ರಿಪ್ಪನ್ಪೇಟೆ : ಚಲಿಸುತ್ತಿದ್ದ ಖಾಸಗಿ ಬಸ್ನಿಂದ ಮಗುವಿನೊಂದಿಗೆ ವ್ಯಕ್ತಿ ಬಿದ್ದು ಗಾಯಗೊಂಡ ಘಟನೆ ಕೋಡೂರು ಸಮೀಪದ ಶಾಂತಪುರದಲ್ಲಿ ಇದೀಗ ನಡೆದಿದೆ.
ಹೊಸನಗರದಿಂದ ಶಿವಮೊಗ್ಗ ಕಡೆ ಹೊರಟಿದ್ದ ಖಾಸಗಿ ಬಸ್ಗೆ ಕೀಳಂಬಿ ಬಸ್ ನಿಲ್ದಾಣದಲ್ಲಿ ಮಗುವಿನೊಂದಿಗೆ ಬಸ್ ಹತ್ತಿದ ವ್ಯಕ್ತಿ ಬಸ್ ಹತ್ತಿದ ಕೇವಲ 200 ಮೀ. ದೂರ ಸಾಗುವಷ್ಟರಲ್ಲಿ ಬಸ್ನಿಂದ ಕೆಳಗೆ ಬಿದಿದ್ದಾರೆ. ಈ ವೇಳೆ ಕುಮಾರ್ ಆರ್ ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು ಈತನನ್ನು ಚಿಕ್ಕಜೇನಿ ಮೂಲದವನು ಎಂದು ಗುರುತಿಸಲಾಗಿದೆ.
ಬಸ್ನಲ್ಲಿ ಅಧಿಕ ಜನ ತುಂಬಿದ್ದು ತಿರುವಿನಲ್ಲಿ ಚಾಲಕ ಅತಿವೇಗದಲ್ಲಿ ಬಸ್ ಚಲಾಯಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಅದೃಷ್ಟವಶಾತ್ ಮಗು (ಅಂದಾಜು 03 ವರ್ಷ) ವಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ ಕುಮಾರ್ (ಅಂದಾಜು 60 ವರ್ಷ) ಗೆ ತಲೆ ಮತ್ತು ಕೈ ಕಾಲುಗಳಿಗೆ ತೀವ್ರ ಸ್ವರೂಪದ ಪೆಟ್ಟಾಗಿದೆ.
ಗಾಯಾಳು ವ್ಯಕ್ತಿಗೆ ಕೋಡೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ ಮೂಲಕ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ರಿಪ್ಪನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…