ಹೊಸನಗರ : ಖಾತೆ ಜಮೀನಿನ ಮೇಲಿರುವ ಸರ್ಕಾರಿ ಭೂಮಿಗಾಗಿ ಸಹೋದರ ನಡುವೆ ಕಲಹ ಏರ್ಪಟ್ಟಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ತಾಲೂಕಿನ ಮಂಡಾನಿ ಗ್ರಾಮದ ಜಾನಕಮ್ಮ ಎಂಬುವವರು ದೂರು ನೀಡಿದ್ದು, ತನ್ನ ಪತಿಯ ಸಹೋದರರಾದ ಅಣ್ಣಪ್ಪ ಹಾಗೂ ಗುಂಡಪ್ಪ ಎಂಬುವವರು ಏಕಾಏಕಿ ನಮ್ಮ ಸ್ವಾಧೀನಾನುಭವದಲ್ಲಿದ್ದು, ಸಾಗುವಳಿ ಮಾಡಿರುವ ಅಡಿಕೆ ತೋಟವನ್ನು ಕಬಳಿಕೆಗೆ ಮುಂದಾಗಿದ್ದಾರೆ. ಮನೆ ಅಂಗಳದಲ್ಲಿ ದಾರಿಗೆ ಅಡ್ಡಲಾಗಿ ತಂತಿ ಬೇಲಿ ನಿರ್ಮಾಣ ಮಾಡಿದ್ದಾರೆ. ಬಗರ್ಹುಕುಂ ಸಾಗುವಳಿ ಜಾಗವನ್ನು ಬಿಟ್ಟುಕೊಡಬೇಕು ಎಂದು ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ನಾವು ನಮ್ಮ ಅನುಭವದಲ್ಲಿರುವ ಜಾಗಕ್ಕೆ ನಿರ್ಮಿಸಿರುವ ಕಬ್ಬಿಣದ ಗೇಟ್ ಅನ್ನು ಆರೋಪಿಗಳು ಜೆಸಿಬಿ ಯಂತ್ರ ಬಳಸಿ ಕಿತ್ತಿದ್ದಾರೆ. ನಾವು ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದರೂ, ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.
ಮಂಡಾನಿ ಗ್ರಾಮದ ಸರ್ವೆ ನಂ. 21ರಲ್ಲಿನ ಪಿತ್ರಾರ್ಜಿತ ಆಸ್ತಿಯಲ್ಲಿ ಅಣ್ಣಪ್ಪ ಅವರಿಗೆ ಪಾಲು ನೀಡಲಾಗಿದೆ. ಬೆಂಗಳೂರಿನಲ್ಲಿ ವಾಸವಾಗಿದ್ದರೂ, ಇಲ್ಲಿ ಮನೆ ಕಟ್ಟುವುದಾಗಿ ನೆಪ ಹೇಳಿಕೊಂಡು ನಮಗೆ ತೊಂದರೆ ಕೊಡುತ್ತಿದ್ದಾರೆ. ನಮ್ಮ ವಾಸದ ಮನೆಯ ಅಕ್ಕಪಕ್ಕದ ಜಾಗವನ್ನೂ ಕಬಳಿಕೆ ಮಾಡಲು ಮುಂದಾಗಿದ್ದಾರೆ. ತಮಗೆ ಹಾಗೂ ಪತಿ, ನನ್ನ ಇಬ್ಬರು ಮಕ್ಕಳಿಗೆ ಬೆದರಿಕೆ ಹಾಕುತ್ತಿದ್ದು, ಪ್ರಭಾವ ಬಳಸಿ ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆಪಾದಿಸಿದ್ದಾರೆ.
ಈ ಬಗ್ಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ದಾಖಲಾಗಿದೆ. ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…