ಹೊಸನಗರ: ತಾಲ್ಲೂಕಿನ ಪ್ರತಿಷ್ಠಿತ ದೇವಸ್ಥಾನಗಳಲ್ಲಿ ಒಂದಾಗಿರುವ ಕಾರಣಗಿರಿ ಸಿದ್ಧಿವಿನಾಯಕ ದೇವಸ್ಥಾನದ ಆವರಣದಲ್ಲಿ ಏಪ್ರಿಲ್ 23 ರಂದು ಸಹಸ್ರಾಧಿಕ ನಾಳಿಕೇರ ಗಣಯಾಗ ರಜತ ಮಹೋತ್ಸವ ಹಾಗೂ ಏಪ್ರಿಲ್ 24 ರಂದು ಶ್ರೀಮನ್ಮಹಾರಥೋತ್ಸವ ಕಾರ್ಯಕ್ರಮವನ್ನು ತಾಲ್ಲೂಕು ಮುಜರಾಯಿ ಅಧಿಕಾರಿ ತಹಶೀಲ್ದಾರ್ ಡಿ.ಜಿ.ಕೋರಿಯವರ ಮಾರ್ಗದರ್ಶನದಲ್ಲಿ ಏರ್ಪಡಿಸಿಸಲಾಗಿದೆ ಎಂದು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ನಾಗೇಂದ್ರರಾವ್ರವರು ತಿಳಿಸಿದ್ದಾರೆ.
ಅವರು ದೇವಸ್ಥಾನದ ಆವರಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಏಪ್ರಿಲ್ 22 ರಂದು ಗಣೇಶ ಪ್ರಜಾ, ಸ್ವಸ್ತಿವಾಚನ, ಅಗ್ನಿಜನನ, ಅದಿವಾಸ ಹೋಮಾದಿ ಕಾರ್ಯಕ್ರಮಗಳು ನಡೆಯಲಿದ್ದು 23 ರಂದು ಗಣೇಶ ಪ್ರಜಾ, ಸ್ವಸ್ತಿವಾಚನ, ಅಧಿವಾಸ ಹೋಮಾದಿ ಕಾರ್ಯಕ್ರಮಗಳು ಅಷ್ಟೋತ್ತರ ಶತಾದಿಕ ಏಕಸಹಸ್ರ ನಾಳಿಕೇರ 1008ಕ್ಕೂ ಅಧಿಕ ತೆಂಗಿನಕಾಯಿ ಗಣಪತಿ ಹವನ ಮತ್ತು ರಹತ ರಥೋತ್ಸವ ನಡೆಯಲಿದ್ದು ರಾತ್ರಿ ರಂಗಪೂಜೆ ಬಲಿ ಇತ್ಯಾದಿ ಕಾರ್ಯಕ್ರಮ ನಡೆಯಲಿದೆ. 24 ರಂದು ಗಣೇಶ ಪ್ರಜಾ ಪುಣ್ಯಾಹ, ಅಧಿವಾಸ ಹವನ, ಗ್ರಹಯಾಗ ಅಭಿಜಿನ್ ಮುಹೂರ್ತದಲ್ಲಿ ಮನ್ಮಹಾರಥೋತ್ಸವ ಕಾರ್ಯಕ್ರಮ ನಡೆಯಲಿದ್ದು ರಾತ್ರಿ ಭೂತಬಲಿ ಕಾರ್ಯಕ್ರಮ ನಡೆಯಲಿದ್ದು 25 ರಂದು ಪ್ರಭೂದೋತ್ಸವ ಪ್ರರ್ಣಾಹುತಿ, ಮಹಾಪೂಜೆ ಪ್ರಾರ್ಥನೆ ಮಂತ್ರಾಕ್ಷತೆ ಪ್ರಸಾದ ವಿನಿಯೋಗ ಕಾರ್ಯಕ್ರಮ ನಡೆಯಲಿದೆ.
ಸಾರ್ವಜನಿಕರು ಹಾಗೂ ದೇವಸ್ಥಾನದ ಭಕ್ತಾರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿಕೊಡಬೇಕೆಂದು ಕೇಳಿಕೊಂಡಿದ್ದಾರೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…