ಕಾರಗೋಡು ಕಲಾನಾಥೇಶ್ವರ ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಮಹೋತ್ಸವ ಧರ್ಮ ಸಮಾರಂಭ | ಧಾರ್ಮಿಕ ಆಚರಣೆಗಳಿಂದ ಮನುಷ್ಯನಲ್ಲಿ ಶಾಂತಿ, ನೆಮ್ಮದಿ ಸಾಧ್ಯ ; ಮೂಲೆಗದ್ದೆ ಶ್ರೀಗಳು

ರಿಪ್ಪನ್‌ಪೇಟೆ : ಧಾರ್ಮಿಕ ಆಚರಣೆಗಳಿಂದ ಮನುಷ್ಯನಲ್ಲಿ ಶಾಂತಿ ನೆಮ್ಮದಿಯನ್ನು ನೀಡುತ್ತವೆಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು.

ಕಾರಗೋಡು ಗ್ರಾಮದಲ್ಲಿ ಕಲಾನಾಥೇಶ್ವರ ಮತ್ತು ಪರಿವಾರ ದೇವತೆಗಳ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮದ ಧರ್ಮ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಜೀವನದಲ್ಲಿ ಸಾಧನೆಯ ಗುರಿ ತಲುಪಲು ಗುರುವಿನ ಕಾರುಣ್ಯ ಅಗತ್ಯ. ಮಹಾ ಶಿವರಾತ್ರಿಯ ದಿನದೊಂದು ಭವವಂತನ ನಾಮಸ್ಮರಣೆ ಪುಣ್ಯದ ಕೆಲಸವನ್ನು ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುವುದೆಂದು ಹೇಳಿದರು.

ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿ ನೇತೃತ್ವ ವಹಿಸಿ ಆಶಿರ್ವಚನ ನೀಡಿ, ಸಮಾಜದ ಸಂಘಟನೆಗೆ ಗ್ರಾಮದಲ್ಲಿ ದೇವಸ್ಥಾನ ಶಾಲೆಗಳು ನಿರ್ಮಾಣವಾಗಬೇಕು. ಧರ್ಮದ ಕಾರ್ಯಗಳೊಂದಿಗೆ ದೇಶ ಕಾಯುವ ಯೋಧರ ಮತ್ತು ವ್ಯಾಸಂಗ ಮಾಡುವ ಮಕ್ಕಳ ಶ್ರಯೋಭಿವೃದ್ದಿಗೆ ಹೆಚ್ಚು ಆಧ್ಯತೆ ನೀಡಿ ಎಂದ ಅವರು, ಜಗತ್ತಿನಲ್ಲಿ ಒಳ್ಳೆಯ ಕಾರ್ಯಕ್ಕೆ ಗುರುವಿಗೆ ಶ್ರೇಷ್ಟ ಸ್ಥಾನ ನೀಡಲಾಗಿದೆ. ಬ್ರಹ್ಮ-ವಿಷ್ಣು-ಮಹೇಶ್ವರ ಮೂರು ಶಕ್ತಿಯನ್ನು  ಒಂದೇ ರೂಪದಲ್ಲಿ ಶಿವನ ಸ್ಮರಣೆಯಲ್ಲಿ ಕಾಣುವಂತಾಗಿದೆ ಎಂದ ಅವರು, ಅನ್ನ ಕೊಡುವ ರೈತರ ಬದುಕು ಹಸನನಾಗಲು ಕಾಲಕಾಲಕ್ಕೆ ಮಳೆಯಾಗಿ ಸಂವೃದ್ಧಿಯನ್ನು ಕರುಣಿಸುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಲಾಗಿದೆ ಎಂದರು.

ಕಲಾನಾಥೇಶ್ವರ ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಯೋಗೇಂದ್ರ ಕಾರಗೋಡು ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ, ಕಲಾನಾಥೇಶ್ವರ ದೇವಸ್ಥಾನ ಸೇವಾಸಮಿತಿಯ ಗೌರವಾಧ್ಯಕ್ಷ ಹೂವಪ್ಪ ಕಾರಗೋಡು, ದೇವಸ್ಥಾನ ವಾಸ್ತು ಸಲಹೆಗಾರ ಲಿಂಗಸ್ವಾಮಿಗೌಡರು ಆಲವಳ್ಳಿ, ಮಳಲಿಮಠದ ವೇ.ಶಿವರಾಜ ಆರಾಧ್ಯ ಶಾಸ್ತ್ರಿಗಳು ಮುಖ್ಯ ಆತಿಥಿಗಳಾಗಿ ಭಾಗವಹಿಸಿದರು.

ವೈಧಿಕತ್ವದ ಸಾರತ್ಯದಲ್ಲಿ ವೇ. ಶಿವರಾಜ ಆರಾಧ್ಯ ಶಾಸ್ತ್ರಿಗಳು ಮಳಲಿಮಠದ ಇವರಿಂದ ಶ್ರೀ ಕಲಾನಾಥೇಶ್ವರ ಸ್ವಾಮಿಯ ಹಾಗೂ ಪರಿವಾರ ಪುನರ್ ಪ್ರತಿಷ್ಠಾಪನಾ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು.

ಹರೀಶ್ ಸ್ವಾಗತಿಸಿದರು. ಚೇತನಕುಮಾರ್ ನಿರೂಪಿಸಿದರು.

Malnad Times

Recent Posts

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

8 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

11 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

11 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

16 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

18 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

1 day ago