ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿ ಸಮಗ್ರ ಕೃಷಿ ಬಗ್ಗೆ ಗುಂಪು ಚರ್ಚೆ

ರಿಪ್ಪನ್‌ಪೇಟೆ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ ಕೃಷಿಯ ಚಿಗುರು ತಂಡದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿಯಲ್ಲಿ ಶುಕ್ರವಾರ ಗವಟೂರು ಗ್ರಾಮದ ರೈತ ಶಿವಪ್ಪಗೌಡ ಅವರ ಮನೆಯಲ್ಲಿ ಇರುವಕ್ಕಿ ಮಹಾವಿದ್ಯಾಲಯದ ಕೃಷಿ ವಿಸ್ತರಣೆ ವಿಭಾಗದ ಪ್ರಾಧ್ಯಾಪಕ ಡಾ. ಶಶಿಕಲಾ ಮತ್ತು ಡಾ. ಅರುಣ್ ಅವರ ಉಪಸ್ಥಿತಿಯಲ್ಲಿ ಗುಂಪು ಚರ್ಚೆ ನಡೆಯಿತು. ಈ ಚರ್ಚೆಯಲ್ಲಿ ರೈತರಿಗೆ ಮುಖ್ಯವಾಗಿ ಸಮಗ್ರ ಕೃಷಿ ಪದ್ಧತಿಯ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಲಾಯಿತು.

ಅಡಿಕೆಯಲ್ಲಿ ಅಂತರ್ ಬೆಳೆಯಾಗಿ ಕಾಳುಮೆಣಸನ್ನು ಬೆಳೆಯಬಹುದು. ಕಾಳುಮೆಣಸನ್ನು ಕಡಿಮೆ ತೇವಾಂಶ ಮತ್ತು ಸರಿಯಾದ ಪೋಷಕಾಂಶಗಳ ನಿರ್ವಹಣೆಯ ಮೂಲಕ ಬೆಳೆಸಿದಾದಲ್ಲಿ ಕಡಿಮೆ ಜಗದಲ್ಲಿಯೂ ಲಕ್ಷಗಟ್ಟಲೆ ಆದಾಯವನ್ನು ಪಡೆಯಬಹುದು. ಇನ್ನೊಂದು ಅಂತರ್ ಬೆಳೆಯೆಂದರೆ ಜಾಯಿಕಾಯಿ, ಯಾವುದೇ ರೋಗ ಮತ್ತು ಕೀಟಬಾಧೆ ಇಲ್ಲದ ಈ ಸಸ್ಯದ ಕಾಯಿ ಅಲ್ಲದೆ ಅದರ ಸಿಪ್ಪೆಗಳಿಗೂ ಅಪಾರ ಬೆಲೆಯಿದೆ ಎಂದು ಡಾ.ಅರುಣ್ ಕುಮಾರ್ ರವರು ನೆರೆದ ರೈತರಿಗೆ ತಿಳಿಸಿಕೊಟ್ಟರು.

ನಂತರ ರೈತ ಮಹಿಳೆಯರು ಕೇಳಿದ ಕೋಳಿ ಸಾಕಾಣಿಕೆಯ ಬಗೆಗಿನ ಪ್ರಶ್ನೆಗಳಿಗೆ ಕೊಳಿಮರಿಗಳಿಗೆ ಸರಿಯಾದ ಸಮಯದಲ್ಲಿ ಲಸೋಟ ಮುಂತಾದ ಲಸಿಕೆಗಳನ್ನು ಹಾಕಿಸಬೇಕು ಎಂದು ಸಲಹೆ ನೀಡಿದರು.

ಹಸುಗಳ ಸಾಕಾಣಿಕೆಯಲ್ಲಿ ಮೇವಿನ ನಿರ್ವಹಣೆ ಹಾಗೂ ಹೇಗೆ ಜೇನುಸಾಕಾಣಿಕೆಯಿಂದ ಕಡಿಮೆ ವೆಚ್ಚ ಮತ್ತು ಶ್ರಮದಲ್ಲಿ ಉತ್ತಮ ಆದಾಯ ಗಳಿಸಬಹುದು ಎಂಬುದನ್ನೂ ರೈತರ ಜೊತೆ ಚರ್ಚಿಸಲಾಯಿತು.

ಕೋವಿಡ್ ನಂತರ ಕೃಷಿ ಬಗ್ಗೆ ಬದಲಾದ ಜನರ ಪರಿಕಲ್ಪನೆ, ವಾರಾಂತ್ಯದ ಕೃಷಿಕರ ಸಂಘ ಮತ್ತು ತಾರಸಿ ತೋಟಗಾರರ ಸಂಘದ ಬಗ್ಗೆ ಡಾ. ಶಶಿಕಲಾ ರವರು ಮಾಹಿತಿ ನೀಡಿ ನೆರೆದ ರೈತ ಮಹಿಳೆಯರಿಗೆ ಎಂತಹ ವಿಭಿನ್ನವಾದ ಕೃಷಿ ಪದ್ಧತಿಗಳಲ್ಲಿ ತೊಡಗಿಕೊಳ್ಳುವಂತೆ ಪ್ರೇರೇಪಿಸಿದರು.

Malnad Times

Recent Posts

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

5 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

6 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

19 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

22 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

22 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

23 hours ago