Categories: Hosanagara News

ಖರ್ಗೆ ಅವಮಾನಿಸಿದ ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾ ಮಾಡಿ ; ದಸಂಸ ಒತ್ತಾಯ


ಹೊಸನಗರ: ಮಲ್ಲಿಕಾರ್ಜುನ ಖರ್ಗೆಯವರನ್ನು ಅವಮಾನಿಸಿದ ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರರವರನ್ನು ತಕ್ಷಣ ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ದಲಿತ ಸಂಘರ್ಷ ಸಮಿತಿ ಹೊಸನಗರ ಶಾಖೆ ಜಿಲ್ಲಾ ಸಂಚಾಲಕ ಕೆ.ವಿ.ನಾಗರಾಜ್ ಅರಳಸುರಳಿಯವರ ನೇತೃತ್ವದಲ್ಲಿ ಹೊಸನಗರ ಪ್ರಭಾರ ತಹಶೀಲ್ದಾರ್ ರಾಕೇಶ್‌ರವರಿಗೆ ಮನವಿ ಪತ್ರ ಸಲ್ಲಿಸಿದರು.


ನಂತರ ಮಾತನಾಡಿದ ನಾಗರಾಜ್‌, ಆರಗ ಜ್ಞಾನೇಂದ್ರರವರು ಸಾರ್ವಜನಿಕ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನೂ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ದಲಿತ ನಾಯಕರು ಕಾಂಗ್ರೆಸ್‌ನ ರಾಷ್ಟೀಯ ಅಧ್ಯಕ್ಷರೂ ಹಾಗೂ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರನ್ನೂ ಅವರ ಹಾವಭಾವ, ಅವರ ಬಣ್ಣದ ಬಗ್ಗೆ ವೈಯಕ್ತಿಕ ವಿಚಾರವನ್ನು ತೆಗೆದುಕೊಂಡು ಅವಮಾನಿಸಿದ್ದು ಇಡೀ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಇಂಥಹ ಮನಸ್ಥಿತಿ ಇರುವಂಥಹ ಜನ ನಾಯಕರನ್ನು ಆಯ್ಕೆ ಮಾಡಿರುವಂಥಹ ನಾವುಗಳು ತಲೆ ತಗ್ಗಿಸುವಂಥ ಪರಿಸ್ಥಿತಿ ಬಂದಿದೆ. ಆದ್ದರಿಂದ ಇಂಥಹ ಕೆಟ್ಟ ನಾಯಕರು ನಮಗೆ ಬೇಡ ಇವರನ್ನು ತಕ್ಷಣದಿಂದ ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ಕೇಳಿಕೊಂಡರು.


ಈ ಸಂದರ್ಭದಲ್ಲಿ ತಾಲ್ಲೂಕು ಸಂಚಾಲಕರಾದ ಡಿ. ಮಂಜುನಾಥ್, ನಾಗೇಂದ್ರ ಎಂ, ಉಮೇಶ್ ಹೊಸಮನೆ, ಸಂದೇಶ ಸಂಪೆಕಟ್ಟೆ, ನಾಗರಾಜ್ ಕೆ, ಇಂದಿರಾ ನಗರ, ಅಣಪ್ಪ ಕೆ.ಬಿ ಅರಳಸುರಳಿ, ಸುಬ್ರಹ್ಮಣ್ಯ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಪ್ಪ ಹೊಸನಗರ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

7 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

1 week ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

1 week ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

1 week ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago