Categories: Hosanagara News

ಕಾಂಗ್ರೆಸ್ ನೀಡಿದ ಡೂಪ್ಲಿಕೇಟ್ ಕಾರ್ಡ್ ಜನ್ರನ್ನ ದಾರಿ ತಪ್ಪಿಸ್ತು ; ಆರಗ ಜ್ಞಾನೇಂದ್ರ

ಹೊಸನಗರ : ಕಾಂಗ್ರೆಸ್ ನೀಡಿದ ಅನುಷ್ಟಾನ ಯೋಗ್ಯವಲ್ಲದ ಡೂಪ್ಲಿಕೇಟ್ ಕಾರ್ಡ್ ಜನರನ್ನು ದಾರಿ ತಪ್ಪಿಸಿತು. ಸತ್ಯದ ಅರಿವಾದ ಮೇಲೆ ಜನರು ಈಗ ಪಶ್ಚಾತ್ತಾಪ ಪಡುವಂತಾಗಿದೆ. ಕಾಂಗ್ರೆಸ್ ಸರ್ಕಾರ ಇರೋತನಕ ಜನರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವೇ ಇಲ್ಲ ಎಂದು ಮಾಜಿ ಗೃಹ ಸಚಿವ, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು.

ನಿಟ್ಟೂರು ಸಮೀಪದ ಮಂಜಗಳಲೆ ಗ್ರಾಮದ ಕುಂಬಳೆಯಲ್ಲಿ ಗುರುವಾರ ಆಯೋಜಿಸಿದ್ದ ಮತದಾರರಿಗೆ ಅಭಿನಂದನೆ ಸಭೆ ಉದ್ಧೇಶಿಸಿ ಮಾತನಾಡಿ, ಕಬ್ಬಿಣವನ್ನು ತಂದು ಬಂಗಾರ ಎಂದು ಹೇಳಿ ಮೋಸ ಮಾಡಿದಂತವರನ್ನು ಜೊತೆ ಇಟ್ಟುಕೊಂಡು ನಾವೇ ಜೋಡೆತ್ತು ಎಂದು ಹೇಳಿ ತೀರ್ಥಹಳ್ಳಿಯ ಜನರನ್ನು ದಿಕ್ಕು ತಪ್ಪಿಸಲು ಯತ್ನ ಮಾಡಿದವರಿಗೆ ಇಲ್ಲಿನ ಜನರು ಸರಿಯಾದ ಶಾಸ್ತಿ ಮಾಡಿದ್ದಾರೆ. ಕಳೆದ ಅವಧಿಯಲ್ಲಿ ಕ್ಷೇತ್ರಕ್ಕೆ 3254 ಕೋಟಿ ಹಣ ತಂದು ಹಳ್ಳಿ ಹಳ್ಳಿಗಳ ಅಭಿವೃದ್ಧಿ ನಡೆಸಿದ್ದೇನೆ, ಅದೇ ಅಭಿವೃದ್ಧಿ ಕಾರ್ಯಗಳು ಮತಗಳಾಗಿ ಪರಿವರ್ತನೆಯಾಗಿ ನನ್ನ ಗೆಲುವಿಗೆ ಕಾರಣವಾಗಿದೆ. ನನ್ನ ಗೆಲುವುಗಾಗಿ ಹಗಲು ಇರಳು ಶ್ರಮಿಸಿದ ಕಾರ್ಯಕರ್ತರು ಮತ್ತು ನನ್ನ ಮೇಲೆ ವಿಶ್ವಾಸ ಇಟ್ಟು ಮತ ಹಾಕಿದ ಮತದಾರರಿಗೆ ತುಂಬು ಹೃದಯದ ಧನ್ಯವಾದಗಳು. ನೀವು ನನ್ನ ಮೇಲೆ ಇಟ್ಟ ವಿಶ್ವಾಸವನ್ನು ಉಳಿಸಿಕೊಳ್ಳುತ್ತೇನೆ. ಅತ್ಯಂತ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರ ಸಮಸ್ಯೆ ದೂರ ಮಾಡಲು ಕೇಂದ್ರ ಸರ್ಕಾರದ ಸಹಾಯದೊಂದಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.


ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಹೆದ್ದೂರು ಮಾತನಾಡಿ, ಜ್ಞಾನೇಂದ್ರ ಅವರ ಗೆಲುವು ಕಾರ್ಯಕರ್ತರ ಗೆಲುವಾಗಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಅಲೆ ಇದ್ದಾಗಲೂ ಸಹ ತೀರ್ಥಹಳ್ಳಿಯಲ್ಲಿ ದೊಡ್ಡ ಅಂತರದಿಂದ ಜ್ಞಾನೇಂದ್ರ ಅವರನ್ನು ಗೆಲ್ಲಿಸಿರುವುದು ದೊಡ್ಡ ಸಾಧನೆಯಾಗಿದೆ. ಬಿಜೆಪಿ ಪಕ್ಷವು ಸದಾ ಕಾಲ ಜನರ ಸಂಕಷ್ಟಗಳಿಗೆ ಸ್ಪಂದಿಸಲಿದೆ. ಕಾಂಗ್ರೆಸ್ ನವರ ಸುಳ್ಳು ಭರವಸೆಗಳು ಹೆಚ್ಚು ಕಾಲ ಜನರನ್ನು ಮರುಳು ಮಾಡಲು ಸಾಧ್ಯವಿಲ್ಲ ಎಂದರು.


ಮಂಜಗಳಲೆ ಗ್ರಾಮಸ್ಥರು ನೂತನವಾಗಿ ಶಾಸಕರಾಗಿ ಆಯ್ಕೆಯಾದ ಜ್ಞಾನೇಂದ್ರರವರನ್ನು ಶಾಲು ಹೊದೆಸಿ ಅಭಿನಂದನೆ ಸಲ್ಲಿಸಿದರು.
ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಎನ್ ವೈ ಸುರೇಶ್, ಕಾರ್ಯದರ್ಶಿ ರಮಾಕಾಂತ್ ಮತ್ತಿಮನೆ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸುಬ್ರಹ್ಮಣ್ಯ ಮತ್ತಿಮನೆ, ನಿಟ್ಟೂರು ಗ್ರಾಪಂ ಸದಸ್ಯ ಅಶೋಕ್ ಕುಂಬಳೆ, ನಿಟ್ಟೂರು ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಂದ್ರ ಶೆಟ್ಟಿ, ಪ್ರಮುಖರಾದ ಅಪ್ಪಣ್ಣ ಹರಿಮನೆ, ಚಂದೊಳ್ಳಿ ಸೋಮಶೇಖರ ಇತರರು ಉಪಸ್ಥಿತರಿದ್ದರು.

Malnad Times

Recent Posts

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

2 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

10 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

20 hours ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

21 hours ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

21 hours ago

ಹಸೆಮಣೆ ಏರುವ‌ ಮುನ್ನ ಹಕ್ಕು ಚಲಾಯಿಸಿದ ವಧು

ಶೃಂಗೇರಿ : ಇಂದು ನಡೆದ ಮತದಾನದಲ್ಲಿ ತಾಲೂಕಿನ ಕೂತಗೋಡಿನಲ್ಲಿ ಹಸೆಮಣೆ ಏರುವ ಮುನ್ನ ಯುವತಿಯೊಬ್ಬಳು ಮತ ಚಲಾಯಿಸಲು ಅಲಂಕಾರಗೊಂಡೆ ಮತಗಟ್ಟೆಗೆ…

22 hours ago