ಹೊಸನಗರ : ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಾಲು ಸಮೇತವಾಗಿ ಬಂಧಿಸಲಾಗಿದೆ.
ರಾಜ್ಯ ವಿಧಾನ ಸಭಾ ಚುನಾವಣೆ-2023 ರ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಇಂದು ಅಬಕಾರಿ ಆಯುಕ್ತರು ಮತ್ತು ಅಬಕಾರಿ ಜಂಟಿ ಆಯುಕ್ತರು ಮಂಗಳೂರು ವಿಭಾಗ ರವರ ಆದೇಶ ಹಾಗೂ ಅಬಕಾರಿ ಉಪ ಆಯುಕ್ತರು ಶಿವಮೊಗ್ಗ ಜಿಲ್ಲೆರವರ ನಿರ್ದೇಶನದಂತೆ ಶಿವಪ್ರಸಾದ್ ಅಬಕಾರಿ ಉಪ ಅಧೀಕ್ಷಕರರು ತೀರ್ಥಹಳ್ಳಿ ಉಪ ವಿಭಾಗ ರವರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕರು,ಅಬಕಾರಿ ಉಪ ನಿರೀಕ್ಷಕರು ಹೊಸನಗರ ವಲಯ ಇವರು ಸಿಬ್ಬಂದಿಯೊಂದಿಗೆ ತಾಲ್ಲೂಕಿನ ಕೋಡೂರು ಗ್ರಾಮದ ವಾಸಿಯಾದ ಪ್ರದೀಪ ಬಿನ್ ಸುಬ್ಬಪ್ಪ ಈತನು ಅಕ್ರಮವಾಗಿ 9 ಲೀಟರ್ ಮದ್ಯ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ದಾಳಿಯಲ್ಲಿ ಶಿವಪ್ರಸಾದ್ ಅಬಕಾರಿ ಉಪ ಅಧಿಕ್ಷಕರು, ತೀರ್ಥಹಳ್ಳಿ ಉಪ ವಿಭಾಗ, ನಾಗರಾಜ ಅಬಕಾರಿ ನಿರೀಕ್ಷಕರು, ವಾಸವಿ. ಟಿ. ಎನ್ ಅಬಕಾರಿ ಉಪ ನಿರೀಕ್ಷಕರು ಸಿಬ್ಬಂದಿಗಳಾದ ಪ್ರಕಾಶ್ ಕೆ, ರಾಘವೇಂದ್ರ ಟಿ, ಪಾಂಡು ಅಂಬವ್ವಗೊಳ್ ಹಾಗೂ ವಾಹನ ಚಾಲಕರಾದ ಬಸವರಾಜ್ ಮತ್ತು ಪ್ರಸನ್ನ ರವರು ಭಾಗವಹಿಸಿದ್ದರು.
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…
ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…
ರಿಪ್ಪನ್ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…
ರಿಪ್ಪನ್ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…
ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…
ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…