Categories: Hosanagara News

ಕೊಡಚಾದ್ರಿ ಗಿರಿ ನಿರ್ಬಂಧ ತೆರವಿಗಾಗಿ ಪ್ರತಿಭಟನೆ

ಹೊಸನಗರ : ಕೊಡಚಾದ್ರಿ ಗಿರಿಯು ನೂರಾರು ವರ್ಷಗಳಿಂದ ಭಕ್ತರ ಆರಾಧ್ಯ ಕೇಂದ್ರವಾಗಿದೆ. ವನ್ಯಜೀವಿ ಇಲಾಖೆ ಕೊಡಚಾದ್ರಿ ಪ್ರವೇಶವನ್ನು ನಿರ್ಬಂಧಿಸಿರುವುದರಿಂದ ಭಕ್ತರ ಧಾರ್ಮಿಕ ನಂಬಿಕೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದ್ದು,ಕೊಡಚಾದ್ರಿ ದೇವಾಲಯದಲ್ಲಿ ಪ್ರತಿನಿತ್ಯ ನಡೆಯುವ ಪೂಜಾ ವಿಧಿವಿಧಾನಗಳಿಗೂ ಸಹ ಇದರಿಂದ ತೊಂದರೆ ಉಂಟಾಗಿದೆ. ಕೂಡಲೇ ನಿರ್ಬಂಧ ತೆರವುಗೊಳಿಸಬೇಕು ಎಂದು ಕೊಡಚಾದ್ರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅದ್ಯಕ್ಷ ಶಿವರಾಮ ಶೆಟ್ಟಿ ಸಂಪದಮನೆ ಹೇಳಿದರು.


ಇಲ್ಲಿನ ಕಟ್ಟಿನಹೊಳೆಯ ವನ್ಯಜೀವಿ ವಿಭಾಗದ ತನಿಖಾ ಠಾಣೆ ಎದುರು,ಕೊಡಚಾದ್ರಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವನ್ಯಜೀವಿ ಇಲಾಖೆ ಕೊಡಚಾದ್ರಿಯನ್ನು ಕೇವಲ ಪ್ರವಾಸಿ ತಾಣವಾಗಿ ಮಾತ್ರ ಏಕಮುಖ ದೃಷ್ಟಿಯಿಂದ ನೋಡುತ್ತಿದ್ದು,ಯಾವುದೇ ಪೂರ್ವಾಪರ ಆಲೋಚನೆ ಮಾಡದೇ ಕೊಡಚಾದ್ರಿಗೆ ನಿರ್ಬಂಧ ವಿಧಿಸಿದೆ. ರಾಜ್ಯ ಹೊರರಾಜ್ಯಗಳಿಂದ ನಿತ್ಯವೂ ಸಾವಿರಾರು ಭಕ್ತರು ಕೊಡಚಾದ್ರಿಗೆ ಬರುತ್ತಿದ್ದು,ಅವರಿಗೆ ದೇವಸ್ಥಾನ ದರ್ಶನ ಲಭಿಸದೇ ನಿರಾಸೆಯಾಗಿದೆ.ಕೂಡಲೇ ನಿರ್ಬಂಧ ತೆರವು ಮಾಡುವಂತೆ ಇಲಾಖೆಗೆ ಮನವಿ ನೀಡಿದ್ದೇವೆ. ಈ ಮನವಿಗೆ ಪುರಸ್ಕಾರ ನೀಡದಿದ್ದರೆ ಮುಂದೆ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದರು.


ಸಂಪೆಕಟ್ಟೆ ಗ್ರಾಪಂ ಸದಸ್ಯ ಡಿ.ಕೆ ಸತ್ಯನಾರಾಯಣ ಮಾತನಾಡಿ, ವನ್ಯಜೀವಿ ಕೊಡಚಾದ್ರಿಗೆ ಬರುವ ಭಕ್ತರಿಂದ ಬೇಕಾಬಿಟ್ಟಿ ಹಣ ವಸೂಲು ಮಾಡುತ್ತಿದೆ. ಹೀಗೆ ವಸೂಲು ಮಾಡಿದ ಹಣದಲ್ಲಿ ಕೊಡಚಾದ್ರಿ ರಸ್ತೆ ದುರಸ್ಥಿ ಮಾಡುವುದನ್ನು ಬಿಟ್ಟು,ರಸ್ತೆ ಸರಿಯಿಲ್ಲ ಎಂಬ ಕಾರಣ ನೀಡಿ ಭಕ್ತಾಧಿಗಳಿಗೆ ನಿರ್ಬಂಧ ಹೇರಲಾಗಿದೆ. ಅಲ್ಲದೆ ಕೊಡಚಾದ್ರಿಯಲ್ಲಿ ಬರುವ ಭಕ್ತರು ಹಾಗೂ ಪ್ರವಾಸಿಗರಿಗಾಗಿ ಶೌಚಾಲಯ ವ್ಯವಸ್ಥೆಯನ್ನೂ ಸಹ ಮಾಡಿಲ್ಲ ಎಂದರು.


ವಲಯ ಅರಣ್ಯ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಉಪ ಅರಣ್ಯಾಧಿಕಾರಿ ರೂಪೇಶ್ ಚೌಹಾಣ್ ಅವರಿಗೆ ಕೂಡಲೇ ನಿರ್ಬಂಧ ತೆರವು ಮಾಡುವಂತೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.


ವ್ಯವಸ್ಥಾಪನಾ ಸಮಿತಿ ಸದಸ್ಯ ಗಣಪತಿ ಗುರುಟೆ ಹಾಗೂ ಗಿರೀಶ್ ಕೆ.ಬಿ ಸರ್ಕಲ್, ಕೃಷ್ಣಮೂರ್ತಿ ಬಾಸ್ತಿ, ರವೀಶ್ ಕಟ್ಟಿನಹೊಳೆ, ಶಿವರಾಮ ಕಟ್ಟಿನಹೊಳೆ ಹಾಗೂ 75ಕ್ಕೂ ಹೆಚ್ಚು ಜೀಪ್ ಹಾಗೂ ಹೋಮ್‌ಸ್ಟೆ ಮಾಲಿಕರು, ಚಾಲಕರು ಮತ್ತು ಇತರರು ಭಾಗವಹಿಸಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago