ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು ; ಮಳಲಿ ಶ್ರೀಗಳು


ರಿಪ್ಪನ್‌ಪೇಟೆ : ಚಿನ್ನಕ್ಕಿಂತ ಅನ್ನಕ್ಕೆ ಬೆಲೆ ಹೆಚ್ಚು ಏಕೆಂದರೆ ಚಿನ್ನವಿಲ್ಲದೆ ದಿನ ಕಳೆಯಬಹುದು ಆದರೆ ಅನ್ನವಿಲ್ಲದೆ ದಿನ ಕಳೆಯಲು ಸಾದ್ಯವಿಲ್ಲ ಎಂದು ಮಳಲಿಮಠದ ಶ್ರೀ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.


ಪಟ್ಟಣ ಸಮೀಪವಿರುವ ಗವಟೂರು ಹೊಳೆಸಿದ್ಧೇಶ್ವರ ದೇವಸ್ಥಾನ ಸಮಿತಿಯವರು ಆಯೋಜಿಸಿದ್ದ ಧರ್ಮ ಸಮಾರಂಭದ ಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿ, ಸಾವಿರ ಜನ ಇದ್ದರೂ ಸಾವನ್ನ ನಿಲ್ಲಿಸಲಾಗದು, ಕೋಟಿ ಸಂಪಾದಿಸಿದರೂ ನೋಟು ತಿನ್ನಲಾಗದು ಆದ್ದರಿಂದ ಬದುಕಿ ಬಾಳಲು ಪ್ರತಿಯೊಬ್ಬರಿಗೂ ಅನ್ನ ಎಷ್ಟು ಮುಖ್ಯವೋ ಅಷ್ಟೇ ಒಳ್ಳೆಯ ಮಾತು ಮುಖ್ಯ. ಒಳ್ಳೆಯತನ ಇದೊಂದೇ ನಾವು ಉಳಿಸಿಟ್ಟು ಹೋಗುವ ಬೆಲೆಕಟ್ಟಲಾಗದ ಆಸ್ತಿ ಹಾಗಾಗಿ ಶ್ರೀ ಜಗದ್ಗುರು ರೇಣುಕಾಚಾರ್ಯರು ಆದೇಶಿಸಿದ್ದು ಧರ್ಮ ಒಂದೇ ಶಾಶ್ವತ ಆದ್ದರಿಂದ ಧರ್ಮದ ತಳಹದಿಯಮೇಲೆ ಜೀವನವನ್ನು ನಡೆಸುವದು ಬಹುಮುಖ್ಯವೆಂದು ತಿಳಿಸಿದರು.


ಇಂದಿನ ಆಧುನಿಕ ತಂತ್ರಜ್ಞಾನ ಮತ್ತು ಒತ್ತಡದ ನಡುವೆ ನೆಮ್ಮದಿಯ ಬದುಕು ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕೆ ಜಗತ್ತಿನಲ್ಲಿ ಜ್ಞಾನ ಕೊಡುವ ಶ್ರೀಗುರು,ಅನ್ನ ನೀಡುವ ರೈತ ಪ್ರತಿಯೊಬ್ಬರಿಗೂ ಅವಶ್ಯ. ಗುರು-ಹಿರಿಯರಿಗೆ ತಂದೆತಾಯಿಗಳಿಗೆ ಗೌರವಿಸಿ ನಡೆದುಕೊಂಡು ಬಾಳುವುದೇ ನಿಜವಾದ ಜೀವನವೆಂದು ತಿಳಿಸಿದರು.


ದೇವಸ್ಥಾನ ಸಮಿತಿಯ ದುಂಡರಾಜಪ್ಪ ಗೌಡ, ಕೃಷ್ಣಯ್ಯ ಶೆಟ್ಟಿ, ರಾಘವೇಂದ್ರ, ಉಲ್ಲಾಸ್, ಯೋಗೇಂದ್ರ, ವಸಂತ, ಶಂಕರ್, ಮಲ್ಲಿಕಾರ್ಜುನ, ಪಾರ್ವತಿ, ಸುಮಾ, ಬಿಎಸ್ಎನ್ಎಲ್ ಶ್ರೀಧರ್ ಇನ್ನಿತರರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

12 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

15 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

16 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

18 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

18 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago