಿಚ್ಚಿಂಗ್ ಕಟ್ಟದ ಹಿನ್ನೆಲೆಯಲ್ಲಿ ಮಣ್ಣು ಸಲೀಸಾಗಿ ಹೊಳೆ ಸೇರುತ್ತಿದೆ. ಇದೇ ಮಾರ್ಗ ಚಿಕ್ಕಪೇಟೆ ಸೇತುವೆಯ ಪಿಚ್ಚಿಂಗ್ ಕುಸಿತ ಬೆನ್ನಲ್ಲೇ ಮಡೋಡಿ ಸ್ಥಿತಿ ಕೂಡ ಇದೇ ರೀತಿಯಾಗಿದೆ.
ರಾಣೇಬೆನ್ನೂರು- ಬೈಂದೂರು ಹೆದ್ದಾರಿಯಲ್ಲಿ ಬರುವ ನಾಗೋಡಿ ತಡೆಗೋಡೆ, ಮಡೋಡಿ ರಸ್ತೆ, ಚಿಕ್ಕಪೇಟೆ ಸೇತುವೆ ಸೇರಿದಂತೆ ಬಹುತೇಕ ಕಾಮಗಾರಿಗಳು ಒಂದಿಲ್ಲೊಂದು ಅವಾಂತರ ಸೃಷ್ಟಿ ಮಾಡುತ್ತಿದ್ದು ಕಾಮಗಾರಿಯ ಮೇಲೆಯೇ ಅನುಮಾನ ಮೂಡುತ್ತಿದೆ. ಈ ಭಾಗದಲ್ಲಿ ವ್ಯಾಪಕ ಮಳೆಯಿಂದ ಆಗುತ್ತಿರುವ ತೊಂದರೆಯ ಬಗ್ಗೆ ಅರಿವಿದ್ದರೂ ಕಾಮಗಾರಿಯಲ್ಲಿ ಮುಂಜಾಗ್ರತಾ ಕ್ರಮ ಅಳವಡಿಸಿಕೊಳ್ಳದಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…