ಖರ್ಗೆ ಅವಮಾನಿಸಿದ ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾ ಮಾಡಿ ; ದಸಂಸ ಒತ್ತಾಯ

0 37


ಹೊಸನಗರ: ಮಲ್ಲಿಕಾರ್ಜುನ ಖರ್ಗೆಯವರನ್ನು ಅವಮಾನಿಸಿದ ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರರವರನ್ನು ತಕ್ಷಣ ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ದಲಿತ ಸಂಘರ್ಷ ಸಮಿತಿ ಹೊಸನಗರ ಶಾಖೆ ಜಿಲ್ಲಾ ಸಂಚಾಲಕ ಕೆ.ವಿ.ನಾಗರಾಜ್ ಅರಳಸುರಳಿಯವರ ನೇತೃತ್ವದಲ್ಲಿ ಹೊಸನಗರ ಪ್ರಭಾರ ತಹಶೀಲ್ದಾರ್ ರಾಕೇಶ್‌ರವರಿಗೆ ಮನವಿ ಪತ್ರ ಸಲ್ಲಿಸಿದರು.


ನಂತರ ಮಾತನಾಡಿದ ನಾಗರಾಜ್‌, ಆರಗ ಜ್ಞಾನೇಂದ್ರರವರು ಸಾರ್ವಜನಿಕ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನೂ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ದಲಿತ ನಾಯಕರು ಕಾಂಗ್ರೆಸ್‌ನ ರಾಷ್ಟೀಯ ಅಧ್ಯಕ್ಷರೂ ಹಾಗೂ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರನ್ನೂ ಅವರ ಹಾವಭಾವ, ಅವರ ಬಣ್ಣದ ಬಗ್ಗೆ ವೈಯಕ್ತಿಕ ವಿಚಾರವನ್ನು ತೆಗೆದುಕೊಂಡು ಅವಮಾನಿಸಿದ್ದು ಇಡೀ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಇಂಥಹ ಮನಸ್ಥಿತಿ ಇರುವಂಥಹ ಜನ ನಾಯಕರನ್ನು ಆಯ್ಕೆ ಮಾಡಿರುವಂಥಹ ನಾವುಗಳು ತಲೆ ತಗ್ಗಿಸುವಂಥ ಪರಿಸ್ಥಿತಿ ಬಂದಿದೆ. ಆದ್ದರಿಂದ ಇಂಥಹ ಕೆಟ್ಟ ನಾಯಕರು ನಮಗೆ ಬೇಡ ಇವರನ್ನು ತಕ್ಷಣದಿಂದ ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ಕೇಳಿಕೊಂಡರು.


ಈ ಸಂದರ್ಭದಲ್ಲಿ ತಾಲ್ಲೂಕು ಸಂಚಾಲಕರಾದ ಡಿ. ಮಂಜುನಾಥ್, ನಾಗೇಂದ್ರ ಎಂ, ಉಮೇಶ್ ಹೊಸಮನೆ, ಸಂದೇಶ ಸಂಪೆಕಟ್ಟೆ, ನಾಗರಾಜ್ ಕೆ, ಇಂದಿರಾ ನಗರ, ಅಣಪ್ಪ ಕೆ.ಬಿ ಅರಳಸುರಳಿ, ಸುಬ್ರಹ್ಮಣ್ಯ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಪ್ಪ ಹೊಸನಗರ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!