Categories: Hosanagara News

ಜನ ಬಲವೋ ಹಣ ಬಲವೋ ಎಂಬುದು ಫಲಿತಾಂಶದಲ್ಲಿ ಗೊತ್ತಾಗಲಿದೆ ; ರಂಜಿತಾರಾಧ ಗೋಪಾಲಕೃಷ್ಣ


ಹೊಸನಗರ: ಮೇ 10ರಂದು ನಡೆಯಲಿರುವ ಚುನಾವಣೆಯಲ್ಲಿ ಸಾಗರ ಕ್ಷೇತ್ರದಲ್ಲಿ ಜನಬಲ ಹಾಗೂ ಹಣ ಬಲದ ಮೇಲೆ ನಡೆಯಲಿದ್ದು ಜನ ಬೆಂಬಲವಿರುವ ಬೇಳೂರು ಗೋಪಾಲಕೃಷ್ಣರವರು ಜಯಗೊಳಿಸಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಪತ್ನಿ ರಂಜಿತಾರಾಧ ಬೇಳೂರು ಗೋಪಾಲಕೃಷ್ಣರವರು ಹೇಳಿದರು.

ಪಟ್ಟಣದ ಗೇರುಬೀಜ ಫ್ಯಾಕ್ಟರಿಗೆ ಭೇಟಿ ನೀಡಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವ ನೌಕರ ವರ್ಗದವರಿಂದ ಮತಯಾಚಿಸಿ ಸುದ್ಧಿಗಾರರೊಂದಿಗೆ ಮಾತನಾಡಿ, ಹೊಸನಗರ-ಸಾಗರ ಕ್ಷೇತ್ರದಲ್ಲಿ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಹರಿದು ಬರುತ್ತಿದೆ. ನಮ್ಮ ಪ್ರಯತ್ನ ನಾವು ಮಾಡುತ್ತಿದ್ದೇವೆ ಉಳಿದಿರುವುದು ದೇವರಿಗೆ ಬಿಟ್ಟಿದ್ದು ನಾವು ಹಣ ಬಲದಿಂದ ಚುನಾವಣೆ ಎದುರಿಸುತ್ತಿಲ್ಲ ನಮ್ಮ ಪತಿಯವರು 10 ವರ್ಷಗಳಿಂದ ಜನ ಸೇವೆ ಮಾಡಿದ್ದಾರೆ ಜನಗಳಿಗೆ ಸಮೀಪವಿದ್ದಾರೆ ಸುಖ-ದುಃಖಗಳಲ್ಲಿ ಜನರೊಂದಿಗೆ ಬೆರೆತ್ತಿದ್ದಾರೆ ಇದಕ್ಕಾಗಿಯೇ ಜನಸಾಗರವೇ ಹರಿದು ಬರುತ್ತಿದ್ದೆ ಕೇವಲ ರಸ್ತೆ ಮಾಡಿಕೊಂಡು ಅಭಿವೃದ್ಧಿ ಮಾಡಿದ್ದೇವೆ ಎಂದರೇ ಸಾಲದು ಜನರಿಗಾಗಿ ಜನ ಸೇವಕರಾಗಿ ಜನರೊಂದಿಗೆ ಇದ್ದರೇ ಮಾತ್ರ ಜನ ಸೇವಕ ನೆನಸಿಕೊಳ್ಳುತ್ತಾರೆ ಕೇವಲ ರಸ್ತೆ-ರಸ್ತೆ ಎಂದರೆ ಅದೇ ಅಭಿವೃದ್ಧಿ ಮಾಡಿದ್ದೇವೆ ಈ ಕಾಲದಲ್ಲಿ ಯಾರು ನಂಬುವುದಿಲ್ಲ ಅಭಿವೃದ್ಧಿ ಮಂತ್ರವೂ ಲೆಕ್ಕಕ್ಕೆ ಬರುವುದಿಲ್ಲ ಎಂದರು ಮೇ 13ರಂದು ಜನಸೇವಕನಿಗೆ ಜಯವೋ ಅಥವಾ ಹಣವಂತರಿಗೆ ಜಯವೋ ತಿಳಿಯಲಿದೆ ಎಂದರು.


ಈ ಮತಯಾಚನೆಯ ಸಮಯದಲ್ಲಿ ಪಟ್ಟಣ ಪಂಚಾಯತಿ ಸದಸ್ಯೆ ಸಿಂಥಿಯಾ ಶರಾವೋ, ಶಾಹೀನ, ಅಶ್ವಿನಿಕುಮಾರ್, ಚಂದ್ರಕಲಾ ನಾಗರಾಜ್, ತಾಲ್ಲೂಕು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಬೇಳೂರು ಅಭಿಮಾನಿ ಬಳಗದ ಸಣ್ಣಕ್ಕಿ ಮಂಜು, ಜಯನಗರ ಗೋಪಿ, ಗಗ್ಗ ಬಸವರಾಜ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

Arecanut Today Price | ಏಪ್ರಿಲ್ 28ರ ಅಡಿಕೆ ರೇಟ್

ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 hours ago

ಮತದಾನ ಪ್ರತಿಯೊಬ್ಬ ಪ್ರಜೆಯ ಆದ್ಯ ಕರ್ತವ್ಯ : ರಶ್ಮಿ

ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…

4 hours ago

Election Boycott |  ಲೋಕಸಭಾ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಾಗಲು ಗ್ರಾಮಸ್ಥರು ! ಕಾರಣವೇನು ?

ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…

5 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

11 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

22 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

1 day ago