ಆರೋಗ್ಯವಂತ ಸದೃಢ ದೇಹ ಹೊಂದಲು ಕ್ರೀಡೆ ಸಹಕಾರಿ ; ಬಿ.ಜಿ. ಚಂದ್ರಮೌಳಿ

ರಿಪ್ಪನ್‌ಪೇಟೆ : ಆರೋಗ್ಯವಂತ ಸದೃಢ ದೇಹವನ್ನು ಹೊಂದಲು ಕ್ರೀಡೆ ಎಂಬುದು ಸಹಕಾರಿಯಾಗಿದ್ದು ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕೆಂದು ಹೊಸನಗರ ತಾಪಂ ಮಾಜಿ ಸದಸ್ಯ ಬಿ.ಜಿ ಚಂದ್ರಮೌಳಿ ಹೇಳಿದರು.

ಅವರು ಇಂದು ಫ್ರೆಂಡ್ಸ್ ಕೋಡೂರು ಮಲೆನಾಡು ಆಟಗಾರ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಸದೃಢ ದೇಹ ಮತ್ತು ಸದೃಢ ಮನಸ್ಸು ಇರಬೇಕಾದರೆ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು ಇದರಿಂದ ಉತ್ತಮ ಆರೋಗ್ಯವಂತರಾಗಿ ಇರಬಹುದು. ಕ್ರೀಡೆ ಎಂಬುದು ಕೇವಲ ಅದೊಂದು ಆಟವಲ್ಲಾ ಇಡೀ ಜೀವನವನ್ನು ಬದಲಾಯಿಸುವ ಶಕ್ತಿ ಅದರಲ್ಲಿ ಅಡಗಿದೆ. ಜನರು ಕ್ರೀಡೆಯ ಮೂಲಕ ಜಗತ್ತಿನಲ್ಲಿ ಪ್ರಸಿದ್ದತೆಗೊಂಡಿದ್ದಾರೆ ಮತ್ತು ಉತ್ತಮ ಆರೋಗ್ಯವಂತರಾಗಿ ಬಾಳುತ್ತಿದ್ದಾರೆ. ಕ್ರೀಡೆಯಿಂದ ಜ್ಞಾಪಕ ಶಕ್ತಿಯೂ ಕೂಡಾ ವೃದ್ದಿಗೊಳ್ಳಲಿದೆ ಎಂದು ಹೇಳಿದ ಅವರು, ವಿದ್ಯಾರ್ಥಿಗಳಲ್ಲಿ ಮತ್ತು ಯುವಕರಲ್ಲಿ ಚೈತನ್ಯ ತುಂಬುವಂತಹ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸಬೇಕೆಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಹಾಗೂ ರಾಜ್ಯಮಟ್ಟ ಪ್ರತಿನಿಧಿಸಿದ ಕೋಡೂರು ಪ್ರೌಢ ಶಾಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕೋಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಉಮೇಶ್ ಕಲಗೋಡು, ಉಪಾಧ್ಯಕ್ಷ ಸುಧಾಕರ್, ಸದಸ್ಯ ಜಯಪ್ರಕಾಶ್, ಗ್ರಾಪಂ ಮಾಜಿ ಅಧ್ಯಕ್ಷರ ಜಯಂತ್, ರಾಘು ಪೂಜಾರಿ, ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ವೇದಾಂತ್, ರಾಮಣ್ಣ, ಲಕ್ಷ್ಮಿ ಮಲ್ನಾಡ್ ಬೇಕರಿ ಪ್ರದೀಪ್, ರಂಜಿತ್, ವಿಕಾಸ್ ಕುನ್ನೂರು, ಪುರುಷೋತ್ತಮ ಮತ್ತಿತ್ತರು ಹಾಜರಾಗಿದ್ದರು.

Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

1 hour ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

2 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

4 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

6 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

8 hours ago