ಹೊಸನಗರ : ನಾಡಪ್ರಭು ಕೆಂಪೇಗೌಡರಂತಹ ಮಹಾನೀಯರ ಬದುಕು ಇಂದಿನ ಯುವಸಮೂಹಕ್ಕೆ ಆದರ್ಶವಾಗಬೇಕು ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಅವರ 514ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸ್ಪಷ್ಟ ನಿಲುವು, ದೂರ ದೃಷ್ಟಿತ್ವ ಹೊಂದಿದ್ದ ಕೆಂಪೇಗೌಡರು ಬೆಂಗಳೂರು ನಗರ ನಿರ್ಮಾಣದ ಮೂಲ ಪುರುಷ. ತಮ್ಮ ಪಕ್ವ ಆಡಳಿತದ ಮೂಲಕ ಜ್ಯಾತ್ಯಾತೀತರಾಗಿ ಎಲ್ಲಾ ವರ್ಗಕ್ಕೂ ನ್ಯಾಯೋಚಿತ ಸ್ಥಾನಮಾನ ಕಲ್ಪಿಸಿದ ಮಹಾಪುರುಷ ಈ ನಾಡಪ್ರಭು ಕೆಂಪೇಗೌಡ ಎಂದರು.
ತಹಶೀಲ್ದಾರ್ ಡಿ.ಜಿ.ಕೋರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ತಾಲೂಕು ಒಕ್ಕಲಿಗರ ಸಂಘದ ಉಪಾಧ್ಯಕ್ಷ ಹಿಟಾಚಿ ಶ್ರೀಧರ್, ಪ.ಪಂ. ಅಧ್ಯಕ್ಷೆ ಗುಲಾಬಿ. ಉಪಾಧ್ಯಕ್ಷೆ ಕೃಷ್ಣವೇಣಿ, ಸದಸ್ಯ ಹಾಲಗದ್ದೆ ಉಮೇಶ್, ಇಓ ನರೇಂದ್ರ, ಬಿಇಒ ಕೃಷ್ಣಮೂರ್ತಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸದಸ್ಯರಾದ ಶ್ರೀಧರ ಉಡುಪ. ಶ್ರೀನಿವಾಸ ಕಾಮತ್, ಎಸ್.ಎನ್. ರಾಜಮೂರ್ತಿ, ಸೇರಿದಂತೆ ಒಕ್ಕಲಿಗರ ಸಂಘದ ಪ್ರಮುಖರಾದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಪ್ರಿಯಾಂಕ ಪೂರ್ಣೇಶ್, ಗ್ರಾಪಂ ಸದಸ್ಯ ಕೃಷ್ಣಮೂರ್ತಿ, ಟೆಂಕಬೈಲು ರಾಜೇಶ್, ವಿಠಲ್ ರಾವ್, ಕಾಯಿ ನಾಗೇಶ್ ಮೊದಲಾದವರು ಇದ್ದರು.
ಇದೇ ವೇಳೆ ಒಕ್ಕಲಿಗರ ಸಂಘದ ವಿವಿಧ ಚುಟುವಟಿಕೆಗಳಿಗೆ ಅಗತ್ಯವಾದ 3 ಎಕರೆ ಭೂಮಿ ನೀಡುವಂತೆ ಶಾಸಕರಿಗೆ ಸಂಘ ಮನವಿ ಸಲ್ಲಿಸಿತು.
ಶಿಕ್ಷಕ ಪ್ರವೀಣ್ ನಿರೂಪಿಸಿ, ಪ್ರಣೇಶ್ ಸ್ವಾಗತಿಸಿ, ಚುಂಚಾದ್ರಿ ಮಹಿಳಾ ಸಂಘದ ಸದಸ್ಯರು ಪ್ರಾರ್ಥಿಸಿದರು.
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…