Categories: Hosanagara News

ಈ ಬಾರಿಯು ವಿಧಾನಸಭೆ ಚುನಾವಣೆ EVM ಯಂತ್ರದ ಮೂಲಕ ನಡೆಯಲಿದೆ ; ತಹಶೀಲ್ದಾರ್ ವಿ‌.ಎಸ್ ರಾಜೀವ್


ಹೊಸನಗರ: 2023-24ನೇ ಸಾಲಿನಲ್ಲಿ ಕರ್ನಾಟಕದ ವಿಧಾನಸಭೆಯ ಚುನಾವಣೆಯು ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿದ್ದು ಮತದಾರರು ಈ ಬಾರೀಯ ಚುನಾವಣೆಯು ಇ.ವಿ.ಎಂ ಯಂತ್ರದ ಮೂಲಕ ಚುನಾವಣೆ ನಡೆಸಲಾಗುವುದು ಎಂದು ಚುನಾವಣೆ ಆಯೋಗ ತಿಳಿಸಿದ್ದು ಮತದಾನ ಹೇಗೆ ಮಾಡಬೇಕು ಎಂಬುವುದರ ಬಗ್ಗೆ ಮತದಾರರಿಗೆ ಮತ ಹಾಕಿಸುವ ವಿಧಾನದ ಬಗ್ಗೆ ಜಾಗೃತಿಯನ್ನು ಹೊಸನಗರ ತಾಲ್ಲೂಕು ಕಛೇರಿಯ ಆವರಣದಲ್ಲಿ ಸಿದ್ದಪಡಿಸಲಾಗಿದೆ ಎಂದು ತಹಶೀಲ್ದಾರ್ ವಿ.ಎಸ್ ರಾಜೀವ್‌ರವರು ತಿಳಿಸಿದರು.


ಹೊಸನಗರ ತಾಲ್ಲೂಕು ಕಛೇರಿಯ ಆವರಣದಲ್ಲಿ ಇ.ವಿ.ಎಂ ಸಿದ್ದ ಪಡೆಸಿಕೊಂಡು ಮತದಾನ ಮಾಡುವ ವಿಧಾನದ ಬಗ್ಗೆ ಕಾರ್ಯಗಾರ ಕಾರ್ಯಕ್ರಮ ಏರ್ಪಡಿಸಿ ಮತದಾರರಿಗೆ ಜಾಗೃತಿ ಮೂಡಿಸುವ ಸಂದರ್ಭದಲ್ಲಿ ಮಾತನಾಡಿದರು.
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಪ್ರತಿಯೊಬ್ಬ ಮತದಾರರು ಮತ ಚಲಾಯಿಸಬೇಕು ಎಂಬ ಉದ್ದೇಶದಿಂದ ಈ ಕಾರ್ಯಾಗಾರವನ್ನು ಆರಂಭಿಸಲಾಗಿದ್ದು ಮತದಾರರು ಮತಗಟ್ಟೆಗೆ ಹೋಗಿ ಮತ ಚಲಾಯಿಸುವಾಗ ಗಾಬರಿಯಾಗುವುದು ಬೇಡ ಎಂಬ ಉದ್ದೇಶದಿಂದ ಪ್ರತಿಯೊಬ್ಬ ಮತದಾರರಿಗೂ ಈ ಮೂಲಕ ತರಬೇತಿ ನೀಡುತ್ತಿದ್ದೇವೆ ತಾವು ಮತಗಟ್ಟೆಯ ಒಳಗೆ ಹೋದಾಗ ಚುನಾವಣೆ ಹಾಕುವ ಯಂತ್ರದಲ್ಲಿ ಕೆಂಪು ಬೆಳಕು ಬಂದಿದೇಯೇ ಎಂಬುದನ್ನು ಪರೀಕ್ಷಿಕೊಂಡು ನಿಮ್ಮ ಬೆಂಬಲದ ಅಭ್ಯರ್ಥಿಗೆ ಮತ ಹಾಕಬೇಕು ಅದರ ಪಕ್ಕದಲ್ಲಿ ಇನ್ನೊಂದು ಚುನಾವಣೆಯ ಯಂತ್ರದಲ್ಲಿ ನೀವು ನಮೂದಿಸಿದ ಓಟು ಯಾರಿಗೆ ಹಾಕಿದ್ದೀರಿ ಎಂಬುದನ್ನು ಖಚಿತ ಪಡಸಿಕೊಳ್ಳಬಹುದಾಗಿದೆ. ಈ ಎಲ್ಲವೂ 7 ಸೆಕೆಂಡ್‌ಗಳಲ್ಲಿ ಮುಗಿದು ಹೋಗುತ್ತದೆ ಎಲ್ಲರೂ ಇವಿಎಂ ಯಂತ್ರದ ಬಗ್ಗೆ ತಿಳಿದುಕೊಂಡು ಮತದಾನ ಮಾಡಿ ಎಂದರು.


ಈ ಸಂದರ್ಭದಲ್ಲಿ ಹೇಮಾ ಚುನಾವಣೆ ಶಿರಾಸ್ಥೆದಾರ್ ವಿನಯ್ ಎಂ ಆರಾಧ್ಯ, ಭೂಮಿ ಕೇಂದ್ರದ ಗ್ರಾಮ ಲೆಕ್ಕಾಧಿಕಾರಿ ಕುಮಾರಿ ಹೇಮಾ, ಗಣೇಶ್, ಶಿವಪ್ಪ ಇತರರು ಉಪಸ್ಥಿತರಿದ್ದರು.

Malnad Times

Recent Posts

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

6 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

7 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

14 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

14 hours ago