ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೊಸನಗರದ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ ; ಆರೋಪಿ ಬಂಧನ
ಹೊಸನಗರ : ಕೆಇಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚಿಸಿದ್ದ ಆರೋಪಿಯನ್ನು ಹೊಸನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಘಟನಾ ವಿವರ :
ಇಲ್ಲಿನ ಸೊನಲೆ ಗ್ರಾಮದ ವ್ಯಕ್ತಿಗೆ ಆರೋಪಿಯು ಸಾಮಾಜಿಕ ಜಾಲತಾಣ ಮ್ಯಾಟ್ರಿಮೊನಿಯಲ್ಲಿ ಪರಿಚಯ ಮಾಡಿಕೊಂಡು ಕೆ.ಇ.ಬಿ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ದಾಖಲಾದ ಪ್ರಕರಣದಲ್ಲಿ ಆರೋಪಿ ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಹಿಟ್ಟಿನಹಳ್ಳಿ ಗ್ರಾಮದ ಜೈ ಭೀಮ್ ಪಡಕೋಟೆ ಬಿನ್ ವಿಠಲ್ (36) ಈತನನ್ನು ಬಂಧಿಸಿ ವಂಚನೆ ಮಾಡಿದ 2.50 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆ ಶಿವಮೊಗ್ಗ ಎಸ್.ಪಿ ಜಿ.ಕೆ ಮಿಥುನ್ ಕುಮಾರ್, ಅಡಿಷನಲ್ ಎಸ್.ಪಿ ಅನಿಲ್ ಕುಮಾರ್ ಎಸ್ ಭೂಮರೆಡ್ಡಿ, ತೀರ್ಥಹಳ್ಳಿ ಉಪ ವಿಭಾಗದ ಡಿವೈಎಸ್.ಪಿ ಗಜಾನನ ಎಂ ಸುತಾರ ರವರುಗಳ ಮಾರ್ಗದರ್ಶನದಲ್ಲಿ ಹೊಸನಗರ ವೃತ್ತ ನಿರೀಕ್ಷಕರಾದ ಗುರಣ್ಣ ಹೆಬ್ಬಾಳ್ ರವರ ನೇತೃತ್ವದಲ್ಲಿ ಹೊಸನಗರ ಠಾಣೆಯ ಪಿ.ಎಸ್.ಐ ಶಿವಾನಂದ ವೈ.ಕೆ. ರವರು ಹಾಗೂ ಸಿಬ್ಬಂದಿಗಳಾದ ಗಿರೀಶ್, ಪ್ರಕಾಶ್, ಗಂಗಪ್ಪ ಬಟೋಲಿ, ಸುನಿಲ್, ಸಂದೀಪ, ಮಹೇಶ್ ಹಾಗೂ ಗಿರಿಪ್ರಸಾದ್ ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.