ಹೊಸನಗರ : ನೀರು ತುಂಬಿದ ಬಕೆಟ್ಗೆ ಬಿದ್ದು ಒಂದು ವರ್ಷದ ಗಂಡು ಮಗು ಮೃತಪಟ್ಟಿರುವ ಘಟನೆ ತಾಲೂಕಿನ ಸೊನಲೆ ಗ್ರಾಪಂ ವ್ಯಾಪ್ತಿಯ ಸೊನಲೆ ಗ್ರಾಮದ ಹೊಸಕೊಪ್ಪ ಎಂಬಲ್ಲಿ ನಡೆದಿದೆ.
ಕೂಲಿ ಕೆಲಸಗಾರರಾದ ಹರೀಶ್ ಹಾಗೂ ವೀಣಾ ದಂಪತಿಗಳ ಒಂದು ವರ್ಷ ಒಂದು ತಿಂಗಳ ಸಂಕೇತ್ ಎಂಬ ಮಗು ಮೃತಪಟ್ಟಿರುವುದಾಗಿ ಎಂದು ತಿಳಿದುಬಂದಿದೆ.
ಪೋಷಕರು ಬಕೆಟ್ನಲ್ಲಿ ನೀರು ಹಾಕಿ ಆಗಾಗ ಮಗುವಿಗೆ ಆಟವಾಡಿಸುವ ಅಭ್ಯಾಸ ಹೊಂದಿದ್ದರು ಎಂದು ತಿಳಿದುಬಂದಿದೆ. ಆದರೆ ಇಂದು ದುರಂತವೆಂದರೆ ದನಗಳಿಗೆ ಕುಡಿಯಲು ಇಟ್ಟಿದ್ದ ಅರ್ಧ ಬಕೆಟ್ ನೀರಿನಲ್ಲಿ ಮಗು ತಲೆಕೆಳಗಾಗಿ ಬಿದ್ದು ಉಸಿರುಗಟ್ಟಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ತೋಟದ ಕೆಲಸಕ್ಕೆ ಪೋಷಕರು ಹೋದಾಗ ಈ ಘಟನೆ ನಡೆದಿದ್ದು ಅವರು ಬಂದು ನೋಡುವಷ್ಟರಲ್ಲಿ ಮಗು ಮೃತಪಟ್ಟಿತ್ತು.
ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದ್ದು, ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…
ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…