ರಿಪ್ಪನ್ಪೇಟೆ: ಕೃಷಿ ಅರಣ್ಯವು ಒಂದು ಭೂ ಬಳಕೆ ಪದ್ದತಿಯಾಗಿದೆ. ಕೃಷಿ ಅರಣ್ಯ ಪದ್ದತಿಯನ್ನು ಪಾಲಿಸುವುದರಿಂದ ಆಹಾರ ಮತ್ತು ಪೌಷ್ಟಿಕಾಂಶದ ನಿರ್ವಹಣೆಯಾಗುತ್ತದೆ. ಹಾಗೂ ಕಟ್ಟಿಗೆ ಇಳುವರಿ ಮೇವಿನ ಇಳುವರಿ ಮತ್ತು ಹಣ್ಣಿನ ಇಳುವರಿಯ ಮೂಲಕ ಬೆಳೆ ಹಾನಿ ಸಮಯದಲ್ಲಿ ನೆರವಾಗುತ್ತದೆ ಮತ್ತು ಮುಖ್ಯವಾಗಿ ಕೃಷಿಯೊಂದಿಗೆ ಅರಣ್ಯ ಗಿಡ, ಮರಗಳನ್ನು ಬೆಳೆಸುವುದರಿಂದ ಜೀವವೈವಿಧ್ಯತೆಯನ್ನು ಕಾಪಾಡಿದಂತಾಗುತ್ತದೆ ಎಂದು ಕೃಷಿ ವಿದ್ಯಾರ್ಥಿನಿ ಕು|| ಶ್ರೀಲಕ್ಷ್ಮಿ ರೈತರಿಗೆ ಕರೆ ನೀಡಿದರು.
ರಿಪ್ಪನ್ಪೇಟೆ ಸಮೀಪದ ಗವಟೂರು ಶ್ರೀರಾಮೆಶ್ವರ ದೇವಸ್ಥಾನದ ಆವರಣದಲ್ಲಿ ಇರುವಕ್ಕಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಗಳ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ.ಎಸ್ಸಿ ಕೃಷಿ ಚಿಗುರು ತಂಡದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಲ್ಲಿ ಭಾಗವಹಿಸಿ ರೈತರಿಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಶ್ರೀಗಂಧದ ಮರ ಗಾಳಿ ಮರ, ಬಾಗೆಮರ, ನೆಲ್ಲಿ ಮರದ ಜೊತೆ ಶ್ರೀಗಂಧವನ್ನು ಬೆಳೆಸಬೇಕು ಅದರ ರಕ್ಷಣೆಗಾಗಿ ನಾಯಿ ಸಾಕಾಣಿಕೆಯೊಂದಿಗೆ ಬೇಲಿ ಮಾಡುವುದರೊಂದಿಗೆ ಮೈಕ್ರೋಚಿಪ್ ಅಳವಡಿಕೆ ಮಾಡುವುದರಿಂದ ಬೆಳೆಯ ರಕ್ಷಣೆ ಮಾಡಿಕೊಳ್ಳುವಂತೆ ರೈತರಿಗೆ ಕರೆ ನೀಡಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…