ಹೊಸನಗರ: ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ ಘಾಟ್ ನಲ್ಲಿ ಕಾಂಕ್ರಿಟ್ ಪೇವ್ ಮೆಂಟ್ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆ ಫೆಬ್ರವರಿ 5 ರಿಂದ ಏಪ್ರಿಲ್ 5ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ಯಾವೆಲ್ಲ ಬದಲಿ ಮಾರ್ಗ?
ರಾಜ್ಯ ಹೆದ್ದಾರಿ 52ರಲ್ಲಿ ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು – ಕುಂದಾಪುರ ರಸ್ತೆಗೆ ತಲುಪಬಹುದು. ತೀರ್ಥಹಳ್ಳಿ – ಹೆಬ್ರಿ – ಉಡುಪಿ – ಕುಂದಾಪುರ ರಸ್ತೆಯಲ್ಲಿ ಸಂಚರಿಸಬಹುದು.
ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ -ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ಮಾರ್ಗದಲ್ಲಿ ಸಂಚರಿಸಬೇಕು.
ಶಿವಮೊಗ್ಗ, ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆಗೆ ಹೋಗು ಲಘು ಮತ್ತು ಭಾರಿ ವಾಹನಗಳಿಗು ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಈ ವಾಹನಗಳು ಹೊಸನಗರ – ನಗರ – ಕೊಲ್ಲೂರು ರಸ್ತೆಯಲ್ಲಿ ಸಂಚರಿಸಬೇಕು.
ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು ! ಕಳಸ : ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ…
ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…
ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…
ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…
ರಿಪ್ಪನ್ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…
ರಿಪ್ಪನ್ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…