ಗ್ರಾಮದಲ್ಲಿ ಸರ್ವರನ್ನು ಸಂಘಟಿತರನ್ನಾಗಿಸುವ ಶಕ್ತಿ ದೇವಸ್ಥಾನಕ್ಕಿದೆ

ರಿಪ್ಪನ್‌ಪೇಟೆ: ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಕೋಮಭಾವನೆಯೊಂದಿಗೆ ಅಶಾಂತಿ ಅರಾಜಕತೆ ಸೃಷ್ಠಿಯಾಗುತ್ತಿದ್ದು ಇದರಿಂದ ಜನರಲ್ಲಿ ನೆಮ್ಮದಿ ಇಲ್ಲದಂತಾಗಿರುವ ಸಂದರ್ಭ ಉದ್ಭವಗೊಳ್ಳುತ್ತಿರುವ ಬಗ್ಗೆ ಕೆಳದಿ ರಾಜಗುರು ಮಹಾಮಹತ್ತಿನ ಭುವನಗಿರಿ ಕವಲೇದುರ್ಗಮಠದ ಮರುಳಸಿದ್ದ ಶಿವಾಚಾರ್ಯ ಮಹಾಸ್ವಾಮಿಜಿ ತೀವ್ರ ಕಳವಳ ವ್ಯಕ್ತಪಡಿಸಿದರು.

ರಿಪ್ಪನ್‌ಪೇಟೆ ಸಮೀಪದ ಶೆಟ್ಟಿಬೈಲು ಗ್ರಾಮದ ಶ್ರೀ ಗುಡ್ಡದಮಠ ಶೀಲವಂತಚೌಡೇಶ್ವರಿ ಅಮ್ಮನವರ ಹಾಗೂ ಲಿಂ. ಶಿವಾಚಾರ್ಯರ ನೂತನ 5 ಗದ್ದುಗೆ ಮತ್ತು ನಾಗದೇವರ ಪುನರ್‌ಪ್ರತಿಷ್ಠಾಪನಾ ಸಮಾರಂಭ ಮತ್ತು ಧರ್ಮಜಾಗೃತ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ ನೀಡಿ, ಧರ್ಮ ಧಾರ್ಮಿಕ ಆಚರಣೆಗಳಿಂದ ಗ್ರಾಮಸ್ಥರಲ್ಲಿ ಸಂಘಟನೆಯೊಂದಿಗೆ ಸಾಮರಸ್ಯದಿಂದಿರುವುದು ಮತ್ತು ದ್ವೇಷ ಅಸೂಯೆ ಭಾವನೆ ದೂರವಾಗಿ ಶಾಂತಿ ನೆಮ್ಮದಿಯ ಬದುಕು ಸಾದ್ಯವಾಗುವುದು ಎಂದು ಹೇಳಿದರು.

ಸದಾನಂದ ಶಿವಯೋಗಾಶ್ರಮ ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಮಹಾಸ್ವಾಮಿಜೀ ಆಶೀರ್ವಚನ ನೀಡಿ ನಮ್ಮೂರಿನ ಗ್ರಾಮ ದೇವತೆಗಳು ಊರಿನಲ್ಲಿ ಶಾಂತಿ ನೆಮ್ಮದಿ ಕಾಪಾಡುತ್ತವೆಂಬ ನಮ್ಮ ಪೂರ್ವಿಕರ ನಂಬಿಕೆಯಂತೆ ಅದನ್ನು ನಮ್ಮ ಯುವ ಜನಾಂಗ ಇಂದಿನವರೆಗೂ ಪಾಲಿಸಿಕೊಂಡು ಬರಲಾಗುತ್ತಿದ್ದು ಮುಂದಿನ ಯುವ ಪೀಳಿಗಗೂ ಈ ಸಂಪ್ರದಾಯ ಮುಂದುವರಿಯಲಿ ಎಂದರು.

ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ಎ.ದೇವರಾಜ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹುಂಚದ ವೇ.ಬ್ರ.ಅಜಯ್‌ಶಾಸ್ತ್ರಿಗಳು ಮತ್ತು ಅರ್ಚಕ ವೃಂದ ಇವರಿಂದ ನಾಗದೇವತೆಯ ಪುನರ್‌ಪ್ರತಿಷ್ಠಾಪನೆ ಮಂತ್ರೋಪದೇಶ ಪೂರ್ಣಾಹುತಿ, ನೂತನ ಮಂದಿರದ ಕಳಸಾರೋಹಣ, ಮಹಾಪೂಜೆ ಪರಿವಾರ ಪೂಜೆ ವಿಧಿವಿಧಾನಗಳು ಜರುಗಿದವು.

ಇದೇ ಸಂದರ್ಭದಲ್ಲಿ ಗ್ರಾಮದ ಹಿರಿಯರಾದ ಪುಟ್ಟೇಗೌಡ ದಂಪತಿಗಳು, ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ಎ.ದೇವರಾಜ್ ಗೌಡ ದಂಪತಿ ಮತ್ತು ಲಿಂಗಸ್ವಾಮಿಗೌಡ ಆಲವಳ್ಳಿ, ರೋಷನ್ ದಾವಣಗೆರೆ ಗ್ರಾಮ ಪಂಚಾಯ್ತಿ ಸದಸ್ಯೆ ಯಶಸ್ವತಿ ವೃಷಭರಾಜ್ ಜೈನ್, ಎಸ್.ಆರ್.ಲಿಂಗಾರ್ಜುನ, ಕೆ.ಎಂ ಬಸವರಾಜ್ ಇನ್ನಿತರರನ್ನು ಸನ್ಮಾನಿಸಲಾಯಿತು.

ಧಾರ್ಮಿಕ ಸಮಾರಂಭದಲ್ಲಿ ಶೆಟ್ಟಿಬೈಲು, ಬಿಲ್ಲೇಶ್ವರ, ಹುಂಚ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಮಲ್ಲಿಕಾರ್ಜುನ ಸ್ವಾಗತಿಸಿ, ನಿರೂಪಿಸಿದರು.

Malnad Times

Recent Posts

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

56 mins ago

ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನಾ ಸ್ಥಳಕ್ಕೆ ಶಾಸಕದ್ವಯರ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…

4 hours ago

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

8 hours ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

20 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

23 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

24 hours ago