– ತಾಲ್ಲೂಕಿನಾದ್ಯಂತ ಸಾವಿರಾರು ಎಕರೆ ಅರಣ್ಯ ನಾಶವಾಗುತ್ತಿದ್ದರೂ ಕೇಳುವರ್ಯಾರು ಗತಿಯಿಲ್ಲ..!
– ಸದ್ಯದಲ್ಲಿಯೇ ಲೋಕಾಯುಕ್ತಕ್ಕೆ ದೂರು ; ಗಿರೀಶ್ ಆಚಾರ್..!!
ಹೊಸನಗರ: ತಾಲ್ಲೂಕಿನ ಕೋಡೂರು ಗ್ರಾ.ಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ಜಾಗವನ್ನು ಸರ್ವೆ ನಂಬರ್ 11ರಲ್ಲಿ ಲಕ್ಷ-ಲಕ್ಷ ರೂಪಾಯಿಗಳಿಗೆ ಅರಣ್ಯ ಭೂಮಿ ಮಾರಾಟ ಮಾಡುವ ದಂಧೆ ಹಾಗೂ ರಾತ್ರಿ ಬೆಳಗಾಗುವ ಒಳಗೆ ದೊಡ್ಡ-ದೊಡ್ಡ ಮರಗಳನ್ನು ಕಡಿದು ಜೆಸಿಬಿ ಯಂತ್ರದ ಮೂಲಕ ಟ್ರಂಚ್ ಮಾಡಿ ಅಡಿಕೆ ಗಿಡಗಳನ್ನು ನೆಡುತ್ತಿದ್ದರೂ ಅರಣ್ಯ ಇಲಾಖೆಯಾಗಲಿ ಸಂಬಂಧಪಟ್ಟ ಅಧಿಕಾರಿಯಾಗಲಿ ಊರಿನ ನಾಗರೀಕರಾಗಲಿ ಕೇಳುವವರು ಗತಿಯಿಲ್ಲ ಎಂದು ಜನ ಸಂಗ್ರಾಮ ಪರಿಷತ್ ಜಿಲ್ಲಾ ಸಂಘಟಕರಾದ ಗಿರೀಶ್ ಆಚಾರ್ರವರು ಆರೋಪಿಸಿದ್ದಾರೆ.
ತಾಲ್ಲೂಕಿನಲ್ಲಿ ಬಲಾಢ್ಯರು ಸರ್ಕಾರದ ಕಂದಾಯ, ಅರಣ್ಯ ಭೂಮಿಯನ್ನು ಮಾರಾಟ ಮಾಡುತ್ತಿದ್ದರೂ ಅಧಿಕಾರಿಗಳು ಕಂಡು ಕಾಣದವರಂತೆ ವರ್ತಿಸುತ್ತಿದ್ದಾರೆ. ಆ ಭಾಗದ ಅರಣ್ಯ ರಕ್ಷಕರು ವಿಷಯ ತಿಳಿದಿದ್ದರೂ ಅವರು ಹಿರಿಯ ಅಧಿಕಾರಿಗಳ ಗಮನಕ್ಕೆ ತರುತ್ತಿಲ್ಲ ಎಂದು ಆರೋಪಿಸಿದರು.
ಹೊಸನಗರ ತಾಲ್ಲೂಕಿನಲ್ಲಿ ಅರಣ್ಯ ಇಲಾಖೆಯ ಜಾಗ ಎಲ್ಲೆಲ್ಲಿ ಅಕ್ರಮವಾಗಿ ಮರಗಳನ್ನು ಕಡಿದು ಎಕರೆ ಗಟ್ಟಲೇ ತೋಟ ಮಾಡಿರುವ ಬಗ್ಗೆ ನನ್ನ ಬಳಿ ಮಾಹಿತಿಯಿದ್ದು ಅವುಗಳನ್ನು ಲೋಕಾಯುಕ್ತ ಕೋರ್ಟ್ಗೆ ಹಾಕಲಾಗುವುದು ಎಂದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…