ರಿಪ್ಪನ್ಪೇಟೆ: ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘವನ್ನು ಸಮಾಜದ ಹಲವು ಹಿರಿಯರೊಂದಿಗೆ ಚರ್ಚಿಸಿ ಸಮಾಜ ಭಾಂದವರನ್ನು ಸಂಘಟಿಸುವುದರೊಂದಿಗೆ ಕಳೆದ ಮೂವತ್ತು ವರ್ಷಗಳಿಂದಲೂ ಸಮಾಜದ ಶ್ರೇಯೋಭಿವೃದ್ಧಿ ಶ್ರಮಿಸಿದ ತಾಲ್ಲೂಕು ಒಕ್ಕಲಿಗ ಸಮಾಜವನ್ನು ಸ್ಥಾಪಿಸುವುದರೊಂದಿಗೆ ಸಂಸ್ಥಾಪಕ ಅಧ್ಯಕ್ಷರಾಗಿ ಜನಾನುರಾಗಿಯಾದ ಎಂ.ಬಿ.ಲಕ್ಷ್ಮಣಗೌಡ ಇತ್ತೀಚೆಗೆ ನಡೆದ ಸಂಘದ ಚುನಾವಣೆಯಲ್ಲಿ ತಮ್ಮ ಬೆಂಬಲಿತ 19 ಜನ ನಿರ್ದೇಶಕರು ಆಯ್ಕೆಯಾಗುವುದರೊಂದಿಗೆ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
ಸಮಾಜದ ಸಂಘಟನೆಯೊಂದಿಗೆ ಸಾಗರ ರಸ್ತೆಯಲ್ಲಿ ಸರ್ಕಾರದಿಂದ ಎರಡು ಎಕರೆ ಜಾಗವನ್ನು ಮಂಜೂರಾತಿ ಮಾಡಿಸಿಕೊಳ್ಳುವುದರೊಂದಿಗೆ ಸಮಾಜದವರ ಮತ್ತು ಸರ್ಕಾರದಿಂದ ಹಣವನ್ನು ತರುವುದರೊಂದಿಗೆ ಸುಮಾರು 3.50 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕುವೆಂಪು ಸಭಾಭವನವನ್ನು ನಿರ್ಮಿಸಿ ಸಮಾಜಕ್ಕೆ ದೊಡ್ಡ ಕೊಡುಗೆಯಾಗಿದ್ದಾರೆ.
ಇವರ ಸಂಘಟನಾತ್ಮಕ ಬೆಳವಣಿಗೆಯನ್ನು ಸಹಿಸಿಕೊಳ್ಳದೇ ಹಲವರು ಚುನಾವಣೆಯಲ್ಲಿ ಸೋಲಿಸಬೇಕು ಎಂಬ ಬಾರಿ ಪ್ರಯತ್ನ ಸಹ ನಡೆದರೂ ಕೂಡಾ ಯಾವುದನ್ನು ಲೆಕ್ಕಿಸದೇ ಸಮಾಜದ ನಿರ್ದೇಶಕರು ಕೈ ಬಿಡದೇ ಎಂ.ಬಿ.ಲಕ್ಷ್ಮಣಗೌಡರ ತಂಡವನ್ನು ಬೆಂಬಲಿಸಿ ಅಧ್ಯಕ್ಷ ಪಟ್ಟವನ್ನು ನೀಡಿರುವುದು ಸಾಕ್ಷಿಯಾಗಿದೆ.
ಒಟ್ಟಾರೆಯಾಗಿ ತಾಲ್ಲೂಕು ಒಕ್ಕಲಿಗರ ಸಂಘದ ಸಾರಥ್ಯವನ್ನು ಪಡೆಯುವ ಮೂಲಕ ಇನ್ನೂ ಹೆಚ್ಚು ಸಮಾಜದ ಶ್ರೇಯೋಭಿವೃದ್ದಿಗಾಗಿ ಶ್ರಮಿಸುವ ತುಡಿತವನ್ನು ಮಾಧ್ಯಮದವರ ಬಳಿ ವ್ಯಕ್ತಪಡಿಸಿದ ಅವರು, ನಮ್ಮ 19 ಜನ ಪದಾಧಿಕಾರಿಗಳು ನನ್ನ ಈ ಪ್ರಯತ್ನಕ್ಕೆ ಬೆಂಬಲಿಸಿದಲ್ಲಿ ಮಾದರಿ ಸಮಾಜವನ್ನಾಗಿಸುವ ಮಹಾದಾಸೆ ನನ್ನದಾಗಿದೆ ಎಂದರು.
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…
ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…
ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…
ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…
ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…